Homeಕರ್ನಾಟಕರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

- Advertisement -
- Advertisement -

| ನೀಲಗಾರ |

ಸಮ್ಮಿಶ್ರ ಸರ್ಕಾರವು ಅಸಿತ್ವಕ್ಕೆ ಬಂದ ಮೇಲೆ ‘ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ’ ಈ ಮಾತನ್ನು ಮೊದಲು ಹೇಳಿದ ದೊಡ್ಡ ನಾಯಕ ಯಾರು? ನಿಮ್ಮ ಉತ್ತರ ತಪ್ಪಾಗಿದೆ. ಅದು ಯಡಿಯೂರಪ್ಪನವರಲ್ಲ. ಬದಲಿಗೆ ಸಿದ್ದರಾಮಯ್ಯ, ಧರ್ಮಸ್ಥಳದ ಶಾಂತಿವನದಲ್ಲಿ. ಹ್ಞಾಂ, ಈಗ ನೆನಪಾಯಿತೇ? ಹೌದು, ಆ ಹೇಳಿಕೆ ಖಾಸಗಿ ಹೇಳಿಕೆಯಾಗಿತ್ತು. ಅವರನ್ನು ಭೇಟಿ ಮಾಡಲು ಹೋಗಿದ್ದವರಲ್ಲಿ ಯಾರೋ ರೆಕಾರ್ಡ್ ಮಾಡಿ ಬಹಿರಂಗಗೊಳಿಸಿದ್ದರು. ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿದರೆ, ಸ್ವತಃ ಸಿದ್ದರಾಮಯ್ಯನವರೇ ವಿಡಿಯೋ ಬಹಿರಂಗಗೊಳ್ಳಲಿ ಎಂದು ಬಯಸಿದ್ದರೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೇ 23ರಂದು ಫಲಿತಾಂಶ ಘೋಷಣೆಯಾದ ತಕ್ಷಣ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಜೊತೆ ಸೇರಿ ಸರ್ಕಾರ ಉರುಳಿಸುತ್ತಾರೆ ಎಂಬ ಏಕೈಕ ತೀರ್ಮಾನಕ್ಕೆ ಮೊದಲೇ ಬಾರದಿರಲಿ ಎಂಬ ಕಾರಣಕ್ಕೆ ಇದನ್ನು ಹೇಳಬೇಕಾಯಿತು. ಮತ್ತೆ ಶಾಂತಿವನಕ್ಕೇ ಮರಳುವುದಾದಲ್ಲಿ, ಮರುದಿನ ಡಿಸ್ಚಾರ್ಜ್ ಆಗಲಿದ್ದ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಒಂದು ಹಿಂಡು ಶಾಸಕರನ್ನು ತುಂಬಿಸಿಕೊಂಡು ಹೋಗಿ, ಮಾಧ್ಯಮದವರ ಗಮನಕ್ಕೆ ಬರುವಂತೆ ಭೇಟಿ ಏರ್ಪಡಿಸಿದ್ದು ಇದೇ ರಮೇಶ್ ಜಾರಕಿಹೊಳಿ!

ಹಾಗಾಗಿ ಸ್ವಲ್ಪ ಸಾವಧಾನವಾಗಿ ಲೆಕ್ಕ ಹಾಕಿದರೆ ಅರ್ಥವಾಗುವ ಒಂದು ಸಂಗತಿಯೆಂದರೆ ಸರ್ಕಾರ ಉರುಳಬೇಕು ಎಂದು ಬಯಸುತ್ತಿರುವವರಲ್ಲಿ ಯಡಿಯೂರಪ್ಪನವರು ಒಬ್ಬರೇ ಇಲ್ಲ. ಹಾಗಾಗಿಯೇ ನಿನ್ನೆ ಹುಬ್ಬಳ್ಳಿಯಲ್ಲಿ ತಮ್ಮ ಪಕ್ಷದ ಮುಖಂಡರಿಗೆ ಯಡಿಯೂರಪ್ಪನವರು ‘ನಿಮಗೆ ಕೈ ಮುಗಿಯುತ್ತೇನೆ, ಸಮ್ಮಿಶ್ರ ಸರ್ಕಾರ ಬೀಳಲಿದೆ ಬಿಜೆಪಿ ಸರ್ಕಾರ ಬರಲಿದೆ ಎಂದು ದಯವಿಟ್ಟು ಹೇಳಬೇಡಿ’ ಎಂದಿದ್ದಾರೆ. ಇದರ ಹಿಂದೆ ಮುಂದಿನ ರಾಜ್ಯ ಸರ್ಕಾರದ ಭವಿಷ್ಯಕ್ಕೆ ಸಂಬಂಧಿಸಿದ ಮತ್ತೊಂದು ಸಂಗತಿಯಿದೆ.

