Homeಕರ್ನಾಟಕರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

- Advertisement -
- Advertisement -

| ನೀಲಗಾರ |

ಸಮ್ಮಿಶ್ರ ಸರ್ಕಾರವು ಅಸಿತ್ವಕ್ಕೆ ಬಂದ ಮೇಲೆ ‘ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ’ ಈ ಮಾತನ್ನು ಮೊದಲು ಹೇಳಿದ ದೊಡ್ಡ ನಾಯಕ ಯಾರು? ನಿಮ್ಮ ಉತ್ತರ ತಪ್ಪಾಗಿದೆ. ಅದು ಯಡಿಯೂರಪ್ಪನವರಲ್ಲ. ಬದಲಿಗೆ ಸಿದ್ದರಾಮಯ್ಯ, ಧರ್ಮಸ್ಥಳದ ಶಾಂತಿವನದಲ್ಲಿ. ಹ್ಞಾಂ, ಈಗ ನೆನಪಾಯಿತೇ? ಹೌದು, ಆ ಹೇಳಿಕೆ ಖಾಸಗಿ ಹೇಳಿಕೆಯಾಗಿತ್ತು. ಅವರನ್ನು ಭೇಟಿ ಮಾಡಲು ಹೋಗಿದ್ದವರಲ್ಲಿ ಯಾರೋ ರೆಕಾರ್ಡ್ ಮಾಡಿ ಬಹಿರಂಗಗೊಳಿಸಿದ್ದರು. ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿದರೆ, ಸ್ವತಃ ಸಿದ್ದರಾಮಯ್ಯನವರೇ ವಿಡಿಯೋ ಬಹಿರಂಗಗೊಳ್ಳಲಿ ಎಂದು ಬಯಸಿದ್ದರೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೇ 23ರಂದು ಫಲಿತಾಂಶ ಘೋಷಣೆಯಾದ ತಕ್ಷಣ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಜೊತೆ ಸೇರಿ ಸರ್ಕಾರ ಉರುಳಿಸುತ್ತಾರೆ ಎಂಬ ಏಕೈಕ ತೀರ್ಮಾನಕ್ಕೆ ಮೊದಲೇ ಬಾರದಿರಲಿ ಎಂಬ ಕಾರಣಕ್ಕೆ ಇದನ್ನು ಹೇಳಬೇಕಾಯಿತು. ಮತ್ತೆ ಶಾಂತಿವನಕ್ಕೇ ಮರಳುವುದಾದಲ್ಲಿ, ಮರುದಿನ ಡಿಸ್ಚಾರ್ಜ್ ಆಗಲಿದ್ದ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಒಂದು ಹಿಂಡು ಶಾಸಕರನ್ನು ತುಂಬಿಸಿಕೊಂಡು ಹೋಗಿ, ಮಾಧ್ಯಮದವರ ಗಮನಕ್ಕೆ ಬರುವಂತೆ ಭೇಟಿ ಏರ್ಪಡಿಸಿದ್ದು ಇದೇ ರಮೇಶ್ ಜಾರಕಿಹೊಳಿ!

ಹಾಗಾಗಿ ಸ್ವಲ್ಪ ಸಾವಧಾನವಾಗಿ ಲೆಕ್ಕ ಹಾಕಿದರೆ ಅರ್ಥವಾಗುವ ಒಂದು ಸಂಗತಿಯೆಂದರೆ ಸರ್ಕಾರ ಉರುಳಬೇಕು ಎಂದು ಬಯಸುತ್ತಿರುವವರಲ್ಲಿ ಯಡಿಯೂರಪ್ಪನವರು ಒಬ್ಬರೇ ಇಲ್ಲ. ಹಾಗಾಗಿಯೇ ನಿನ್ನೆ ಹುಬ್ಬಳ್ಳಿಯಲ್ಲಿ ತಮ್ಮ ಪಕ್ಷದ ಮುಖಂಡರಿಗೆ ಯಡಿಯೂರಪ್ಪನವರು ‘ನಿಮಗೆ ಕೈ ಮುಗಿಯುತ್ತೇನೆ, ಸಮ್ಮಿಶ್ರ ಸರ್ಕಾರ ಬೀಳಲಿದೆ ಬಿಜೆಪಿ ಸರ್ಕಾರ ಬರಲಿದೆ ಎಂದು ದಯವಿಟ್ಟು ಹೇಳಬೇಡಿ’ ಎಂದಿದ್ದಾರೆ. ಇದರ ಹಿಂದೆ ಮುಂದಿನ ರಾಜ್ಯ ಸರ್ಕಾರದ ಭವಿಷ್ಯಕ್ಕೆ ಸಂಬಂಧಿಸಿದ ಮತ್ತೊಂದು ಸಂಗತಿಯಿದೆ.

