Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....