HomeಅಂಕಣಗಳುKarnataka against SIRSIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

- Advertisement -
- Advertisement -

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ ರಾಜ್ಯದಲ್ಲಿ ಈಗಾಗಲೇ ಶೇ. 99.99 ರಷ್ಟು ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಆಯಾಗಳಿಂದ ಹೊಸ ಮತದಾರರ ಪಟ್ಟಿಯ ಚಿತ್ರಣ ಸಿದ್ಧವಾಗುತ್ತಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದಲ್ಲಿರುವ ಒಟ್ಟು 5,54,32,314 ಗಣತಿ ನಮೂನೆಗಳ ಪೈಕಿ ಆಗಸ್ಟ್ 6ರ ಸಂಜೆ 4 ಗಂಟೆಯ ವೇಳೆಗೆ ಬರೋಬ್ಬರಿ 5,54,29,076 ನಮೂನೆಗಳ ಡಿಜಿಟಲೀಕರಣ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರಸ್ತುತ ಕೇವಲ 3,238 ನಮೂನೆಗಳ ಡಿಜಿಟಲೀಕರಣ ಮಾತ್ರ ಬಾಕಿ ಉಳಿದಿದೆ.

1.10 ಕೋಟಿ ‘ಎಎಸ್‌ಡಿಡಿಒ’ ಮತದಾರರ ಪತ್ತೆ!

ಈ ಬಾರಿಯ ಸಮಗ್ರ ಪರಿಷ್ಕರಣೆಯಲ್ಲಿ (SIR) ಅತ್ಯಂತ ಮಹತ್ವದ ಅಂಶವೆಂದರೆ, ಈವರೆಗೆ ಡಿಜಿಟಲೀಕರಣಗೊಂಡ 5.54 ಕೋಟಿ ನಮೂನೆಗಳ ಪೈಕಿ ಬರೋಬ್ಬರಿ 1.10 ಕೋಟಿ ಮತದಾರರನ್ನು ‘ಎಎಸ್‌ಡಿಡಿಒ’ (ASDDO – ಗೈರು, ನಿಧನ, ಶಾಶ್ವತ ಸ್ಥಳಾಂತರ, ನಕಲಿ ಹಾಗೂ ಇತರೆ) ವರ್ಗಕ್ಕೆ ಸೇರಿಸಲಾಗಿದೆ.

ಈ ಪೈಕಿ ವರ್ಗೀಕರಣ ವಿವರ ಹೀಗಿದೆ:

  • ಶಾಶ್ವತ ಸ್ಥಳಾಂತರಗೊಂಡವರು: 66.43 ಲಕ್ಷ
  • ಮೃತಪಟ್ಟ ಮತದಾರರು: 16.32 ಲಕ್ಷ
  • ಗೈರುಹಾಜರಾದವರು: 16.12 ಲಕ್ಷ
  • ಈಗಾಗಲೇ ನೋಂದಾಯಿತರಾದವರು (ನಕಲಿ): 6.93 ಲಕ್ಷ
  • ಇತರರು: 4.67 ಲಕ್ಷ
ಮುಂದಿನ ಪ್ರಕ್ರಿಯೆ

ಆಗಸ್ಟ್ 8ರ ಗಡುವು ಮುಗಿದ ನಂತರ ಡಿಜಿಟಲೀಕರಣದ ಗುಣಮಟ್ಟ ಪರಿಶೀಲನೆ, ತಾಂತ್ರಿಕ ವಿವರಗಳ ಮೌಲ್ಯಮಾಪನ, ಮತಗಟ್ಟೆಗಳ ಮರು ಹೊಂದಾಣಿಕೆ ಹಾಗೂ ರ್ಯಾಂಡಮೈಸೇಷನ್ ಪ್ರಕ್ರಿಯೆಗಳು ನಡೆಯಲಿವೆ.

ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

  • ಆಗಸ್ಟ್ 17: ಕರಡು ಮತದಾರರ ಪಟ್ಟಿ ಪ್ರಕಟಣೆ.
  • ಆಗಸ್ಟ್ 17 ರಿಂದ ಸೆಪ್ಟೆಂಬರ್ 16: ಸಾರ್ವಜನಿಕರು ಆಕ್ಷೇಪಣೆ ಹಾಗೂ ಹಕ್ಕುಗಳ ಅರ್ಜಿ ಸಲ್ಲಿಕೆಗೆ ಅವಕಾಶ.
  • ಆಗಸ್ಟ್ 18 ರಿಂದ ಅಕ್ಟೋಬರ್ 15: ನೋಟಿಸ್ ಜಾರಿ, ಪರಿಶೀಲನೆ, ವಿಚಾರಣೆ ಹಾಗೂ ಆಕ್ಷೇಪಣೆಗಳ ಇತ್ಯರ್ಥ.
  • ಅಕ್ಟೋಬರ್ 19: ಅಂತಿಮ ಮತದಾರರ ಪಟ್ಟಿ ಪ್ರಕಟಣೆ.

ಈ ಹಿಂದೆ ಜೂನ್ 30 ರಿಂದ ಜುಲೈ 29 ರವರೆಗೆ ನೀಡಲಾಗಿದ್ದ ಗಣತಿ ನಮೂನೆ ಸಲ್ಲಿಕೆಯ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿತ್ತು. ಸಾರ್ವಜನಿಕರು ತಮ್ಮ ಹಕ್ಕುಗಳನ್ನು ಕಾಯ್ದುಕೊಳ್ಳಲು ನಾಳೆಯೊಳಗಾಗಿ ನಮೂನೆಗಳನ್ನು ಸಲ್ಲಿಸಲು ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...

ಬಾಬಾ ಸಿದ್ದಿಕ್ ಕೊಲೆ ಆರೋಪಿಯಿಂದ ಶಾಸಕ ಜೀಶನ್ ಸಿದ್ದಿಕ್‌ಗೆ ಜೀವ ಬೆದರಿಕೆ: “ನಿನ್ನ ತಂದೆಯನ್ನು ಕೊಂದೆ, ಈಗ ನಿನ್ನ ಸರದಿ!” ಎಂಬ ಆಡಿಯೋ ವೈರಲ್ 

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕ ಜೀಶನ್ ಸಿದ್ದಿಕ್ ಅವರಿಗೆ ವಿದೇಶದಿಂದ ಭೀಕರ ಜೀವ ಬೆದರಿಕೆ ಕರೆ ಮತ್ತು ಧ್ವನಿ ಸಂದೇಶ...

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13...

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...