Homeಕರ್ನಾಟಕರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

- Advertisement -
- Advertisement -

| ನೀಲಗಾರ |

ಸಮ್ಮಿಶ್ರ ಸರ್ಕಾರವು ಅಸಿತ್ವಕ್ಕೆ ಬಂದ ಮೇಲೆ ‘ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ’ ಈ ಮಾತನ್ನು ಮೊದಲು ಹೇಳಿದ ದೊಡ್ಡ ನಾಯಕ ಯಾರು? ನಿಮ್ಮ ಉತ್ತರ ತಪ್ಪಾಗಿದೆ. ಅದು ಯಡಿಯೂರಪ್ಪನವರಲ್ಲ. ಬದಲಿಗೆ ಸಿದ್ದರಾಮಯ್ಯ, ಧರ್ಮಸ್ಥಳದ ಶಾಂತಿವನದಲ್ಲಿ. ಹ್ಞಾಂ, ಈಗ ನೆನಪಾಯಿತೇ? ಹೌದು, ಆ ಹೇಳಿಕೆ ಖಾಸಗಿ ಹೇಳಿಕೆಯಾಗಿತ್ತು. ಅವರನ್ನು ಭೇಟಿ ಮಾಡಲು ಹೋಗಿದ್ದವರಲ್ಲಿ ಯಾರೋ ರೆಕಾರ್ಡ್ ಮಾಡಿ ಬಹಿರಂಗಗೊಳಿಸಿದ್ದರು. ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿದರೆ, ಸ್ವತಃ ಸಿದ್ದರಾಮಯ್ಯನವರೇ ವಿಡಿಯೋ ಬಹಿರಂಗಗೊಳ್ಳಲಿ ಎಂದು ಬಯಸಿದ್ದರೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೇ 23ರಂದು ಫಲಿತಾಂಶ ಘೋಷಣೆಯಾದ ತಕ್ಷಣ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಜೊತೆ ಸೇರಿ ಸರ್ಕಾರ ಉರುಳಿಸುತ್ತಾರೆ ಎಂಬ ಏಕೈಕ ತೀರ್ಮಾನಕ್ಕೆ ಮೊದಲೇ ಬಾರದಿರಲಿ ಎಂಬ ಕಾರಣಕ್ಕೆ ಇದನ್ನು ಹೇಳಬೇಕಾಯಿತು. ಮತ್ತೆ ಶಾಂತಿವನಕ್ಕೇ ಮರಳುವುದಾದಲ್ಲಿ, ಮರುದಿನ ಡಿಸ್ಚಾರ್ಜ್ ಆಗಲಿದ್ದ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಒಂದು ಹಿಂಡು ಶಾಸಕರನ್ನು ತುಂಬಿಸಿಕೊಂಡು ಹೋಗಿ, ಮಾಧ್ಯಮದವರ ಗಮನಕ್ಕೆ ಬರುವಂತೆ ಭೇಟಿ ಏರ್ಪಡಿಸಿದ್ದು ಇದೇ ರಮೇಶ್ ಜಾರಕಿಹೊಳಿ!

ಹಾಗಾಗಿ ಸ್ವಲ್ಪ ಸಾವಧಾನವಾಗಿ ಲೆಕ್ಕ ಹಾಕಿದರೆ ಅರ್ಥವಾಗುವ ಒಂದು ಸಂಗತಿಯೆಂದರೆ ಸರ್ಕಾರ ಉರುಳಬೇಕು ಎಂದು ಬಯಸುತ್ತಿರುವವರಲ್ಲಿ ಯಡಿಯೂರಪ್ಪನವರು ಒಬ್ಬರೇ ಇಲ್ಲ. ಹಾಗಾಗಿಯೇ ನಿನ್ನೆ ಹುಬ್ಬಳ್ಳಿಯಲ್ಲಿ ತಮ್ಮ ಪಕ್ಷದ ಮುಖಂಡರಿಗೆ ಯಡಿಯೂರಪ್ಪನವರು ‘ನಿಮಗೆ ಕೈ ಮುಗಿಯುತ್ತೇನೆ, ಸಮ್ಮಿಶ್ರ ಸರ್ಕಾರ ಬೀಳಲಿದೆ ಬಿಜೆಪಿ ಸರ್ಕಾರ ಬರಲಿದೆ ಎಂದು ದಯವಿಟ್ಟು ಹೇಳಬೇಡಿ’ ಎಂದಿದ್ದಾರೆ. ಇದರ ಹಿಂದೆ ಮುಂದಿನ ರಾಜ್ಯ ಸರ್ಕಾರದ ಭವಿಷ್ಯಕ್ಕೆ ಸಂಬಂಧಿಸಿದ ಮತ್ತೊಂದು ಸಂಗತಿಯಿದೆ.

