Homeಕರ್ನಾಟಕಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ"

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

- Advertisement -
- Advertisement -

ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ ಮೂರು ದಿನ ಮುಂದೆ ಹೋಗಿದ್ದು ಮೈತ್ರಿ ಬಣಕ್ಕೆ ಹೊಸ ವಿಶ್ವಾಸವನ್ನೇನೂ ತರದಿದ್ದರೂ, ನಾಳೆ (ಮಂಗಳವಾರ) ಸುಪ್ರಿಂಕೋರ್ಟಿನಲ್ಲಿ ‘ಹಿತಕರ’ ಬೆಳವಣಿಗೆಯಾದೀತೆಂಬ ಒಂದು ಸಣ್ಣ ಸಮಾಧಾನವಷ್ಟೇ. ಹೊಟೆಲ್‍ನಲ್ಲಿರುವ ಅತೃಪ್ತರಿಗೆ ‘ಐಷಾರಾಮಿ’ ಬಂಧನ ವಿಸ್ತರಣೆಯಾಗಿತಷ್ಟೇ.

ಶುಕ್ರವಾರ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ತಾನು ತಯಾರು ಎಂದಾಗ ಯಾವ ವಿರೊಧವನ್ನು ಮಾಡದಿದ್ದ ಬಿಜೆಪಿ ಶನಿವಾರದ ಹೊತ್ತಿಗೆ, ‘ಬಹುಮತವೇ ಇಲ್ಲ, ಮಾನ ಮರ್ಯಾದೆ ರಾಜೀನಾಮೆ ಕೊಟ್ಟು ಹೋಗಲಿ’ ಎಂದೆಲ್ಲ ಹೊಸ ವರಸೆ ಶುರು ಮಾಡಿತ್ತು. ಹೇಗಾದರೂ ಮಾಡಿ ಕೆಲವು ಅತೃಪ್ತರನ್ನು ಮನವೊಲಿಸಿ ಗೆಲ್ಲುವ ಯೋಜನೆ ರೂಪಿಸಿದ್ದ ಮೈತ್ರಿಬಣಕ್ಕೆ ಆಸೆ ಹುಟ್ಟಿಸಿ ಕೆಲವರು ಕೈಕೊಟ್ಟ ಮೇಲೆ ದೊಡ್ಡ ನಿರಾಶೆಯಾಗಿತ್ತು. ರಾಜೀನಾಮೆ ವಾಪಸ್ ಪಡೆಯಲು ಒಪ್ಪಿದ್ದ ಹೊಸಕೋಟೆ ಶಾಸಕ, ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ಕೂಡ ಮುಂಬೈ ಪಾಲಾಗಿದ್ದು, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ವಾಸ್ತವ್ಯವೇ ಪತ್ತೆಯಾಗದಿದ್ದುದು, ರಾಮಲಿಂಗಾರೆಡ್ಡಿ ಯಾವುದನ್ನೂ ಖಚಿತಗೊಳಿಸದಿದ್ದುದು-ಈ ಎಲ್ಲ ಬೆಳವಣಿಗೆಗಳ ನಂತರ ಕುಮಾರಸ್ವಾಮಿ ರಾಜಿನಾಮೆ ನೀಡುವುದೊಂದೇ ಬಾಕಿ ಎಂಬ ಭಾವ ಬಿಜೆಪಿ ಮತ್ತು ಮೈತ್ರಿಬಣ ಎರಡರಲ್ಲೂ ಆವರಿಸಿತ್ತು.

ಆದರೆ ಇಂದು ಸ್ಪೀಕರ್ ಕಚೇರಿಯಲ್ಲಿ ನಡೆದ ಚರ್ಚೆಗಳ ಪರಿಣಾಮವಾಗಿ ವಿಶ್ವಾಸಮತ ಯಾಚನೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ. ಇವತ್ತು ಅವಿಶ್ವಾಸ ನಿರ್ಣಯ ನಿಲುವಳಿ ಮಂಡಿಸುವ ಮಾತಾಡಿದ್ದ ಬಿಜೆಪಿಯೂ ಸ್ಪೀಕರ್ ನಿರ್ಣಯವನ್ನು ಸ್ವಾಗತಿಸಲೇ ಬೇಕಾಗಿ ಬಂದಿತು.
ನಾಳೆ ಸುಪ್ರಿಂಕೊರ್ಟಿನಲ್ಲಿ ಎಂಟಿಬಿ ನಾಗರಾಜ್ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿದೆ. ಸ್ಪೀಕರ್ ವಿರುದ್ಧ ಸಲ್ಲಿಸಿಕೆಯಾಗಿದ್ದ 10 ಶಾಸಕರ ಅರ್ಜಿಯ ವಿಚಾರಣೆಯೂ ಮುಂದುವರೆಯಲಿದೆ. ಹೀಗಾಗಿ ನಾಳೆ ರಾಜ್ಯ ರಾಜಕಾರಣದ ಮುಂದಿನ ಆಟ ದೆಹಲಿಯ ಅಂಗಳದಲ್ಲಿ ನಿರ್ಣಯವಾಗಲಿದೆ.

ಈ ಎಲ್ಲ ಜಂಜಾಟದಲ್ಲಿ ಸದನ ಕಲಾಪ ನಡೆಯದೇ ಹೋಗಿದೆ. ಕನಿಷ್ಠ ಪ್ರಶ್ನೋತ್ತರ ಕಲಾಪ, ಬೇಡಿಕೆಗಳ ಮೇಲಿನ ಚರ್ಚೆಗಳನ್ನಾದರೂ ನಡೆಸಬಹುದಿತ್ತು. ಆದರೆ ಯಾರಿಗೂ ಇದರಲ್ಲಿ ಆಸಕ್ತಿ ಇರದೇ ಇರುವುದರಿಂದ ಎಲ್ಲರ ಅಪೇಕ್ಷೆಗೆ ಅನುಗುಣವಾಗಿಯೇ ಕಲಾಪ ಮುಂದೂಡಲ್ಪಟ್ಟಿದೆ.

ವಿಶ್ವಾಸ ಮತವೋ, ಅವಿಶ್ವಾಸವೋ? ಜನರಿಗೆ ಮಾತ್ರ ರಾಜ್ಯ ರಾಜಕೀಯ ವ್ಯವಸ್ಥೆಯ ಮೇಲೆ ಮೇಲೆ ಸದ್ಯಕ್ಕೆ ಯಾವ ವಿಶ್ವಾಸವೂ ಉಳಿದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...