ಒಟ್ಟಾರೆ ಹೇಳಬೇಕೆಂದರೆ ನಾಲ್ಕು ಅಂಶಗಳ ಮೇಲೆ ರಾಜ್ಯ ಸರ್ಕಾರದ ಮುಂದಿನ ಭವಿಷ್ಯ ನಿಂತಿದೆ. ಕಾಮನ್ ಸೆನ್ಸ್‍ಗೆ ಹೊಳೆಯುವ ವಿಷಯವೆಂದರೆ, ಮೇ 23ರಂದು ಬಿಜೆಪಿಗೆ ಕೇಂದ್ರದಲ್ಲಿ ಬಹುಮತ ಬಂದರೆ, ರಾಜ್ಯದ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಗತ್ಯವಿರುವಷ್ಟು ಜನರು ಬೇಲಿ ಹಾರುತ್ತಾರೆ; ಸರ್ಕಾರ ಉರುಳುತ್ತದೆ. ಆದರೆ, ಬಿಜೆಪಿಗೆ ಬಹುಮತ ಬರಲ್ಲ ಎಂದು ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ (ಬಹುಶಃ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರಾಗಬಹುದಾದ) ರಾಂ ಮಾಧವ್ ಅವರೇ ಹೇಳಿದ್ದಾರೆ. ಎನ್‍ಡಿಎಗೂ ಬಹುಮತ ಬಾರದೇ, ಬಿಜೆಪಿ ಅಧಿಕಾರ ಹಂಚಿಕೊಂಡರೂ, ಪ್ರಧಾನಿಯಾಗಿ ಮೋದಿಯೇ ಆಗುತ್ತಾರಾ ಹೇಳುವುದು ಕಷ್ಟ.

ಆದರೆ, ಈ ಫಲಿತಾಂಶದಲ್ಲಿ ಜೆಡಿಎಸ್‍ಗೆ ಹಾಗೂ ದೇವೇಗೌಡರಿಗೆ ಪ್ರಮುಖ ಪಾತ್ರ ಇರುವಂತಹ ಸನ್ನಿವೇಶ ಉಂಟಾಗುವ ಸಾಧ್ಯತೆ ಇದೆ. ‘ಫೆಡರಲ್ ಫ್ರಂಟ್’ ಮಾಡಲು ಹೊರಟಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಗಲೇ ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಮಾತಾಡಿರುವ ವರದಿ ಬಂದಿದೆ. ದೇವೇಗೌಡರ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲೇಬೇಕಾದ ಅನಿವಾರ್ಯತೆ ರಾಹುಲ್‍ಗಾಂಧಿಗೆ ಬರಬಹುದು. ಆಗ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ರಾಜ್ಯ ನಾಯರಿಗೆ ತಾಕೀತು ಮಾಡುವ ಸಾಧ್ಯತೆ ಹೆಚ್ಚು.

ಎರಡನೆಯ ಅಂಶ, ಬಿಜೆಪಿಯೊಳಗಿನ ಸಮಸ್ಯೆಗಳು. ಸಮ್ಮಿಶ್ರ ಸರ್ಕಾರ ಬೀಳಿಸುವ ಸುಪಾರಿಯನ್ನು ಯಡಿಯೂರಪ್ಪ ತೆಗೆದುಕೊಂಡಿರಬಹುದಾದರೂ, ಸುಪಾರಿಯ ಶುಲ್ಕ ಮುಖ್ಯಮಂತ್ರಿಯ ಪದವಿಯೇ ಆಗಿರಬೇಕೆಂದೇನಿಲ್ಲ. ಅದಕ್ಕೆ ಬೇಕಾದ ತಯಾರಿಯನ್ನು ಬಿ.ಎಲ್.ಸಂತೋಷ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯಡಿಯೂರಪ್ಪನವರೇಕೆ ಅಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾರೆ? ಬಿಜೆಪಿಯೊಳಗಿನ ಸಮಸ್ಯೆಗಳು ತೀವ್ರವಾದರೆ, ಆಡಳಿತಾರೂಢ ಮೈತ್ರಿಕೂಟದ ಶಾಸಕರೇಕೆ ಬೇಲಿ ಹಾರುತ್ತಾರೆ? ಹಾಗಾಗಿ ಬಿಜೆಪಿಯೊಳಗೆ ಒಗ್ಗಟ್ಟು ಹೇಗಿದೆ ಎಂಬುದು ಮತ್ತು ಕೇಂದ್ರದಲ್ಲಾಗುವ ಬದಲಾವಣೆಯ ಸ್ವರೂಪ ಅದರ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದೂ ಸಹಾ ಬಿಜೆಪಿಯ ನಡೆಗಳನ್ನು ನಿರ್ಧರಿಸಲಿದೆ.