ಒಟ್ಟಾರೆ ಹೇಳಬೇಕೆಂದರೆ ನಾಲ್ಕು ಅಂಶಗಳ ಮೇಲೆ ರಾಜ್ಯ ಸರ್ಕಾರದ ಮುಂದಿನ ಭವಿಷ್ಯ ನಿಂತಿದೆ. ಕಾಮನ್ ಸೆನ್ಸ್‍ಗೆ ಹೊಳೆಯುವ ವಿಷಯವೆಂದರೆ, ಮೇ 23ರಂದು ಬಿಜೆಪಿಗೆ ಕೇಂದ್ರದಲ್ಲಿ ಬಹುಮತ ಬಂದರೆ, ರಾಜ್ಯದ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಗತ್ಯವಿರುವಷ್ಟು ಜನರು ಬೇಲಿ ಹಾರುತ್ತಾರೆ; ಸರ್ಕಾರ ಉರುಳುತ್ತದೆ. ಆದರೆ, ಬಿಜೆಪಿಗೆ ಬಹುಮತ ಬರಲ್ಲ ಎಂದು ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ (ಬಹುಶಃ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರಾಗಬಹುದಾದ) ರಾಂ ಮಾಧವ್ ಅವರೇ ಹೇಳಿದ್ದಾರೆ. ಎನ್‍ಡಿಎಗೂ ಬಹುಮತ ಬಾರದೇ, ಬಿಜೆಪಿ ಅಧಿಕಾರ ಹಂಚಿಕೊಂಡರೂ, ಪ್ರಧಾನಿಯಾಗಿ ಮೋದಿಯೇ ಆಗುತ್ತಾರಾ ಹೇಳುವುದು ಕಷ್ಟ.

ಆದರೆ, ಈ ಫಲಿತಾಂಶದಲ್ಲಿ ಜೆಡಿಎಸ್‍ಗೆ ಹಾಗೂ ದೇವೇಗೌಡರಿಗೆ ಪ್ರಮುಖ ಪಾತ್ರ ಇರುವಂತಹ ಸನ್ನಿವೇಶ ಉಂಟಾಗುವ ಸಾಧ್ಯತೆ ಇದೆ. ‘ಫೆಡರಲ್ ಫ್ರಂಟ್’ ಮಾಡಲು ಹೊರಟಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಗಲೇ ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಮಾತಾಡಿರುವ ವರದಿ ಬಂದಿದೆ. ದೇವೇಗೌಡರ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲೇಬೇಕಾದ ಅನಿವಾರ್ಯತೆ ರಾಹುಲ್‍ಗಾಂಧಿಗೆ ಬರಬಹುದು. ಆಗ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ರಾಜ್ಯ ನಾಯರಿಗೆ ತಾಕೀತು ಮಾಡುವ ಸಾಧ್ಯತೆ ಹೆಚ್ಚು.

ಎರಡನೆಯ ಅಂಶ, ಬಿಜೆಪಿಯೊಳಗಿನ ಸಮಸ್ಯೆಗಳು. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿಯನ್ನು ಯಡಿಯೂರಪ್ಪ ತೆಗೆದುಕೊಂಡಿರಬಹುದಾದರೂ, ಸುಪಾರಿಯ ಶುಲ್ಕ ಮುಖ್ಯಮಂತ್ರಿಯ ಪದವಿಯೇ ಆಗಿರಬೇಕೆಂದೇನಿಲ್ಲ. ಅದಕ್ಕೆ ಬೇಕಾದ ತಯಾರಿಯನ್ನು ಬಿ.ಎಲ್.ಸಂತೋಷ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯಡಿಯೂರಪ್ಪನವರೇಕೆ ಅಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾರೆ? ಬಿಜೆಪಿಯೊಳಗಿನ ಸಮಸ್ಯೆಗಳು ತೀವ್ರವಾದರೆ, ಆಡಳಿತಾರೂಢ ಮೈತ್ರಿಕೂಟದ ಶಾಸಕರೇಕೆ ಬೇಲಿ ಹಾರುತ್ತಾರೆ? ಹಾಗಾಗಿ ಬಿಜೆಪಿಯೊಳಗೆ ಒಗ್ಗಟ್ಟು ಹೇಗಿದೆ ಎಂಬುದು ಮತ್ತು ಕೇಂದ್ರದಲ್ಲಾಗುವ ಬದಲಾವಣೆಯ ಸ್ವರೂಪ ಅದರ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದೂ ಸಹಾ ಬಿಜೆಪಿಯ ನಡೆಗಳನ್ನು ನಿರ್ಧರಿಸಲಿದೆ.

