Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...