Homeಕರ್ನಾಟಕರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

- Advertisement -
- Advertisement -

| ನೀಲಗಾರ |

ಸಮ್ಮಿಶ್ರ ಸರ್ಕಾರವು ಅಸಿತ್ವಕ್ಕೆ ಬಂದ ಮೇಲೆ ‘ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ’ ಈ ಮಾತನ್ನು ಮೊದಲು ಹೇಳಿದ ದೊಡ್ಡ ನಾಯಕ ಯಾರು? ನಿಮ್ಮ ಉತ್ತರ ತಪ್ಪಾಗಿದೆ. ಅದು ಯಡಿಯೂರಪ್ಪನವರಲ್ಲ. ಬದಲಿಗೆ ಸಿದ್ದರಾಮಯ್ಯ, ಧರ್ಮಸ್ಥಳದ ಶಾಂತಿವನದಲ್ಲಿ. ಹ್ಞಾಂ, ಈಗ ನೆನಪಾಯಿತೇ? ಹೌದು, ಆ ಹೇಳಿಕೆ ಖಾಸಗಿ ಹೇಳಿಕೆಯಾಗಿತ್ತು. ಅವರನ್ನು ಭೇಟಿ ಮಾಡಲು ಹೋಗಿದ್ದವರಲ್ಲಿ ಯಾರೋ ರೆಕಾರ್ಡ್ ಮಾಡಿ ಬಹಿರಂಗಗೊಳಿಸಿದ್ದರು. ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿದರೆ, ಸ್ವತಃ ಸಿದ್ದರಾಮಯ್ಯನವರೇ ವಿಡಿಯೋ ಬಹಿರಂಗಗೊಳ್ಳಲಿ ಎಂದು ಬಯಸಿದ್ದರೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೇ 23ರಂದು ಫಲಿತಾಂಶ ಘೋಷಣೆಯಾದ ತಕ್ಷಣ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಜೊತೆ ಸೇರಿ ಸರ್ಕಾರ ಉರುಳಿಸುತ್ತಾರೆ ಎಂಬ ಏಕೈಕ ತೀರ್ಮಾನಕ್ಕೆ ಮೊದಲೇ ಬಾರದಿರಲಿ ಎಂಬ ಕಾರಣಕ್ಕೆ ಇದನ್ನು ಹೇಳಬೇಕಾಯಿತು. ಮತ್ತೆ ಶಾಂತಿವನಕ್ಕೇ ಮರಳುವುದಾದಲ್ಲಿ, ಮರುದಿನ ಡಿಸ್ಚಾರ್ಜ್ ಆಗಲಿದ್ದ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಒಂದು ಹಿಂಡು ಶಾಸಕರನ್ನು ತುಂಬಿಸಿಕೊಂಡು ಹೋಗಿ, ಮಾಧ್ಯಮದವರ ಗಮನಕ್ಕೆ ಬರುವಂತೆ ಭೇಟಿ ಏರ್ಪಡಿಸಿದ್ದು ಇದೇ ರಮೇಶ್ ಜಾರಕಿಹೊಳಿ!

ಹಾಗಾಗಿ ಸ್ವಲ್ಪ ಸಾವಧಾನವಾಗಿ ಲೆಕ್ಕ ಹಾಕಿದರೆ ಅರ್ಥವಾಗುವ ಒಂದು ಸಂಗತಿಯೆಂದರೆ ಸರ್ಕಾರ ಉರುಳಬೇಕು ಎಂದು ಬಯಸುತ್ತಿರುವವರಲ್ಲಿ ಯಡಿಯೂರಪ್ಪನವರು ಒಬ್ಬರೇ ಇಲ್ಲ. ಹಾಗಾಗಿಯೇ ನಿನ್ನೆ ಹುಬ್ಬಳ್ಳಿಯಲ್ಲಿ ತಮ್ಮ ಪಕ್ಷದ ಮುಖಂಡರಿಗೆ ಯಡಿಯೂರಪ್ಪನವರು ‘ನಿಮಗೆ ಕೈ ಮುಗಿಯುತ್ತೇನೆ, ಸಮ್ಮಿಶ್ರ ಸರ್ಕಾರ ಬೀಳಲಿದೆ ಬಿಜೆಪಿ ಸರ್ಕಾರ ಬರಲಿದೆ ಎಂದು ದಯವಿಟ್ಟು ಹೇಳಬೇಡಿ’ ಎಂದಿದ್ದಾರೆ. ಇದರ ಹಿಂದೆ ಮುಂದಿನ ರಾಜ್ಯ ಸರ್ಕಾರದ ಭವಿಷ್ಯಕ್ಕೆ ಸಂಬಂಧಿಸಿದ ಮತ್ತೊಂದು ಸಂಗತಿಯಿದೆ.

