Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...