Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...