Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...