Homeಕರ್ನಾಟಕವಿಧಾನಸಭೆ ಅಧಿವೇಶನ: 'ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ' ಸೇರಿ 2 ವಿಧೇಯಕ ಅಂಗೀಕಾರ

ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

- Advertisement -
- Advertisement -

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024ನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಿಧಾನಸಭೆ ಅಧಿವೇಶನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ. ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.

ಸಹಕಾರ ಸಂಘಗಳ ಮಸೂದೆಗೆ ಒಪ್ಪಿಗೆ

ಪ್ರತಿಪಕ್ಷಗಳ ವಿರೋಧದ ಮಧ್ಯೆ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದಲ್ಲಿ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸುವ ಈ ಮಸೂದೆಗೆ ಮೂರು ಪಕ್ಷಗಳ ಕೆಲ ಶಾಸಕರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲು ಹಾಗೂ ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈ ತಿದ್ದುಪಡಿ ಬಿಲ್‌ನಿಂದಾಗಿ ಇನ್ನು ಮುಂದೆ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಯಾವುದೇ ವಹಿವಾಟು ನಡೆಸದವರೂ ಸೇರಿದಂತೆ ಎಲ್ಲಾ ಸದಸ್ಯರಿಗೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮಸೂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಮಂಡಿಸಿದ್ದು, ಸಹಕಾರ ಆಂದೋಲನ ಜನರ ಆಂದೋಲನ ಆಗಬೇಕು ಎಂಬುದು ತಿದ್ದುಪಡಿಯ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ. ಎಲ್ಲಾ ಸಹಕಾರ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವುದಿಲ್ಲ. ಸರ್ಕಾರದ ನೆರವು ಪಡೆದ ಸಂಸ್ಥೆಗಳಿಗೆ ಸೀಮಿತ. ಮೀಸಲಾತಿ ನೀಡುವಾಗ ಯಾವ ಸಮಾಜಕ್ಕೆ ಇಲ್ಲಿಯವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅವರಿಗೆ ಆದ್ಯತೆ ನೀಡಲಾಗುವುದು. ಕೆಲವು ಸಹಕಾರ ಸಂಸ್ಥೆಗಳ ಸ್ಥಿತಿ  ತೀರಾ ಹದಗೆಟ್ಟಿವೆ ಎಂದು ಹೇಳಿದ್ದಾರೆ.

ಎಸ್‌.ಟಿ. ಸೋಮಶೇಖರ್‌, ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್‌ನ ಜಿ.ಟಿ. ದೇವೇಗೌಡ ಮತ್ತು ಜಿ.ಡಿ. ಹರೀಶ್‌ ಗೌಡ ಮೀಸಲಾತಿ ಪ್ರಸ್ತಾವವನ್ನು ಕೈಬಿಡುವಂತೆಯೂ ಆಗ್ರಹಿಸಿದ್ದರು. ಈ ಬಿಲ್ ನಿಂದ ಸಹಕಾರ ಸಂಘಗಳ ಮೇಲೆ ಸರ್ಕಾರ ಹಸ್ತಕ್ಷೇಪ ಹೆಚ್ಚಾಗಲಿದೆ. ನಾಮನಿರ್ದೇಶಿತರು ಪದಾಧಿಕಾರಿಗಳ ಆಯ್ಕೆಯನ್ನು ನಿರ್ಧರಿಸುವಂತಾಗಲಿದೆ. ಇದು ಸಹಕಾರ ಸಂಘಗಳ ವ್ಯವಸ್ಥೆಯನ್ನೇ ಸರ್ವ ನಾಶ ಮಾಡುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದವು. ಕೊನೆಗೆ ಸುದೀರ್ಘ ಚರ್ಚೆಯ ಬಳಿಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು

-ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಮಂಡನೆ

-ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ

-ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡನೆ

-ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ ಮಂಡನೆ

-ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆ

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...