Homeಕರ್ನಾಟಕಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ (ಸಿ-ಸೆಕ್ಷನ್) ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುಲು ವಿಶೇಷ ಕಾರ್ಯಕ್ರಮ ಅಥವಾ ಯೋಜನೆ ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ (ಡಿ.17) ಹೇಳಿದ್ದಾರೆ.

ವಿಧಾನಪರಿಷತ್‌ನ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿ ಜಗದೇವ್ ಗುತ್ತೇದಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಸಿಸೇರಿಯ್ ಹೆರಿಗೆ ಅಥವಾ ಸಿ-ಸೆಕ್ಷನ್ ಪ್ರಮಾಣ 2021-2022 ರಲ್ಲಿ ಶೇಖಡ 35 ಇತ್ತು. ಇದು 2022-2023 ರಲ್ಲಿ ಶೇ. 38ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಈ ಪ್ರಮಾಣ ಶೇ.46ರಷ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಪ್ರಮಾಣ ಶೇ.61ರಷ್ಟು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಆದಾಯ ಪಡೆಯಲು ಮತ್ತು ಸುಲಭವಾಗಿ ನಿರ್ವಹಿಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಹೆಚ್ಚು ಸಿಸೇರಿಯನ್ ಹೆರಿಗೆಗಳನ್ನು ಮಾಡುತ್ತಿವೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯ ಎಂದು ಸಚಿವರು ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ತಡೆಯಲು ಜಾರಿಗೊಳಿಸುವ ಕಾರ್ಯಕ್ರಮದ ಸ್ವರೂಪ ಬಹುತೇಕ ಅಂತಿಮಗೊಂಡಿದೆ. ಮುಂದಿನ ತಿಂಗಳು ಅದನ್ನು ಪ್ರಕಟಿಸಲಾಗುವುದು. ಸಾಮಾನ್ಯ ಹೆರಿಗೆಗೆ ಹೆಚ್ಚಿನ ಆದ್ಯತೆ ಕೊಟ್ಟು, ಅತಿ ಅಗತ್ಯ ಸಂದರ್ಭಗಳಲ್ಲಿ ಮಾತ್ರ ಸಿಸೇರಿಯನ್ ಮಾಡಲು ಆಸ್ಪತ್ರೆಗಳ ಸಿಬ್ಬಂದಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಹಲವಾರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯುವ ಮೂಲಕ ಬಾಣಂತಿಯರ ಆರೈಕೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸರ್ಕಾರದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವರು ತನ್ನ ಭಾಷಣದಲ್ಲಿ ಒತ್ತಿ ಹೇಳಿದ್ದಾರೆ.

ಪ್ರಸ್ತುತ, ಯೋಜಿತ 88 ಆಸ್ಪತ್ರೆಗಳಲ್ಲಿ 60 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ 24/7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಸಿಸೇರಿಯನ್‌ಗಿಂತ ಸಾಮಾನ್ಯ ಹೆರಿಗೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 46 ವ್ಯಕ್ತಿಗಳನ್ನು ಬಂಧಿಸಲಾಗಿದೆ. 2023-24 ರಲ್ಲಿ ರಾಜ್ಯದಲ್ಲಿ ಎಂಟು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವರದಿಯಾಗಿದ್ದು, ಸ್ಕ್ಯಾನಿಂಗ್ ಸೆಂಟರ್‌ಗಳು ಮತ್ತು ಆಸ್ಪತ್ರೆಗಳ ಮೇಲೆ ಹೆಚ್ಚಿನ ಕಣ್ಗಾವಲು ಇಟ್ಟಿರುವುದು ಈ ಅಪರಾಧಗಳ ಪತ್ತೆಗೆ ಕಾರಣವಾಯಿತು ಎಂದು ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದ್ದಾರೆ.

2018 ರಿಂದ ‘ಬಾಲಿಕಾ’ ಆನ್‌ಲೈನ್ ಸಾಫ್ಟ್‌ವೇರ್ ಮೂಲಕ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ನೋಂದಣಿಯನ್ನು ಕಡ್ಡಾಯಗೊಳಿಸಿದ್ದು, ಸರ್ಕಾರವು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ (ಪಿಸಿಪಿಎನ್‌ಡಿಟಿ) ಕಾಯ್ದೆಯಡಿಯಲ್ಲಿ ಶಾಸನಬದ್ಧ ಸಮಿತಿಗಳನ್ನು ಜಿಲ್ಲೆಗಳಾದ್ಯಂತ ರಚಿಸಿದೆ. ಭ್ರೂಣಹತ್ಯೆ ತಡೆಗಟ್ಟಲು ಗ್ರಾಮ ಮಟ್ಟದಲ್ಲಿ ಲಿಂಗ ಅನುಪಾತದ ಡೇಟಾವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ನಕಲಿ ವೈದ್ಯರ ಸಮಸ್ಯೆಗೆ ಸಂಬಂಧಿಸಿದಂತೆ ಮಾತನಾಡಿದ ದಿನೇಶ್ ಗುಂಡೂರಾವ್, ಕಳೆದ ಮೂರು ವರ್ಷಗಳಲ್ಲಿ ಕೋಲಾರ ಜಿಲ್ಲೆಯೊಂದರಲ್ಲೇ 134 ನಕಲಿ ಕ್ಲಿನಿಕ್‌ಗಳು ಪತ್ತೆಯಾಗಿವೆ ಎಂದು ತಿಳಿಸಿದರು. ಸ್ಥಳೀಯ ಸಮುದಾಯದ ಮುಖಂಡರು, ಧಾರ್ಮಿಕ ವ್ಯಕ್ತಿಗಳು ಮತ್ತು ಕೆಲವು ಶಾಸಕರ ವಿರೋಧವನ್ನು ಉಲ್ಲೇಖಿಸಿದ ಅವರು, ಆಪಾದಿತ ನಕಲಿ ವೈದ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಎದುರಿಸುತ್ತಿರುವ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...