Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...