Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...