Homeಕರ್ನಾಟಕಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ (ಸಿ-ಸೆಕ್ಷನ್) ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುಲು ವಿಶೇಷ ಕಾರ್ಯಕ್ರಮ ಅಥವಾ ಯೋಜನೆ ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ (ಡಿ.17) ಹೇಳಿದ್ದಾರೆ.

ವಿಧಾನಪರಿಷತ್‌ನ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿ ಜಗದೇವ್ ಗುತ್ತೇದಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಸಿಸೇರಿಯ್ ಹೆರಿಗೆ ಅಥವಾ ಸಿ-ಸೆಕ್ಷನ್ ಪ್ರಮಾಣ 2021-2022 ರಲ್ಲಿ ಶೇಖಡ 35 ಇತ್ತು. ಇದು 2022-2023 ರಲ್ಲಿ ಶೇ. 38ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಈ ಪ್ರಮಾಣ ಶೇ.46ರಷ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಪ್ರಮಾಣ ಶೇ.61ರಷ್ಟು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಆದಾಯ ಪಡೆಯಲು ಮತ್ತು ಸುಲಭವಾಗಿ ನಿರ್ವಹಿಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಹೆಚ್ಚು ಸಿಸೇರಿಯನ್ ಹೆರಿಗೆಗಳನ್ನು ಮಾಡುತ್ತಿವೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯ ಎಂದು ಸಚಿವರು ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ತಡೆಯಲು ಜಾರಿಗೊಳಿಸುವ ಕಾರ್ಯಕ್ರಮದ ಸ್ವರೂಪ ಬಹುತೇಕ ಅಂತಿಮಗೊಂಡಿದೆ. ಮುಂದಿನ ತಿಂಗಳು ಅದನ್ನು ಪ್ರಕಟಿಸಲಾಗುವುದು. ಸಾಮಾನ್ಯ ಹೆರಿಗೆಗೆ ಹೆಚ್ಚಿನ ಆದ್ಯತೆ ಕೊಟ್ಟು, ಅತಿ ಅಗತ್ಯ ಸಂದರ್ಭಗಳಲ್ಲಿ ಮಾತ್ರ ಸಿಸೇರಿಯನ್ ಮಾಡಲು ಆಸ್ಪತ್ರೆಗಳ ಸಿಬ್ಬಂದಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಹಲವಾರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯುವ ಮೂಲಕ ಬಾಣಂತಿಯರ ಆರೈಕೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸರ್ಕಾರದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವರು ತನ್ನ ಭಾಷಣದಲ್ಲಿ ಒತ್ತಿ ಹೇಳಿದ್ದಾರೆ.

ಪ್ರಸ್ತುತ, ಯೋಜಿತ 88 ಆಸ್ಪತ್ರೆಗಳಲ್ಲಿ 60 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ 24/7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಸಿಸೇರಿಯನ್‌ಗಿಂತ ಸಾಮಾನ್ಯ ಹೆರಿಗೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 46 ವ್ಯಕ್ತಿಗಳನ್ನು ಬಂಧಿಸಲಾಗಿದೆ. 2023-24 ರಲ್ಲಿ ರಾಜ್ಯದಲ್ಲಿ ಎಂಟು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವರದಿಯಾಗಿದ್ದು, ಸ್ಕ್ಯಾನಿಂಗ್ ಸೆಂಟರ್‌ಗಳು ಮತ್ತು ಆಸ್ಪತ್ರೆಗಳ ಮೇಲೆ ಹೆಚ್ಚಿನ ಕಣ್ಗಾವಲು ಇಟ್ಟಿರುವುದು ಈ ಅಪರಾಧಗಳ ಪತ್ತೆಗೆ ಕಾರಣವಾಯಿತು ಎಂದು ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದ್ದಾರೆ.

2018 ರಿಂದ ‘ಬಾಲಿಕಾ’ ಆನ್‌ಲೈನ್ ಸಾಫ್ಟ್‌ವೇರ್ ಮೂಲಕ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ನೋಂದಣಿಯನ್ನು ಕಡ್ಡಾಯಗೊಳಿಸಿದ್ದು, ಸರ್ಕಾರವು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ (ಪಿಸಿಪಿಎನ್‌ಡಿಟಿ) ಕಾಯ್ದೆಯಡಿಯಲ್ಲಿ ಶಾಸನಬದ್ಧ ಸಮಿತಿಗಳನ್ನು ಜಿಲ್ಲೆಗಳಾದ್ಯಂತ ರಚಿಸಿದೆ. ಭ್ರೂಣಹತ್ಯೆ ತಡೆಗಟ್ಟಲು ಗ್ರಾಮ ಮಟ್ಟದಲ್ಲಿ ಲಿಂಗ ಅನುಪಾತದ ಡೇಟಾವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ನಕಲಿ ವೈದ್ಯರ ಸಮಸ್ಯೆಗೆ ಸಂಬಂಧಿಸಿದಂತೆ ಮಾತನಾಡಿದ ದಿನೇಶ್ ಗುಂಡೂರಾವ್, ಕಳೆದ ಮೂರು ವರ್ಷಗಳಲ್ಲಿ ಕೋಲಾರ ಜಿಲ್ಲೆಯೊಂದರಲ್ಲೇ 134 ನಕಲಿ ಕ್ಲಿನಿಕ್‌ಗಳು ಪತ್ತೆಯಾಗಿವೆ ಎಂದು ತಿಳಿಸಿದರು. ಸ್ಥಳೀಯ ಸಮುದಾಯದ ಮುಖಂಡರು, ಧಾರ್ಮಿಕ ವ್ಯಕ್ತಿಗಳು ಮತ್ತು ಕೆಲವು ಶಾಸಕರ ವಿರೋಧವನ್ನು ಉಲ್ಲೇಖಿಸಿದ ಅವರು, ಆಪಾದಿತ ನಕಲಿ ವೈದ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಎದುರಿಸುತ್ತಿರುವ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...