ಒಟ್ಟಾರೆ ಹೇಳಬೇಕೆಂದರೆ ನಾಲ್ಕು ಅಂಶಗಳ ಮೇಲೆ ರಾಜ್ಯ ಸರ್ಕಾರದ ಮುಂದಿನ ಭವಿಷ್ಯ ನಿಂತಿದೆ. ಕಾಮನ್ ಸೆನ್ಸ್‍ಗೆ ಹೊಳೆಯುವ ವಿಷಯವೆಂದರೆ, ಮೇ 23ರಂದು ಬಿಜೆಪಿಗೆ ಕೇಂದ್ರದಲ್ಲಿ ಬಹುಮತ ಬಂದರೆ, ರಾಜ್ಯದ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಗತ್ಯವಿರುವಷ್ಟು ಜನರು ಬೇಲಿ ಹಾರುತ್ತಾರೆ; ಸರ್ಕಾರ ಉರುಳುತ್ತದೆ. ಆದರೆ, ಬಿಜೆಪಿಗೆ ಬಹುಮತ ಬರಲ್ಲ ಎಂದು ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ (ಬಹುಶಃ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರಾಗಬಹುದಾದ) ರಾಂ ಮಾಧವ್ ಅವರೇ ಹೇಳಿದ್ದಾರೆ. ಎನ್‍ಡಿಎಗೂ ಬಹುಮತ ಬಾರದೇ, ಬಿಜೆಪಿ ಅಧಿಕಾರ ಹಂಚಿಕೊಂಡರೂ, ಪ್ರಧಾನಿಯಾಗಿ ಮೋದಿಯೇ ಆಗುತ್ತಾರಾ ಹೇಳುವುದು ಕಷ್ಟ.

ಆದರೆ, ಈ ಫಲಿತಾಂಶದಲ್ಲಿ ಜೆಡಿಎಸ್‍ಗೆ ಹಾಗೂ ದೇವೇಗೌಡರಿಗೆ ಪ್ರಮುಖ ಪಾತ್ರ ಇರುವಂತಹ ಸನ್ನಿವೇಶ ಉಂಟಾಗುವ ಸಾಧ್ಯತೆ ಇದೆ. ‘ಫೆಡರಲ್ ಫ್ರಂಟ್’ ಮಾಡಲು ಹೊರಟಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಗಲೇ ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಮಾತಾಡಿರುವ ವರದಿ ಬಂದಿದೆ. ದೇವೇಗೌಡರ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲೇಬೇಕಾದ ಅನಿವಾರ್ಯತೆ ರಾಹುಲ್‍ಗಾಂಧಿಗೆ ಬರಬಹುದು. ಆಗ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ರಾಜ್ಯ ನಾಯರಿಗೆ ತಾಕೀತು ಮಾಡುವ ಸಾಧ್ಯತೆ ಹೆಚ್ಚು.

ಎರಡನೆಯ ಅಂಶ, ಬಿಜೆಪಿಯೊಳಗಿನ ಸಮಸ್ಯೆಗಳು. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿಯನ್ನು ಯಡಿಯೂರಪ್ಪ ತೆಗೆದುಕೊಂಡಿರಬಹುದಾದರೂ, ಸುಪಾರಿಯ ಶುಲ್ಕ ಮುಖ್ಯಮಂತ್ರಿಯ ಪದವಿಯೇ ಆಗಿರಬೇಕೆಂದೇನಿಲ್ಲ. ಅದಕ್ಕೆ ಬೇಕಾದ ತಯಾರಿಯನ್ನು ಬಿ.ಎಲ್.ಸಂತೋಷ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯಡಿಯೂರಪ್ಪನವರೇಕೆ ಅಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾರೆ? ಬಿಜೆಪಿಯೊಳಗಿನ ಸಮಸ್ಯೆಗಳು ತೀವ್ರವಾದರೆ, ಆಡಳಿತಾರೂಢ ಮೈತ್ರಿಕೂಟದ ಶಾಸಕರೇಕೆ ಬೇಲಿ ಹಾರುತ್ತಾರೆ? ಹಾಗಾಗಿ ಬಿಜೆಪಿಯೊಳಗೆ ಒಗ್ಗಟ್ಟು ಹೇಗಿದೆ ಎಂಬುದು ಮತ್ತು ಕೇಂದ್ರದಲ್ಲಾಗುವ ಬದಲಾವಣೆಯ ಸ್ವರೂಪ ಅದರ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದೂ ಸಹಾ ಬಿಜೆಪಿಯ ನಡೆಗಳನ್ನು ನಿರ್ಧರಿಸಲಿದೆ.

