Homeಕರ್ನಾಟಕರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.

“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.

“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.

“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

“ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...