Homeಕರ್ನಾಟಕರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.

“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.

“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.

“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

“ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....