Homeಕರ್ನಾಟಕಕನ್ನಡ ರಾಜ್ಯೋತ್ಸವ: ಒಂದು ವಾರ ’ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ

ಕನ್ನಡ ರಾಜ್ಯೋತ್ಸವ: ಒಂದು ವಾರ ’ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು ಕನ್ನಡಕ್ಕಾಗಿ ನಾವು ಅಭಿಯಾನ ಆರಂಭಿಸಿದೆ. ಇದರ ಅಡಿಯಲ್ಲಿ ಒಂದು ವಾರ ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಅಭಿಯಾನ ನಡೆಯಲಿದೆ ಎಂದು ಸಚಿವ ಸುನೀಲ್ ಕುಮಾರ್‌ ತಿಳಿಸಿದ್ದಾರೆ.

‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ ಅಕ್ಟೋಬರ್‌ 24 ರಿಂದ 30ರ ವರೆಗೆ ನಡೆಯಲಿದೆ. ಈ ವೇಳೆ ರಾಜ್ಯದಲ್ಲಿ ಇರುವ ಕನ್ನಡಿಗರು, ಕನ್ನಡೇತರ ಭಾಷಿಕರು ಪ್ರೀತಿ ಮತ್ತು ಅಭಿಮಾನದಿಂದ ಕನ್ನಡದಲ್ಲಿ ಮಾತನಾಡಬೇಕು. ಆದರೆ, ಇದು ಕಡ್ಡಾಯವಲ್ಲ ಎಂದು ಮಾಹಿತಿ ನೀಡಿದ್ದಾರೆ.

ಒಂದು ವಾರಗಳ ಕಾಲ ಕನ್ನಡಮಯ ವಾತಾವರಣ ಸೃಷ್ಟಿಸಲು ಹಲವು ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಕನ್ನಡದಲ್ಲೇ ಮಾತನಾಡುವುದು, ಕನ್ನಡದಲ್ಲೇ ವ್ಯವಹರಿಸುವುದು,  ಕನ್ನಡೇತರರಿಗೆ ಕನ್ನಡ ಕಲಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

 ಇದನ್ನೂ ಓದಿ: ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಸಲು ಕರೆ ನೀಡಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬಂದಿರುವ ಜನರು ಕನಿಷ್ಠ 100 ಪದಗಳನ್ನು ಕಲಿತು ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಅ. 28 ರಂದು ಒಂದು ಲಕ್ಷ ಕಂಠಗಳಲ್ಲಿ ಒಂದು ಸಾವಿರ ಕಡೆಗಳಲ್ಲಿ ಕನ್ನಡದ ಮೂರು ಹಾಡುಗಳ ಸಾಮೂಹಿಕ ಗಾಯ ನಡೆಸಲಾಗುತ್ತದೆ. ಅನ್ಯಭಾಷೆಯ ಪದಗಳನ್ನು ಒಂದೂ ಬಳಸದೇ ಕನ್ನಡದಲ್ಲಿ ನಿರರ್ಗಳವಾಗಿ ನಾಲ್ಕು ನಿಮಿಷ ಕಾಲ‌ ನಾಡು-ನುಡಿಯ ಪರಂಪರೆ ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಕಳುಹಿಸುವ ಸ್ಫರ್ಧೆ ನಡೆಸಲಾಗುತ್ತದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಅಭಿಯಾನದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಕರ್ನಾಟಕದ ಹಿರಿಮೆ ಬಿಂಬಿಸುವ ನಾಟಕಗಳು, ನೃತ್ಯ, ಸಂಗೀತ ಕಾರ್ಯಕ್ರಮಗಳನ್ನು ಒಳಗೊಂಡ ಕನ್ನಡ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ.


ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...