Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...