Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...