Homeಕರ್ನಾಟಕರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

- Advertisement -
- Advertisement -

| ನೀಲಗಾರ |

ಸಮ್ಮಿಶ್ರ ಸರ್ಕಾರವು ಅಸಿತ್ವಕ್ಕೆ ಬಂದ ಮೇಲೆ ‘ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ’ ಈ ಮಾತನ್ನು ಮೊದಲು ಹೇಳಿದ ದೊಡ್ಡ ನಾಯಕ ಯಾರು? ನಿಮ್ಮ ಉತ್ತರ ತಪ್ಪಾಗಿದೆ. ಅದು ಯಡಿಯೂರಪ್ಪನವರಲ್ಲ. ಬದಲಿಗೆ ಸಿದ್ದರಾಮಯ್ಯ, ಧರ್ಮಸ್ಥಳದ ಶಾಂತಿವನದಲ್ಲಿ. ಹ್ಞಾಂ, ಈಗ ನೆನಪಾಯಿತೇ? ಹೌದು, ಆ ಹೇಳಿಕೆ ಖಾಸಗಿ ಹೇಳಿಕೆಯಾಗಿತ್ತು. ಅವರನ್ನು ಭೇಟಿ ಮಾಡಲು ಹೋಗಿದ್ದವರಲ್ಲಿ ಯಾರೋ ರೆಕಾರ್ಡ್ ಮಾಡಿ ಬಹಿರಂಗಗೊಳಿಸಿದ್ದರು. ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿದರೆ, ಸ್ವತಃ ಸಿದ್ದರಾಮಯ್ಯನವರೇ ವಿಡಿಯೋ ಬಹಿರಂಗಗೊಳ್ಳಲಿ ಎಂದು ಬಯಸಿದ್ದರೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೇ 23ರಂದು ಫಲಿತಾಂಶ ಘೋಷಣೆಯಾದ ತಕ್ಷಣ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಜೊತೆ ಸೇರಿ ಸರ್ಕಾರ ಉರುಳಿಸುತ್ತಾರೆ ಎಂಬ ಏಕೈಕ ತೀರ್ಮಾನಕ್ಕೆ ಮೊದಲೇ ಬಾರದಿರಲಿ ಎಂಬ ಕಾರಣಕ್ಕೆ ಇದನ್ನು ಹೇಳಬೇಕಾಯಿತು. ಮತ್ತೆ ಶಾಂತಿವನಕ್ಕೇ ಮರಳುವುದಾದಲ್ಲಿ, ಮರುದಿನ ಡಿಸ್ಚಾರ್ಜ್ ಆಗಲಿದ್ದ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಒಂದು ಹಿಂಡು ಶಾಸಕರನ್ನು ತುಂಬಿಸಿಕೊಂಡು ಹೋಗಿ, ಮಾಧ್ಯಮದವರ ಗಮನಕ್ಕೆ ಬರುವಂತೆ ಭೇಟಿ ಏರ್ಪಡಿಸಿದ್ದು ಇದೇ ರಮೇಶ್ ಜಾರಕಿಹೊಳಿ!

ಹಾಗಾಗಿ ಸ್ವಲ್ಪ ಸಾವಧಾನವಾಗಿ ಲೆಕ್ಕ ಹಾಕಿದರೆ ಅರ್ಥವಾಗುವ ಒಂದು ಸಂಗತಿಯೆಂದರೆ ಸರ್ಕಾರ ಉರುಳಬೇಕು ಎಂದು ಬಯಸುತ್ತಿರುವವರಲ್ಲಿ ಯಡಿಯೂರಪ್ಪನವರು ಒಬ್ಬರೇ ಇಲ್ಲ. ಹಾಗಾಗಿಯೇ ನಿನ್ನೆ ಹುಬ್ಬಳ್ಳಿಯಲ್ಲಿ ತಮ್ಮ ಪಕ್ಷದ ಮುಖಂಡರಿಗೆ ಯಡಿಯೂರಪ್ಪನವರು ‘ನಿಮಗೆ ಕೈ ಮುಗಿಯುತ್ತೇನೆ, ಸಮ್ಮಿಶ್ರ ಸರ್ಕಾರ ಬೀಳಲಿದೆ ಬಿಜೆಪಿ ಸರ್ಕಾರ ಬರಲಿದೆ ಎಂದು ದಯವಿಟ್ಟು ಹೇಳಬೇಡಿ’ ಎಂದಿದ್ದಾರೆ. ಇದರ ಹಿಂದೆ ಮುಂದಿನ ರಾಜ್ಯ ಸರ್ಕಾರದ ಭವಿಷ್ಯಕ್ಕೆ ಸಂಬಂಧಿಸಿದ ಮತ್ತೊಂದು ಸಂಗತಿಯಿದೆ.