ಒಟ್ಟಾರೆ ಹೇಳಬೇಕೆಂದರೆ ನಾಲ್ಕು ಅಂಶಗಳ ಮೇಲೆ ರಾಜ್ಯ ಸರ್ಕಾರದ ಮುಂದಿನ ಭವಿಷ್ಯ ನಿಂತಿದೆ. ಕಾಮನ್ ಸೆನ್ಸ್‍ಗೆ ಹೊಳೆಯುವ ವಿಷಯವೆಂದರೆ, ಮೇ 23ರಂದು ಬಿಜೆಪಿಗೆ ಕೇಂದ್ರದಲ್ಲಿ ಬಹುಮತ ಬಂದರೆ, ರಾಜ್ಯದ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಗತ್ಯವಿರುವಷ್ಟು ಜನರು ಬೇಲಿ ಹಾರುತ್ತಾರೆ; ಸರ್ಕಾರ ಉರುಳುತ್ತದೆ. ಆದರೆ, ಬಿಜೆಪಿಗೆ ಬಹುಮತ ಬರಲ್ಲ ಎಂದು ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ (ಬಹುಶಃ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರಾಗಬಹುದಾದ) ರಾಂ ಮಾಧವ್ ಅವರೇ ಹೇಳಿದ್ದಾರೆ. ಎನ್‍ಡಿಎಗೂ ಬಹುಮತ ಬಾರದೇ, ಬಿಜೆಪಿ ಅಧಿಕಾರ ಹಂಚಿಕೊಂಡರೂ, ಪ್ರಧಾನಿಯಾಗಿ ಮೋದಿಯೇ ಆಗುತ್ತಾರಾ ಹೇಳುವುದು ಕಷ್ಟ.

ಆದರೆ, ಈ ಫಲಿತಾಂಶದಲ್ಲಿ ಜೆಡಿಎಸ್‍ಗೆ ಹಾಗೂ ದೇವೇಗೌಡರಿಗೆ ಪ್ರಮುಖ ಪಾತ್ರ ಇರುವಂತಹ ಸನ್ನಿವೇಶ ಉಂಟಾಗುವ ಸಾಧ್ಯತೆ ಇದೆ. ‘ಫೆಡರಲ್ ಫ್ರಂಟ್’ ಮಾಡಲು ಹೊರಟಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಗಲೇ ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಮಾತಾಡಿರುವ ವರದಿ ಬಂದಿದೆ. ದೇವೇಗೌಡರ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲೇಬೇಕಾದ ಅನಿವಾರ್ಯತೆ ರಾಹುಲ್‍ಗಾಂಧಿಗೆ ಬರಬಹುದು. ಆಗ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ರಾಜ್ಯ ನಾಯರಿಗೆ ತಾಕೀತು ಮಾಡುವ ಸಾಧ್ಯತೆ ಹೆಚ್ಚು.

ಎರಡನೆಯ ಅಂಶ, ಬಿಜೆಪಿಯೊಳಗಿನ ಸಮಸ್ಯೆಗಳು. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿಯನ್ನು ಯಡಿಯೂರಪ್ಪ ತೆಗೆದುಕೊಂಡಿರಬಹುದಾದರೂ, ಸುಪಾರಿಯ ಶುಲ್ಕ ಮುಖ್ಯಮಂತ್ರಿಯ ಪದವಿಯೇ ಆಗಿರಬೇಕೆಂದೇನಿಲ್ಲ. ಅದಕ್ಕೆ ಬೇಕಾದ ತಯಾರಿಯನ್ನು ಬಿ.ಎಲ್.ಸಂತೋಷ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯಡಿಯೂರಪ್ಪನವರೇಕೆ ಅಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾರೆ? ಬಿಜೆಪಿಯೊಳಗಿನ ಸಮಸ್ಯೆಗಳು ತೀವ್ರವಾದರೆ, ಆಡಳಿತಾರೂಢ ಮೈತ್ರಿಕೂಟದ ಶಾಸಕರೇಕೆ ಬೇಲಿ ಹಾರುತ್ತಾರೆ? ಹಾಗಾಗಿ ಬಿಜೆಪಿಯೊಳಗೆ ಒಗ್ಗಟ್ಟು ಹೇಗಿದೆ ಎಂಬುದು ಮತ್ತು ಕೇಂದ್ರದಲ್ಲಾಗುವ ಬದಲಾವಣೆಯ ಸ್ವರೂಪ ಅದರ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದೂ ಸಹಾ ಬಿಜೆಪಿಯ ನಡೆಗಳನ್ನು ನಿರ್ಧರಿಸಲಿದೆ.

