Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...