ಇನ್ನು ಮೂರನೆಯ ಅಂಶ, ಕಾಂಗ್ರೆಸ್‍ನೊಳಗಿನ ಸಮಸ್ಯೆಗಳು. ಅದರಲ್ಲೂ ಸಿದ್ದರಾಮಯ್ಯನವರು ಉರುಳಿಸಲಿರುವ ದಾಳ. ಸುಮಲತಾರ ಹಿಂದೆ ಸಿದ್ದರಾಮಯ್ಯ ಎಷ್ಟರಮಟ್ಟಿಗೆ ಇದ್ದರು ಎಂಬುದು ಬಹಿರಂಗಕ್ಕೆ ಬಂದಿಲ್ಲವಾದರೂ, ಸುಮಲತಾ ಹಿಂದೆ ಸಿದ್ದರಾಮಯ್ಯನವರ ಆಪ್ತರು ಇದ್ದುದಂತೂ ನಿಜ. ಅದಕ್ಕಿಂತ ಆಶ್ಚರ್ಯಕರ ಸುದ್ದಿಯೊಂದು ಹೈದ್ರಾಬಾದ್ ಕರ್ನಾಟಕದಲ್ಲಿ ಓಡಾಡುತ್ತಿದೆ. ಅದೇನೆಂದರೆ, ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಹಿಂದೆ ಇದ್ದುದು ಸಿದ್ದರಾಮಯ್ಯ ಎಂದು. ಖರ್ಗೆಯವರ ಪರ, ದೇವೇಗೌಡರ ಪರ, ಪ್ರಜ್ವಲ್ ಪರ ಮತ್ತು ನಿಖಿಲ್ ಪರ ಸಿದ್ದರಾಮಯ್ಯನವರು ಬ್ಯಾಟಿಂಗ್ ಮಾಡಿ ಪ್ರಚಾರದಲ್ಲಿದ್ದರೆಂಬುದು ನಿಜವೇ. ಆದರೆ, ಈ ಹಿಂದಿನ ಬಾಗಿಲಿನ ಕಾರ್ಯಾಚರಣೆಗಳನ್ನು ಅವರು ಮಾಡಿದ್ದಾರಾ ಇಲ್ಲವಾ ಎಂಬುದು ಹೆಚ್ಚಿನವರಿಗೆ ಸ್ಪಷ್ಟವಿಲ್ಲ. ಸಿದ್ದರಾಮಯ್ಯನವರು ಅಂತಹ ಸ್ಟ್ರಾಟೆಜಿಸ್ಟ್ ಅಲ್ಲವೆಂದೂ, ಮುಖ್ಯಮಂತ್ರಿಯಾದ ನಂತರ ಅವರ ರಾಜಕೀಯ ಚಾಣಾಕ್ಷತೆ ವಿಪರೀತ ಹೆಚ್ಚಾಗಿದೆಯೆಂದೂ ಎರಡೂ ಬಗೆಯ ಅಭಿಪ್ರಾಯಗಳು ಚಾಲ್ತಿಯಲ್ಲಿವೆ. ಒಂದಂತೂ ನಿಜ. ಕಾಂಗ್ರೆಸ್‍ನ ರಾಜ್ಯ ನಾಯಕರ ಪೈಕಿ ಈ ಸರ್ಕಾರ ಉಳಿಯದಿದ್ದರೆ ಒಳ್ಳೆಯದೆಂದು ಬಯಸುವವರಲ್ಲಿ ಸಿದ್ದರಾಮಯ್ಯನವರಿದ್ದಾರೆ.

ನಾಲ್ಕನೆಯ ಅಂಶ ಉಪಚುನಾವಣೆ ಫಲಿತಾಂಶ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವ ದಿನವೇ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶವೂ ಹೊರಬರಲಿದೆ. ಒಂದು ವೇಳೆ ಕೃಷ್ಣ ಭೈರೇಗೌಡ ಮತ್ತು ಈಶ್ವರ ಖಂಡ್ರೆ ಗೆದ್ದರೆ (ಇಬ್ಬರೂ ಗೆಲ್ಲುವ ಸಾಧ್ಯತೆಗಳಿವೆ) ಬ್ಯಾಟರಾಯನಪುರ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಾಗುತ್ತದೆ. ಈ ನಾಲ್ಕೂ ಸಹಾ ಹಿಂದೆ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು. ಇವುಗಳಲ್ಲಿ ಎಷ್ಟನ್ನು ಬಿಜೆಪಿ ಕಿತ್ತುಕೊಳ್ಳುತ್ತದೆ ಎಂಬುದು, ಸರ್ಕಾರ ಉರುಳಿಸಲು ಅದಕ್ಕೆ ಅಷ್ಟು ಅನುಕೂಲ ಮಾಡಿಕೊಡುತ್ತದೆ. ಹಾಗಾಗಿ ಇದಕ್ಕೂ ಮಹತ್ವವಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಎಲ್ಲದರ ಮೇಲೂ ಪರಿಣಾಮ ಬೀರಲಿದೆ ಎನ್ನುವುದೇನೋ ವಾಸ್ತವ. ಆದರೆ, ಆ ಫಲಿತಾಂಶವು ಈ ನಾಲ್ಕು ಅಂಶಗಳ ಮೂಲಕವೇ ಆಪರೇಟ್ ಆಗುವುದರೊಂದಿಗೆ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ? 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...