ಒಟ್ಟಾರೆ ಹೇಳಬೇಕೆಂದರೆ ನಾಲ್ಕು ಅಂಶಗಳ ಮೇಲೆ ರಾಜ್ಯ ಸರ್ಕಾರದ ಮುಂದಿನ ಭವಿಷ್ಯ ನಿಂತಿದೆ. ಕಾಮನ್ ಸೆನ್ಸ್‍ಗೆ ಹೊಳೆಯುವ ವಿಷಯವೆಂದರೆ, ಮೇ 23ರಂದು ಬಿಜೆಪಿಗೆ ಕೇಂದ್ರದಲ್ಲಿ ಬಹುಮತ ಬಂದರೆ, ರಾಜ್ಯದ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಗತ್ಯವಿರುವಷ್ಟು ಜನರು ಬೇಲಿ ಹಾರುತ್ತಾರೆ; ಸರ್ಕಾರ ಉರುಳುತ್ತದೆ. ಆದರೆ, ಬಿಜೆಪಿಗೆ ಬಹುಮತ ಬರಲ್ಲ ಎಂದು ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ (ಬಹುಶಃ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರಾಗಬಹುದಾದ) ರಾಂ ಮಾಧವ್ ಅವರೇ ಹೇಳಿದ್ದಾರೆ. ಎನ್‍ಡಿಎಗೂ ಬಹುಮತ ಬಾರದೇ, ಬಿಜೆಪಿ ಅಧಿಕಾರ ಹಂಚಿಕೊಂಡರೂ, ಪ್ರಧಾನಿಯಾಗಿ ಮೋದಿಯೇ ಆಗುತ್ತಾರಾ ಹೇಳುವುದು ಕಷ್ಟ.

ಆದರೆ, ಈ ಫಲಿತಾಂಶದಲ್ಲಿ ಜೆಡಿಎಸ್‍ಗೆ ಹಾಗೂ ದೇವೇಗೌಡರಿಗೆ ಪ್ರಮುಖ ಪಾತ್ರ ಇರುವಂತಹ ಸನ್ನಿವೇಶ ಉಂಟಾಗುವ ಸಾಧ್ಯತೆ ಇದೆ. ‘ಫೆಡರಲ್ ಫ್ರಂಟ್’ ಮಾಡಲು ಹೊರಟಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಗಲೇ ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಮಾತಾಡಿರುವ ವರದಿ ಬಂದಿದೆ. ದೇವೇಗೌಡರ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲೇಬೇಕಾದ ಅನಿವಾರ್ಯತೆ ರಾಹುಲ್‍ಗಾಂಧಿಗೆ ಬರಬಹುದು. ಆಗ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ರಾಜ್ಯ ನಾಯರಿಗೆ ತಾಕೀತು ಮಾಡುವ ಸಾಧ್ಯತೆ ಹೆಚ್ಚು.

ಎರಡನೆಯ ಅಂಶ, ಬಿಜೆಪಿಯೊಳಗಿನ ಸಮಸ್ಯೆಗಳು. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿಯನ್ನು ಯಡಿಯೂರಪ್ಪ ತೆಗೆದುಕೊಂಡಿರಬಹುದಾದರೂ, ಸುಪಾರಿಯ ಶುಲ್ಕ ಮುಖ್ಯಮಂತ್ರಿಯ ಪದವಿಯೇ ಆಗಿರಬೇಕೆಂದೇನಿಲ್ಲ. ಅದಕ್ಕೆ ಬೇಕಾದ ತಯಾರಿಯನ್ನು ಬಿ.ಎಲ್.ಸಂತೋಷ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯಡಿಯೂರಪ್ಪನವರೇಕೆ ಅಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾರೆ? ಬಿಜೆಪಿಯೊಳಗಿನ ಸಮಸ್ಯೆಗಳು ತೀವ್ರವಾದರೆ, ಆಡಳಿತಾರೂಢ ಮೈತ್ರಿಕೂಟದ ಶಾಸಕರೇಕೆ ಬೇಲಿ ಹಾರುತ್ತಾರೆ? ಹಾಗಾಗಿ ಬಿಜೆಪಿಯೊಳಗೆ ಒಗ್ಗಟ್ಟು ಹೇಗಿದೆ ಎಂಬುದು ಮತ್ತು ಕೇಂದ್ರದಲ್ಲಾಗುವ ಬದಲಾವಣೆಯ ಸ್ವರೂಪ ಅದರ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದೂ ಸಹಾ ಬಿಜೆಪಿಯ ನಡೆಗಳನ್ನು ನಿರ್ಧರಿಸಲಿದೆ.

