Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...