Homeಕರ್ನಾಟಕರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.

“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.

“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.

“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

“ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...