ಇನ್ನು ಮೂರನೆಯ ಅಂಶ, ಕಾಂಗ್ರೆಸ್‍ನೊಳಗಿನ ಸಮಸ್ಯೆಗಳು. ಅದರಲ್ಲೂ ಸಿದ್ದರಾಮಯ್ಯನವರು ಉರುಳಿಸಲಿರುವ ದಾಳ. ಸುಮಲತಾರ ಹಿಂದೆ ಸಿದ್ದರಾಮಯ್ಯ ಎಷ್ಟರಮಟ್ಟಿಗೆ ಇದ್ದರು ಎಂಬುದು ಬಹಿರಂಗಕ್ಕೆ ಬಂದಿಲ್ಲವಾದರೂ, ಸುಮಲತಾ ಹಿಂದೆ ಸಿದ್ದರಾಮಯ್ಯನವರ ಆಪ್ತರು ಇದ್ದುದಂತೂ ನಿಜ. ಅದಕ್ಕಿಂತ ಆಶ್ಚರ್ಯಕರ ಸುದ್ದಿಯೊಂದು ಹೈದ್ರಾಬಾದ್ ಕರ್ನಾಟಕದಲ್ಲಿ ಓಡಾಡುತ್ತಿದೆ. ಅದೇನೆಂದರೆ, ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಹಿಂದೆ ಇದ್ದುದು ಸಿದ್ದರಾಮಯ್ಯ ಎಂದು. ಖರ್ಗೆಯವರ ಪರ, ದೇವೇಗೌಡರ ಪರ, ಪ್ರಜ್ವಲ್ ಪರ ಮತ್ತು ನಿಖಿಲ್ ಪರ ಸಿದ್ದರಾಮಯ್ಯನವರು ಬ್ಯಾಟಿಂಗ್ ಮಾಡಿ ಪ್ರಚಾರದಲ್ಲಿದ್ದರೆಂಬುದು ನಿಜವೇ. ಆದರೆ, ಈ ಹಿಂದಿನ ಬಾಗಿಲಿನ ಕಾರ್ಯಾಚರಣೆಗಳನ್ನು ಅವರು ಮಾಡಿದ್ದಾರಾ ಇಲ್ಲವಾ ಎಂಬುದು ಹೆಚ್ಚಿನವರಿಗೆ ಸ್ಪಷ್ಟವಿಲ್ಲ. ಸಿದ್ದರಾಮಯ್ಯನವರು ಅಂತಹ ಸ್ಟ್ರಾಟೆಜಿಸ್ಟ್ ಅಲ್ಲವೆಂದೂ, ಮುಖ್ಯಮಂತ್ರಿಯಾದ ನಂತರ ಅವರ ರಾಜಕೀಯ ಚಾಣಾಕ್ಷತೆ ವಿಪರೀತ ಹೆಚ್ಚಾಗಿದೆಯೆಂದೂ ಎರಡೂ ಬಗೆಯ ಅಭಿಪ್ರಾಯಗಳು ಚಾಲ್ತಿಯಲ್ಲಿವೆ. ಒಂದಂತೂ ನಿಜ. ಕಾಂಗ್ರೆಸ್‍ನ ರಾಜ್ಯ ನಾಯಕರ ಪೈಕಿ ಈ ಸರ್ಕಾರ ಉಳಿಯದಿದ್ದರೆ ಒಳ್ಳೆಯದೆಂದು ಬಯಸುವವರಲ್ಲಿ ಸಿದ್ದರಾಮಯ್ಯನವರಿದ್ದಾರೆ.

ನಾಲ್ಕನೆಯ ಅಂಶ ಉಪಚುನಾವಣೆ ಫಲಿತಾಂಶ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವ ದಿನವೇ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶವೂ ಹೊರಬರಲಿದೆ. ಒಂದು ವೇಳೆ ಕೃಷ್ಣ ಭೈರೇಗೌಡ ಮತ್ತು ಈಶ್ವರ ಖಂಡ್ರೆ ಗೆದ್ದರೆ (ಇಬ್ಬರೂ ಗೆಲ್ಲುವ ಸಾಧ್ಯತೆಗಳಿವೆ) ಬ್ಯಾಟರಾಯನಪುರ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಾಗುತ್ತದೆ. ಈ ನಾಲ್ಕೂ ಸಹಾ ಹಿಂದೆ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು. ಇವುಗಳಲ್ಲಿ ಎಷ್ಟನ್ನು ಬಿಜೆಪಿ ಕಿತ್ತುಕೊಳ್ಳುತ್ತದೆ ಎಂಬುದು, ಸರ್ಕಾರ ಉರುಳಿಸಲು ಅದಕ್ಕೆ ಅಷ್ಟು ಅನುಕೂಲ ಮಾಡಿಕೊಡುತ್ತದೆ. ಹಾಗಾಗಿ ಇದಕ್ಕೂ ಮಹತ್ವವಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಎಲ್ಲದರ ಮೇಲೂ ಪರಿಣಾಮ ಬೀರಲಿದೆ ಎನ್ನುವುದೇನೋ ವಾಸ್ತವ. ಆದರೆ, ಆ ಫಲಿತಾಂಶವು ಈ ನಾಲ್ಕು ಅಂಶಗಳ ಮೂಲಕವೇ ಆಪರೇಟ್ ಆಗುವುದರೊಂದಿಗೆ ರಾಜ್ಯ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ? 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...