Homeಕರ್ನಾಟಕಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

ಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

- Advertisement -
- Advertisement -

ಇಂದು ವಿಶ್ವಾಸಮತದ ಪ್ರಕ್ರಿಯೆ ಪೂರ್ಣಗೊಳ್ಳುವ ಎಲ್ಲ ಸಾಧ್ಯತೆಗಳಿದ್ದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಶುಕ್ರವಾರ ಸ್ಪೀಕರ್ ರಮೇಶಕುಮಾರ್ ಸೇರಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಸೋಮವಾರ ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ಮುಗಿಯಲಿದೆ ಎಂದಿರುವುದನ್ನು ಗಮನಿಸಬೇಕು.

ಕಾಂಗ್ರೆಸ್ ಪಕ್ಷಕ್ಕೆ ಈಗ ಸದನವನ್ನು ಉನ್ನಷ್ಟು ಮುಂದಕ್ಕೆ ಜಗ್ಗುವ ಯಾವ ಇರಾದೆಯೂ ಉಳಿದುಕೊಂಡಿಲ್ಲ. ಆದರೆ ಜೆಡಿಎಸ್ ಪಾಳೆಯಕ್ಕೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠರು ಹೇಗಾದರೂ ಸದನವನ್ನು ಗುರುವಾರದವರೆಗೆ ನಡೆಯುವ ಹಾಗೆ ಮಾಡಿ, ಅಷ್ಟರಲ್ಲಿ ಹಲವು ಅತೃಪ್ತರ ವಿಶ್ವಾಸವನ್ನು ಗಳಿಸಿ ಸರ್ಕಾರ ಉಳಿಸಿಕೊಳ್ಳುವ ಬಯಕೆ ಇದೆ. ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಾದರೂ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ನಿರ್ಧಾರಕ್ಕೆ ಅವರಿಬ್ಬರು ಬಂದಂತಿದೆ.

ಇಂದು ಬರಬಹುದಾದ ಸುಪ್ರಿಂಕೋರ್ಟ್ ತೀರ್ಪು ಅಥವಾ ಸೂಚನೆಯೂ ವಿಶ್ವಾಸಮತ ಇಂದೇ ಆಗಬೇಕೋ ಅಥವಾ ಚರ್ಚೆಗೆ ಅವಕಾಶ ಇನ್ನಷ್ಟು ಸಿಗಬೇಕೋ ಎಂಬುದನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯ ಎತ್ತಿರುವ ಕ್ರಿಯಾಲೋಪದ ಕುರಿತು ಇಂದು ಸ್ಪೀಕರ್ ಪಾಯಿಂಟ್ ಆಫ್ ಆರ್ಡರ್ ನೀಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ತಮ್ಮ ಪಕ್ಷದ ಶಾಸಕರಿಗೆ ವಿಪ್ ನೀಡುವ ತಮ್ಮ ಹಕ್ಕಿಗೆ ಕಳೆದ ವಾರದ ಸುಪ್ರಿಂಕೋರ್ಟ್ ಆದೇಶ ಧಕ್ಕೆ ತಂದಿದೆ ಎಂದು ಗುರುವಾರವೇ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸ್ಪೀಕರ್ ರಮೇಶಕುಮಾರ್ ಅವರಿಗೆ ಗುರುವಾರದವರೆಗೆ ಗ್ರಹಗತಿ ಸರಿಯಿಲ್ಲ, ಅಲ್ಲಿವರೆಗೆ ವಿಶ್ವಾಸಮತ ಮುಂದಕ್ಕೆ ಹೋಗುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸ್ಪೀಕರ್ ಒಪ್ಪಿಲ್ಲವೆಂಬ ಮಾತೂ ಕೇಳಿ ಬರುತ್ತಿದೆ. ಇಂದೇ ವಿಶ್ವಾಸ ಮತಯಾಚನೆ ಪ್ರಕ್ರಿಯೆ ನಡೆಯಬೇಕು ಎಂದು ಇಬ್ಬರು ಪಕ್ಷೇತರ ಶಾಸಕರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದೇ ನಡೆದು ಸುಪ್ರೀಂ ಕೋರ್ಟ್ ಕೂಡ ಇಂದೇ ವಿಶ್ವಾಸಮತ ಮುಗಿಯಲಿ ಎಂದು ಸೂಚಿಸಲೂಬಹುದು.

ಈ ಎಲ್ಲ ಕಾರಣಗಳಿಂದಾಗಿ ಇಂದು ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಬಹುಮತ ಇಲ್ಲದ ಕುಮಾರಸ್ವಾಮಿ ನೇತೃತ್ವದ 14 ತಿಂಗಳ ಸರ್ಕಾರ ಪತನವಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸುವ ಪ್ರಕ್ರಿಯೆಯೂ ಇಂದು ಅಥವಾ ನಾಳೆ ಜರುಗುವುದು ಪಕ್ಕಾ ಆಗಿದೆ. ವಿಪ್ ಮಾರ್ಗದ ಮೂಲಕ, ಅದಾಗದಿದ್ದರೆ ಏನೆಲ್ಲ ಸಾಧ್ಯವೋ ಆ ಮಾರ್ಗ ಬಳಸಿ ಅವರನ್ನೆಲ್ಲ ಅನರ್ಹಗೊಳಿಸಲು ಕಾಯಲಾಗುತ್ತಿದೆ.

ಸದ್ಯ 14 ತಿಂಗಳಿಂದ ಪ್ರತಿಕ್ಷಣವೂ ಮುಖ್ಯಮಂತ್ರಿ ಆಗುವ ಕನಸಿನಲ್ಲೇ ಬಾಳುತ್ತಿರುವ ಯಡಿಯೂರಪ್ಪನವರ ಇಷ್ಟಾರ್ಥ ಕೂಡಿಬರುವ ದಿನ ಹತ್ತಿರದಲ್ಲಿದೆ ಇದ್ದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...