Homeಕರ್ನಾಟಕವಿಧಾನಸಭೆ ಅಧಿವೇಶನ: 'ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ' ಸೇರಿ 2 ವಿಧೇಯಕ ಅಂಗೀಕಾರ

ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

- Advertisement -
- Advertisement -

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024ನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಿಧಾನಸಭೆ ಅಧಿವೇಶನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ. ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.

ಸಹಕಾರ ಸಂಘಗಳ ಮಸೂದೆಗೆ ಒಪ್ಪಿಗೆ

ಪ್ರತಿಪಕ್ಷಗಳ ವಿರೋಧದ ಮಧ್ಯೆ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದಲ್ಲಿ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸುವ ಈ ಮಸೂದೆಗೆ ಮೂರು ಪಕ್ಷಗಳ ಕೆಲ ಶಾಸಕರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲು ಹಾಗೂ ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈ ತಿದ್ದುಪಡಿ ಬಿಲ್‌ನಿಂದಾಗಿ ಇನ್ನು ಮುಂದೆ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಯಾವುದೇ ವಹಿವಾಟು ನಡೆಸದವರೂ ಸೇರಿದಂತೆ ಎಲ್ಲಾ ಸದಸ್ಯರಿಗೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮಸೂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಮಂಡಿಸಿದ್ದು, ಸಹಕಾರ ಆಂದೋಲನ ಜನರ ಆಂದೋಲನ ಆಗಬೇಕು ಎಂಬುದು ತಿದ್ದುಪಡಿಯ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ. ಎಲ್ಲಾ ಸಹಕಾರ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವುದಿಲ್ಲ. ಸರ್ಕಾರದ ನೆರವು ಪಡೆದ ಸಂಸ್ಥೆಗಳಿಗೆ ಸೀಮಿತ. ಮೀಸಲಾತಿ ನೀಡುವಾಗ ಯಾವ ಸಮಾಜಕ್ಕೆ ಇಲ್ಲಿಯವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅವರಿಗೆ ಆದ್ಯತೆ ನೀಡಲಾಗುವುದು. ಕೆಲವು ಸಹಕಾರ ಸಂಸ್ಥೆಗಳ ಸ್ಥಿತಿ  ತೀರಾ ಹದಗೆಟ್ಟಿವೆ ಎಂದು ಹೇಳಿದ್ದಾರೆ.

ಎಸ್‌.ಟಿ. ಸೋಮಶೇಖರ್‌, ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್‌ನ ಜಿ.ಟಿ. ದೇವೇಗೌಡ ಮತ್ತು ಜಿ.ಡಿ. ಹರೀಶ್‌ ಗೌಡ ಮೀಸಲಾತಿ ಪ್ರಸ್ತಾವವನ್ನು ಕೈಬಿಡುವಂತೆಯೂ ಆಗ್ರಹಿಸಿದ್ದರು. ಈ ಬಿಲ್ ನಿಂದ ಸಹಕಾರ ಸಂಘಗಳ ಮೇಲೆ ಸರ್ಕಾರ ಹಸ್ತಕ್ಷೇಪ ಹೆಚ್ಚಾಗಲಿದೆ. ನಾಮನಿರ್ದೇಶಿತರು ಪದಾಧಿಕಾರಿಗಳ ಆಯ್ಕೆಯನ್ನು ನಿರ್ಧರಿಸುವಂತಾಗಲಿದೆ. ಇದು ಸಹಕಾರ ಸಂಘಗಳ ವ್ಯವಸ್ಥೆಯನ್ನೇ ಸರ್ವ ನಾಶ ಮಾಡುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದವು. ಕೊನೆಗೆ ಸುದೀರ್ಘ ಚರ್ಚೆಯ ಬಳಿಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು

-ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಮಂಡನೆ

-ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ

-ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡನೆ

-ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ ಮಂಡನೆ

-ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆ

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...