Homeಕರ್ನಾಟಕಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

ಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

- Advertisement -
- Advertisement -

ಇಂದು ವಿಶ್ವಾಸಮತದ ಪ್ರಕ್ರಿಯೆ ಪೂರ್ಣಗೊಳ್ಳುವ ಎಲ್ಲ ಸಾಧ್ಯತೆಗಳಿದ್ದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಶುಕ್ರವಾರ ಸ್ಪೀಕರ್ ರಮೇಶಕುಮಾರ್ ಸೇರಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಸೋಮವಾರ ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ಮುಗಿಯಲಿದೆ ಎಂದಿರುವುದನ್ನು ಗಮನಿಸಬೇಕು.

ಕಾಂಗ್ರೆಸ್ ಪಕ್ಷಕ್ಕೆ ಈಗ ಸದನವನ್ನು ಉನ್ನಷ್ಟು ಮುಂದಕ್ಕೆ ಜಗ್ಗುವ ಯಾವ ಇರಾದೆಯೂ ಉಳಿದುಕೊಂಡಿಲ್ಲ. ಆದರೆ ಜೆಡಿಎಸ್ ಪಾಳೆಯಕ್ಕೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠರು ಹೇಗಾದರೂ ಸದನವನ್ನು ಗುರುವಾರದವರೆಗೆ ನಡೆಯುವ ಹಾಗೆ ಮಾಡಿ, ಅಷ್ಟರಲ್ಲಿ ಹಲವು ಅತೃಪ್ತರ ವಿಶ್ವಾಸವನ್ನು ಗಳಿಸಿ ಸರ್ಕಾರ ಉಳಿಸಿಕೊಳ್ಳುವ ಬಯಕೆ ಇದೆ. ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಾದರೂ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ನಿರ್ಧಾರಕ್ಕೆ ಅವರಿಬ್ಬರು ಬಂದಂತಿದೆ.

ಇಂದು ಬರಬಹುದಾದ ಸುಪ್ರಿಂಕೋರ್ಟ್ ತೀರ್ಪು ಅಥವಾ ಸೂಚನೆಯೂ ವಿಶ್ವಾಸಮತ ಇಂದೇ ಆಗಬೇಕೋ ಅಥವಾ ಚರ್ಚೆಗೆ ಅವಕಾಶ ಇನ್ನಷ್ಟು ಸಿಗಬೇಕೋ ಎಂಬುದನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯ ಎತ್ತಿರುವ ಕ್ರಿಯಾಲೋಪದ ಕುರಿತು ಇಂದು ಸ್ಪೀಕರ್ ಪಾಯಿಂಟ್ ಆಫ್ ಆರ್ಡರ್ ನೀಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ತಮ್ಮ ಪಕ್ಷದ ಶಾಸಕರಿಗೆ ವಿಪ್ ನೀಡುವ ತಮ್ಮ ಹಕ್ಕಿಗೆ ಕಳೆದ ವಾರದ ಸುಪ್ರಿಂಕೋರ್ಟ್ ಆದೇಶ ಧಕ್ಕೆ ತಂದಿದೆ ಎಂದು ಗುರುವಾರವೇ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸ್ಪೀಕರ್ ರಮೇಶಕುಮಾರ್ ಅವರಿಗೆ ಗುರುವಾರದವರೆಗೆ ಗ್ರಹಗತಿ ಸರಿಯಿಲ್ಲ, ಅಲ್ಲಿವರೆಗೆ ವಿಶ್ವಾಸಮತ ಮುಂದಕ್ಕೆ ಹೋಗುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸ್ಪೀಕರ್ ಒಪ್ಪಿಲ್ಲವೆಂಬ ಮಾತೂ ಕೇಳಿ ಬರುತ್ತಿದೆ. ಇಂದೇ ವಿಶ್ವಾಸ ಮತಯಾಚನೆ ಪ್ರಕ್ರಿಯೆ ನಡೆಯಬೇಕು ಎಂದು ಇಬ್ಬರು ಪಕ್ಷೇತರ ಶಾಸಕರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದೇ ನಡೆದು ಸುಪ್ರೀಂ ಕೋರ್ಟ್ ಕೂಡ ಇಂದೇ ವಿಶ್ವಾಸಮತ ಮುಗಿಯಲಿ ಎಂದು ಸೂಚಿಸಲೂಬಹುದು.

ಈ ಎಲ್ಲ ಕಾರಣಗಳಿಂದಾಗಿ ಇಂದು ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಬಹುಮತ ಇಲ್ಲದ ಕುಮಾರಸ್ವಾಮಿ ನೇತೃತ್ವದ 14 ತಿಂಗಳ ಸರ್ಕಾರ ಪತನವಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸುವ ಪ್ರಕ್ರಿಯೆಯೂ ಇಂದು ಅಥವಾ ನಾಳೆ ಜರುಗುವುದು ಪಕ್ಕಾ ಆಗಿದೆ. ವಿಪ್ ಮಾರ್ಗದ ಮೂಲಕ, ಅದಾಗದಿದ್ದರೆ ಏನೆಲ್ಲ ಸಾಧ್ಯವೋ ಆ ಮಾರ್ಗ ಬಳಸಿ ಅವರನ್ನೆಲ್ಲ ಅನರ್ಹಗೊಳಿಸಲು ಕಾಯಲಾಗುತ್ತಿದೆ.

ಸದ್ಯ 14 ತಿಂಗಳಿಂದ ಪ್ರತಿಕ್ಷಣವೂ ಮುಖ್ಯಮಂತ್ರಿ ಆಗುವ ಕನಸಿನಲ್ಲೇ ಬಾಳುತ್ತಿರುವ ಯಡಿಯೂರಪ್ಪನವರ ಇಷ್ಟಾರ್ಥ ಕೂಡಿಬರುವ ದಿನ ಹತ್ತಿರದಲ್ಲಿದೆ ಇದ್ದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...