Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...