Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...