Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...