Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...