Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...