Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...