Homeಕರ್ನಾಟಕಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

ಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

- Advertisement -
- Advertisement -

ಇಂದು ವಿಶ್ವಾಸಮತದ ಪ್ರಕ್ರಿಯೆ ಪೂರ್ಣಗೊಳ್ಳುವ ಎಲ್ಲ ಸಾಧ್ಯತೆಗಳಿದ್ದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಶುಕ್ರವಾರ ಸ್ಪೀಕರ್ ರಮೇಶಕುಮಾರ್ ಸೇರಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಸೋಮವಾರ ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ಮುಗಿಯಲಿದೆ ಎಂದಿರುವುದನ್ನು ಗಮನಿಸಬೇಕು.

ಕಾಂಗ್ರೆಸ್ ಪಕ್ಷಕ್ಕೆ ಈಗ ಸದನವನ್ನು ಉನ್ನಷ್ಟು ಮುಂದಕ್ಕೆ ಜಗ್ಗುವ ಯಾವ ಇರಾದೆಯೂ ಉಳಿದುಕೊಂಡಿಲ್ಲ. ಆದರೆ ಜೆಡಿಎಸ್ ಪಾಳೆಯಕ್ಕೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠರು ಹೇಗಾದರೂ ಸದನವನ್ನು ಗುರುವಾರದವರೆಗೆ ನಡೆಯುವ ಹಾಗೆ ಮಾಡಿ, ಅಷ್ಟರಲ್ಲಿ ಹಲವು ಅತೃಪ್ತರ ವಿಶ್ವಾಸವನ್ನು ಗಳಿಸಿ ಸರ್ಕಾರ ಉಳಿಸಿಕೊಳ್ಳುವ ಬಯಕೆ ಇದೆ. ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಾದರೂ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ನಿರ್ಧಾರಕ್ಕೆ ಅವರಿಬ್ಬರು ಬಂದಂತಿದೆ.

ಇಂದು ಬರಬಹುದಾದ ಸುಪ್ರಿಂಕೋರ್ಟ್ ತೀರ್ಪು ಅಥವಾ ಸೂಚನೆಯೂ ವಿಶ್ವಾಸಮತ ಇಂದೇ ಆಗಬೇಕೋ ಅಥವಾ ಚರ್ಚೆಗೆ ಅವಕಾಶ ಇನ್ನಷ್ಟು ಸಿಗಬೇಕೋ ಎಂಬುದನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯ ಎತ್ತಿರುವ ಕ್ರಿಯಾಲೋಪದ ಕುರಿತು ಇಂದು ಸ್ಪೀಕರ್ ಪಾಯಿಂಟ್ ಆಫ್ ಆರ್ಡರ್ ನೀಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ತಮ್ಮ ಪಕ್ಷದ ಶಾಸಕರಿಗೆ ವಿಪ್ ನೀಡುವ ತಮ್ಮ ಹಕ್ಕಿಗೆ ಕಳೆದ ವಾರದ ಸುಪ್ರಿಂಕೋರ್ಟ್ ಆದೇಶ ಧಕ್ಕೆ ತಂದಿದೆ ಎಂದು ಗುರುವಾರವೇ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸ್ಪೀಕರ್ ರಮೇಶಕುಮಾರ್ ಅವರಿಗೆ ಗುರುವಾರದವರೆಗೆ ಗ್ರಹಗತಿ ಸರಿಯಿಲ್ಲ, ಅಲ್ಲಿವರೆಗೆ ವಿಶ್ವಾಸಮತ ಮುಂದಕ್ಕೆ ಹೋಗುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸ್ಪೀಕರ್ ಒಪ್ಪಿಲ್ಲವೆಂಬ ಮಾತೂ ಕೇಳಿ ಬರುತ್ತಿದೆ. ಇಂದೇ ವಿಶ್ವಾಸ ಮತಯಾಚನೆ ಪ್ರಕ್ರಿಯೆ ನಡೆಯಬೇಕು ಎಂದು ಇಬ್ಬರು ಪಕ್ಷೇತರ ಶಾಸಕರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದೇ ನಡೆದು ಸುಪ್ರೀಂ ಕೋರ್ಟ್ ಕೂಡ ಇಂದೇ ವಿಶ್ವಾಸಮತ ಮುಗಿಯಲಿ ಎಂದು ಸೂಚಿಸಲೂಬಹುದು.

ಈ ಎಲ್ಲ ಕಾರಣಗಳಿಂದಾಗಿ ಇಂದು ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಬಹುಮತ ಇಲ್ಲದ ಕುಮಾರಸ್ವಾಮಿ ನೇತೃತ್ವದ 14 ತಿಂಗಳ ಸರ್ಕಾರ ಪತನವಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸುವ ಪ್ರಕ್ರಿಯೆಯೂ ಇಂದು ಅಥವಾ ನಾಳೆ ಜರುಗುವುದು ಪಕ್ಕಾ ಆಗಿದೆ. ವಿಪ್ ಮಾರ್ಗದ ಮೂಲಕ, ಅದಾಗದಿದ್ದರೆ ಏನೆಲ್ಲ ಸಾಧ್ಯವೋ ಆ ಮಾರ್ಗ ಬಳಸಿ ಅವರನ್ನೆಲ್ಲ ಅನರ್ಹಗೊಳಿಸಲು ಕಾಯಲಾಗುತ್ತಿದೆ.

ಸದ್ಯ 14 ತಿಂಗಳಿಂದ ಪ್ರತಿಕ್ಷಣವೂ ಮುಖ್ಯಮಂತ್ರಿ ಆಗುವ ಕನಸಿನಲ್ಲೇ ಬಾಳುತ್ತಿರುವ ಯಡಿಯೂರಪ್ಪನವರ ಇಷ್ಟಾರ್ಥ ಕೂಡಿಬರುವ ದಿನ ಹತ್ತಿರದಲ್ಲಿದೆ ಇದ್ದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...