Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...