Homeಕರ್ನಾಟಕವಿಧಾನಸಭೆ ಅಧಿವೇಶನ: 'ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ' ಸೇರಿ 2 ವಿಧೇಯಕ ಅಂಗೀಕಾರ

ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

- Advertisement -
- Advertisement -

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024ನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಿಧಾನಸಭೆ ಅಧಿವೇಶನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ. ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.

ಸಹಕಾರ ಸಂಘಗಳ ಮಸೂದೆಗೆ ಒಪ್ಪಿಗೆ

ಪ್ರತಿಪಕ್ಷಗಳ ವಿರೋಧದ ಮಧ್ಯೆ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದಲ್ಲಿ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸುವ ಈ ಮಸೂದೆಗೆ ಮೂರು ಪಕ್ಷಗಳ ಕೆಲ ಶಾಸಕರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲು ಹಾಗೂ ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈ ತಿದ್ದುಪಡಿ ಬಿಲ್‌ನಿಂದಾಗಿ ಇನ್ನು ಮುಂದೆ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಯಾವುದೇ ವಹಿವಾಟು ನಡೆಸದವರೂ ಸೇರಿದಂತೆ ಎಲ್ಲಾ ಸದಸ್ಯರಿಗೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮಸೂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಮಂಡಿಸಿದ್ದು, ಸಹಕಾರ ಆಂದೋಲನ ಜನರ ಆಂದೋಲನ ಆಗಬೇಕು ಎಂಬುದು ತಿದ್ದುಪಡಿಯ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ. ಎಲ್ಲಾ ಸಹಕಾರ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವುದಿಲ್ಲ. ಸರ್ಕಾರದ ನೆರವು ಪಡೆದ ಸಂಸ್ಥೆಗಳಿಗೆ ಸೀಮಿತ. ಮೀಸಲಾತಿ ನೀಡುವಾಗ ಯಾವ ಸಮಾಜಕ್ಕೆ ಇಲ್ಲಿಯವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅವರಿಗೆ ಆದ್ಯತೆ ನೀಡಲಾಗುವುದು. ಕೆಲವು ಸಹಕಾರ ಸಂಸ್ಥೆಗಳ ಸ್ಥಿತಿ  ತೀರಾ ಹದಗೆಟ್ಟಿವೆ ಎಂದು ಹೇಳಿದ್ದಾರೆ.

ಎಸ್‌.ಟಿ. ಸೋಮಶೇಖರ್‌, ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್‌ನ ಜಿ.ಟಿ. ದೇವೇಗೌಡ ಮತ್ತು ಜಿ.ಡಿ. ಹರೀಶ್‌ ಗೌಡ ಮೀಸಲಾತಿ ಪ್ರಸ್ತಾವವನ್ನು ಕೈಬಿಡುವಂತೆಯೂ ಆಗ್ರಹಿಸಿದ್ದರು. ಈ ಬಿಲ್ ನಿಂದ ಸಹಕಾರ ಸಂಘಗಳ ಮೇಲೆ ಸರ್ಕಾರ ಹಸ್ತಕ್ಷೇಪ ಹೆಚ್ಚಾಗಲಿದೆ. ನಾಮನಿರ್ದೇಶಿತರು ಪದಾಧಿಕಾರಿಗಳ ಆಯ್ಕೆಯನ್ನು ನಿರ್ಧರಿಸುವಂತಾಗಲಿದೆ. ಇದು ಸಹಕಾರ ಸಂಘಗಳ ವ್ಯವಸ್ಥೆಯನ್ನೇ ಸರ್ವ ನಾಶ ಮಾಡುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದವು. ಕೊನೆಗೆ ಸುದೀರ್ಘ ಚರ್ಚೆಯ ಬಳಿಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು

-ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಮಂಡನೆ

-ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ

-ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡನೆ

-ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ ಮಂಡನೆ

-ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆ

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...