Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...