Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...