ಇನ್ನು ಮೂರನೆಯ ಅಂಶ, ಕಾಂಗ್ರೆಸ್‍ನೊಳಗಿನ ಸಮಸ್ಯೆಗಳು. ಅದರಲ್ಲೂ ಸಿದ್ದರಾಮಯ್ಯನವರು ಉರುಳಿಸಲಿರುವ ದಾಳ. ಸುಮಲತಾರ ಹಿಂದೆ ಸಿದ್ದರಾಮಯ್ಯ ಎಷ್ಟರಮಟ್ಟಿಗೆ ಇದ್ದರು ಎಂಬುದು ಬಹಿರಂಗಕ್ಕೆ ಬಂದಿಲ್ಲವಾದರೂ, ಸುಮಲತಾ ಹಿಂದೆ ಸಿದ್ದರಾಮಯ್ಯನವರ ಆಪ್ತರು ಇದ್ದುದಂತೂ ನಿಜ. ಅದಕ್ಕಿಂತ ಆಶ್ಚರ್ಯಕರ ಸುದ್ದಿಯೊಂದು ಹೈದ್ರಾಬಾದ್ ಕರ್ನಾಟಕದಲ್ಲಿ ಓಡಾಡುತ್ತಿದೆ. ಅದೇನೆಂದರೆ, ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಹಿಂದೆ ಇದ್ದುದು ಸಿದ್ದರಾಮಯ್ಯ ಎಂದು. ಖರ್ಗೆಯವರ ಪರ, ದೇವೇಗೌಡರ ಪರ, ಪ್ರಜ್ವಲ್ ಪರ ಮತ್ತು ನಿಖಿಲ್ ಪರ ಸಿದ್ದರಾಮಯ್ಯನವರು ಬ್ಯಾಟಿಂಗ್ ಮಾಡಿ ಪ್ರಚಾರದಲ್ಲಿದ್ದರೆಂಬುದು ನಿಜವೇ. ಆದರೆ, ಈ ಹಿಂದಿನ ಬಾಗಿಲಿನ ಕಾರ್ಯಾಚರಣೆಗಳನ್ನು ಅವರು ಮಾಡಿದ್ದಾರಾ ಇಲ್ಲವಾ ಎಂಬುದು ಹೆಚ್ಚಿನವರಿಗೆ ಸ್ಪಷ್ಟವಿಲ್ಲ. ಸಿದ್ದರಾಮಯ್ಯನವರು ಅಂತಹ ಸ್ಟ್ರಾಟೆಜಿಸ್ಟ್ ಅಲ್ಲವೆಂದೂ, ಮುಖ್ಯಮಂತ್ರಿಯಾದ ನಂತರ ಅವರ ರಾಜಕೀಯ ಚಾಣಾಕ್ಷತೆ ವಿಪರೀತ ಹೆಚ್ಚಾಗಿದೆಯೆಂದೂ ಎರಡೂ ಬಗೆಯ ಅಭಿಪ್ರಾಯಗಳು ಚಾಲ್ತಿಯಲ್ಲಿವೆ. ಒಂದಂತೂ ನಿಜ. ಕಾಂಗ್ರೆಸ್‍ನ ರಾಜ್ಯ ನಾಯಕರ ಪೈಕಿ ಈ ಸರ್ಕಾರ ಉಳಿಯದಿದ್ದರೆ ಒಳ್ಳೆಯದೆಂದು ಬಯಸುವವರಲ್ಲಿ ಸಿದ್ದರಾಮಯ್ಯನವರಿದ್ದಾರೆ.

ನಾಲ್ಕನೆಯ ಅಂಶ ಉಪಚುನಾವಣೆ ಫಲಿತಾಂಶ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವ ದಿನವೇ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶವೂ ಹೊರಬರಲಿದೆ. ಒಂದು ವೇಳೆ ಕೃಷ್ಣ ಭೈರೇಗೌಡ ಮತ್ತು ಈಶ್ವರ ಖಂಡ್ರೆ ಗೆದ್ದರೆ (ಇಬ್ಬರೂ ಗೆಲ್ಲುವ ಸಾಧ್ಯತೆಗಳಿವೆ) ಬ್ಯಾಟರಾಯನಪುರ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಾಗುತ್ತದೆ. ಈ ನಾಲ್ಕೂ ಸಹಾ ಹಿಂದೆ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು. ಇವುಗಳಲ್ಲಿ ಎಷ್ಟನ್ನು ಬಿಜೆಪಿ ಕಿತ್ತುಕೊಳ್ಳುತ್ತದೆ ಎಂಬುದು, ಸರ್ಕಾರ ಉರುಳಿಸಲು ಅದಕ್ಕೆ ಅಷ್ಟು ಅನುಕೂಲ ಮಾಡಿಕೊಡುತ್ತದೆ. ಹಾಗಾಗಿ ಇದಕ್ಕೂ ಮಹತ್ವವಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಎಲ್ಲದರ ಮೇಲೂ ಪರಿಣಾಮ ಬೀರಲಿದೆ ಎನ್ನುವುದೇನೋ ವಾಸ್ತವ. ಆದರೆ, ಆ ಫಲಿತಾಂಶವು ಈ ನಾಲ್ಕು ಅಂಶಗಳ ಮೂಲಕವೇ ಆಪರೇಟ್ ಆಗುವುದರೊಂದಿಗೆ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ? 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...