ಇನ್ನು ಮೂರನೆಯ ಅಂಶ, ಕಾಂಗ್ರೆಸ್‍ನೊಳಗಿನ ಸಮಸ್ಯೆಗಳು. ಅದರಲ್ಲೂ ಸಿದ್ದರಾಮಯ್ಯನವರು ಉರುಳಿಸಲಿರುವ ದಾಳ. ಸುಮಲತಾರ ಹಿಂದೆ ಸಿದ್ದರಾಮಯ್ಯ ಎಷ್ಟರಮಟ್ಟಿಗೆ ಇದ್ದರು ಎಂಬುದು ಬಹಿರಂಗಕ್ಕೆ ಬಂದಿಲ್ಲವಾದರೂ, ಸುಮಲತಾ ಹಿಂದೆ ಸಿದ್ದರಾಮಯ್ಯನವರ ಆಪ್ತರು ಇದ್ದುದಂತೂ ನಿಜ. ಅದಕ್ಕಿಂತ ಆಶ್ಚರ್ಯಕರ ಸುದ್ದಿಯೊಂದು ಹೈದ್ರಾಬಾದ್ ಕರ್ನಾಟಕದಲ್ಲಿ ಓಡಾಡುತ್ತಿದೆ. ಅದೇನೆಂದರೆ, ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಹಿಂದೆ ಇದ್ದುದು ಸಿದ್ದರಾಮಯ್ಯ ಎಂದು. ಖರ್ಗೆಯವರ ಪರ, ದೇವೇಗೌಡರ ಪರ, ಪ್ರಜ್ವಲ್ ಪರ ಮತ್ತು ನಿಖಿಲ್ ಪರ ಸಿದ್ದರಾಮಯ್ಯನವರು ಬ್ಯಾಟಿಂಗ್ ಮಾಡಿ ಪ್ರಚಾರದಲ್ಲಿದ್ದರೆಂಬುದು ನಿಜವೇ. ಆದರೆ, ಈ ಹಿಂದಿನ ಬಾಗಿಲಿನ ಕಾರ್ಯಾಚರಣೆಗಳನ್ನು ಅವರು ಮಾಡಿದ್ದಾರಾ ಇಲ್ಲವಾ ಎಂಬುದು ಹೆಚ್ಚಿನವರಿಗೆ ಸ್ಪಷ್ಟವಿಲ್ಲ. ಸಿದ್ದರಾಮಯ್ಯನವರು ಅಂತಹ ಸ್ಟ್ರಾಟೆಜಿಸ್ಟ್ ಅಲ್ಲವೆಂದೂ, ಮುಖ್ಯಮಂತ್ರಿಯಾದ ನಂತರ ಅವರ ರಾಜಕೀಯ ಚಾಣಾಕ್ಷತೆ ವಿಪರೀತ ಹೆಚ್ಚಾಗಿದೆಯೆಂದೂ ಎರಡೂ ಬಗೆಯ ಅಭಿಪ್ರಾಯಗಳು ಚಾಲ್ತಿಯಲ್ಲಿವೆ. ಒಂದಂತೂ ನಿಜ. ಕಾಂಗ್ರೆಸ್‍ನ ರಾಜ್ಯ ನಾಯಕರ ಪೈಕಿ ಈ ಸರ್ಕಾರ ಉಳಿಯದಿದ್ದರೆ ಒಳ್ಳೆಯದೆಂದು ಬಯಸುವವರಲ್ಲಿ ಸಿದ್ದರಾಮಯ್ಯನವರಿದ್ದಾರೆ.

ನಾಲ್ಕನೆಯ ಅಂಶ ಉಪಚುನಾವಣೆ ಫಲಿತಾಂಶ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವ ದಿನವೇ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶವೂ ಹೊರಬರಲಿದೆ. ಒಂದು ವೇಳೆ ಕೃಷ್ಣ ಭೈರೇಗೌಡ ಮತ್ತು ಈಶ್ವರ ಖಂಡ್ರೆ ಗೆದ್ದರೆ (ಇಬ್ಬರೂ ಗೆಲ್ಲುವ ಸಾಧ್ಯತೆಗಳಿವೆ) ಬ್ಯಾಟರಾಯನಪುರ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಾಗುತ್ತದೆ. ಈ ನಾಲ್ಕೂ ಸಹಾ ಹಿಂದೆ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು. ಇವುಗಳಲ್ಲಿ ಎಷ್ಟನ್ನು ಬಿಜೆಪಿ ಕಿತ್ತುಕೊಳ್ಳುತ್ತದೆ ಎಂಬುದು, ಸರ್ಕಾರ ಉರುಳಿಸಲು ಅದಕ್ಕೆ ಅಷ್ಟು ಅನುಕೂಲ ಮಾಡಿಕೊಡುತ್ತದೆ. ಹಾಗಾಗಿ ಇದಕ್ಕೂ ಮಹತ್ವವಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಎಲ್ಲದರ ಮೇಲೂ ಪರಿಣಾಮ ಬೀರಲಿದೆ ಎನ್ನುವುದೇನೋ ವಾಸ್ತವ. ಆದರೆ, ಆ ಫಲಿತಾಂಶವು ಈ ನಾಲ್ಕು ಅಂಶಗಳ ಮೂಲಕವೇ ಆಪರೇಟ್ ಆಗುವುದರೊಂದಿಗೆ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ? 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...