Homeಕರ್ನಾಟಕವಿಧಾನಸಭೆ ಅಧಿವೇಶನ: 'ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ' ಸೇರಿ 2 ವಿಧೇಯಕ ಅಂಗೀಕಾರ

ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

- Advertisement -
- Advertisement -

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024ನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಿಧಾನಸಭೆ ಅಧಿವೇಶನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ. ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.

ಸಹಕಾರ ಸಂಘಗಳ ಮಸೂದೆಗೆ ಒಪ್ಪಿಗೆ

ಪ್ರತಿಪಕ್ಷಗಳ ವಿರೋಧದ ಮಧ್ಯೆ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದಲ್ಲಿ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸುವ ಈ ಮಸೂದೆಗೆ ಮೂರು ಪಕ್ಷಗಳ ಕೆಲ ಶಾಸಕರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲು ಹಾಗೂ ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈ ತಿದ್ದುಪಡಿ ಬಿಲ್‌ನಿಂದಾಗಿ ಇನ್ನು ಮುಂದೆ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಯಾವುದೇ ವಹಿವಾಟು ನಡೆಸದವರೂ ಸೇರಿದಂತೆ ಎಲ್ಲಾ ಸದಸ್ಯರಿಗೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮಸೂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಮಂಡಿಸಿದ್ದು, ಸಹಕಾರ ಆಂದೋಲನ ಜನರ ಆಂದೋಲನ ಆಗಬೇಕು ಎಂಬುದು ತಿದ್ದುಪಡಿಯ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ. ಎಲ್ಲಾ ಸಹಕಾರ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವುದಿಲ್ಲ. ಸರ್ಕಾರದ ನೆರವು ಪಡೆದ ಸಂಸ್ಥೆಗಳಿಗೆ ಸೀಮಿತ. ಮೀಸಲಾತಿ ನೀಡುವಾಗ ಯಾವ ಸಮಾಜಕ್ಕೆ ಇಲ್ಲಿಯವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅವರಿಗೆ ಆದ್ಯತೆ ನೀಡಲಾಗುವುದು. ಕೆಲವು ಸಹಕಾರ ಸಂಸ್ಥೆಗಳ ಸ್ಥಿತಿ  ತೀರಾ ಹದಗೆಟ್ಟಿವೆ ಎಂದು ಹೇಳಿದ್ದಾರೆ.

ಎಸ್‌.ಟಿ. ಸೋಮಶೇಖರ್‌, ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್‌ನ ಜಿ.ಟಿ. ದೇವೇಗೌಡ ಮತ್ತು ಜಿ.ಡಿ. ಹರೀಶ್‌ ಗೌಡ ಮೀಸಲಾತಿ ಪ್ರಸ್ತಾವವನ್ನು ಕೈಬಿಡುವಂತೆಯೂ ಆಗ್ರಹಿಸಿದ್ದರು. ಈ ಬಿಲ್ ನಿಂದ ಸಹಕಾರ ಸಂಘಗಳ ಮೇಲೆ ಸರ್ಕಾರ ಹಸ್ತಕ್ಷೇಪ ಹೆಚ್ಚಾಗಲಿದೆ. ನಾಮನಿರ್ದೇಶಿತರು ಪದಾಧಿಕಾರಿಗಳ ಆಯ್ಕೆಯನ್ನು ನಿರ್ಧರಿಸುವಂತಾಗಲಿದೆ. ಇದು ಸಹಕಾರ ಸಂಘಗಳ ವ್ಯವಸ್ಥೆಯನ್ನೇ ಸರ್ವ ನಾಶ ಮಾಡುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದವು. ಕೊನೆಗೆ ಸುದೀರ್ಘ ಚರ್ಚೆಯ ಬಳಿಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು

-ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಮಂಡನೆ

-ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ

-ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡನೆ

-ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ ಮಂಡನೆ

-ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆ

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...