Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...