ಇನ್ನು ಮೂರನೆಯ ಅಂಶ, ಕಾಂಗ್ರೆಸ್‍ನೊಳಗಿನ ಸಮಸ್ಯೆಗಳು. ಅದರಲ್ಲೂ ಸಿದ್ದರಾಮಯ್ಯನವರು ಉರುಳಿಸಲಿರುವ ದಾಳ. ಸುಮಲತಾರ ಹಿಂದೆ ಸಿದ್ದರಾಮಯ್ಯ ಎಷ್ಟರಮಟ್ಟಿಗೆ ಇದ್ದರು ಎಂಬುದು ಬಹಿರಂಗಕ್ಕೆ ಬಂದಿಲ್ಲವಾದರೂ, ಸುಮಲತಾ ಹಿಂದೆ ಸಿದ್ದರಾಮಯ್ಯನವರ ಆಪ್ತರು ಇದ್ದುದಂತೂ ನಿಜ. ಅದಕ್ಕಿಂತ ಆಶ್ಚರ್ಯಕರ ಸುದ್ದಿಯೊಂದು ಹೈದ್ರಾಬಾದ್ ಕರ್ನಾಟಕದಲ್ಲಿ ಓಡಾಡುತ್ತಿದೆ. ಅದೇನೆಂದರೆ, ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಹಿಂದೆ ಇದ್ದುದು ಸಿದ್ದರಾಮಯ್ಯ ಎಂದು. ಖರ್ಗೆಯವರ ಪರ, ದೇವೇಗೌಡರ ಪರ, ಪ್ರಜ್ವಲ್ ಪರ ಮತ್ತು ನಿಖಿಲ್ ಪರ ಸಿದ್ದರಾಮಯ್ಯನವರು ಬ್ಯಾಟಿಂಗ್ ಮಾಡಿ ಪ್ರಚಾರದಲ್ಲಿದ್ದರೆಂಬುದು ನಿಜವೇ. ಆದರೆ, ಈ ಹಿಂದಿನ ಬಾಗಿಲಿನ ಕಾರ್ಯಾಚರಣೆಗಳನ್ನು ಅವರು ಮಾಡಿದ್ದಾರಾ ಇಲ್ಲವಾ ಎಂಬುದು ಹೆಚ್ಚಿನವರಿಗೆ ಸ್ಪಷ್ಟವಿಲ್ಲ. ಸಿದ್ದರಾಮಯ್ಯನವರು ಅಂತಹ ಸ್ಟ್ರಾಟೆಜಿಸ್ಟ್ ಅಲ್ಲವೆಂದೂ, ಮುಖ್ಯಮಂತ್ರಿಯಾದ ನಂತರ ಅವರ ರಾಜಕೀಯ ಚಾಣಾಕ್ಷತೆ ವಿಪರೀತ ಹೆಚ್ಚಾಗಿದೆಯೆಂದೂ ಎರಡೂ ಬಗೆಯ ಅಭಿಪ್ರಾಯಗಳು ಚಾಲ್ತಿಯಲ್ಲಿವೆ. ಒಂದಂತೂ ನಿಜ. ಕಾಂಗ್ರೆಸ್‍ನ ರಾಜ್ಯ ನಾಯಕರ ಪೈಕಿ ಈ ಸರ್ಕಾರ ಉಳಿಯದಿದ್ದರೆ ಒಳ್ಳೆಯದೆಂದು ಬಯಸುವವರಲ್ಲಿ ಸಿದ್ದರಾಮಯ್ಯನವರಿದ್ದಾರೆ.

ನಾಲ್ಕನೆಯ ಅಂಶ ಉಪಚುನಾವಣೆ ಫಲಿತಾಂಶ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವ ದಿನವೇ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶವೂ ಹೊರಬರಲಿದೆ. ಒಂದು ವೇಳೆ ಕೃಷ್ಣ ಭೈರೇಗೌಡ ಮತ್ತು ಈಶ್ವರ ಖಂಡ್ರೆ ಗೆದ್ದರೆ (ಇಬ್ಬರೂ ಗೆಲ್ಲುವ ಸಾಧ್ಯತೆಗಳಿವೆ) ಬ್ಯಾಟರಾಯನಪುರ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಾಗುತ್ತದೆ. ಈ ನಾಲ್ಕೂ ಸಹಾ ಹಿಂದೆ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು. ಇವುಗಳಲ್ಲಿ ಎಷ್ಟನ್ನು ಬಿಜೆಪಿ ಕಿತ್ತುಕೊಳ್ಳುತ್ತದೆ ಎಂಬುದು, ಸರ್ಕಾರ ಉರುಳಿಸಲು ಅದಕ್ಕೆ ಅಷ್ಟು ಅನುಕೂಲ ಮಾಡಿಕೊಡುತ್ತದೆ. ಹಾಗಾಗಿ ಇದಕ್ಕೂ ಮಹತ್ವವಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಎಲ್ಲದರ ಮೇಲೂ ಪರಿಣಾಮ ಬೀರಲಿದೆ ಎನ್ನುವುದೇನೋ ವಾಸ್ತವ. ಆದರೆ, ಆ ಫಲಿತಾಂಶವು ಈ ನಾಲ್ಕು ಅಂಶಗಳ ಮೂಲಕವೇ ಆಪರೇಟ್ ಆಗುವುದರೊಂದಿಗೆ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ? 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...