Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

- Advertisement -
- Advertisement -

ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಟ್ವಿಟ್ಟರ್ ಟ್ರೆಂಡಿಂಗ್ #KarnatakaJobsForKannadigas ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ಚರ್ಚಿಸಿದ್ದರು. ಬಹುತೇಕರು ಅದನ್ನು ಬೆಂಬಲಿಸಿದ್ದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ. ಕೆಲವರು ಇದು ಪ್ರಾಕ್ಟಿಕಲ್ ಅಲ್ಲ ಎಂದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನಷ್ಟ ಆಗುತ್ತಿರುವುದು ಎಲ್ಲಿ ಎಂಬ ಕುರಿತು ಉದಾಹರಣೆಗಳ ಮೂಲಕ ಚರ್ಚೆ ನಡೆದಿದೆ.

ಪತ್ರಕರ್ತರಾದ ನವೀನ್ ಸೂರಿಂಜೆ ಈ ರೀತಿ ಹೇಳುತ್ತಾರೆ.

ಕರಾವಳಿಯಲ್ಲಿ ಸ್ಥಾಪನೆಯಾದ ವಿಜಯಾ ಬ್ಯಾಂಕನ್ನು ಇನ್ನಿಲ್ಲದಂತೆ ಮಾಡಿದ ಬ್ಯಾಂಕ್ ವಿಲೀನ‌ ಪ್ರಕ್ರಿಯೆಯ ವಿರುದ್ದ ಮಾಡಿದ ಹೋರಾಟವೇನೋ ವ್ಯರ್ಥವಾಯ್ತು. ವಿಜಯಾ ಬ್ಯಾಂಕ್ ಇದ್ದಾಗಲೇ ಸ್ವಲ್ಪಅಸ್ಥೆ ವಹಿಸಿದ್ದರೆ ಬ್ಯಾಂಕ್ ಉಳಿಯುತ್ತಿತ್ತೇನೋ ! ಮೂಲ್ಕಿ ಸುಂದರರಾಮ ಶೆಟ್ಟರಿಂದ ವೈಭವದ ದಿನಗಳನ್ನು ಕಂಡ ವಿಜಯಾ ಬ್ಯಾಂಕಿನಲ್ಲಿ ಎಷ್ಟೊಂದು ಜನ ಪರಿಚಿತರು ಇದ್ದರು. ಮೂಲ್ಕಿಯವರೇಆಗಿದ್ದಕ್ಕೋ ಏನೋ… ನನ್ನಪ್ಪನ ಗೆಳೆಯರಲ್ಲಿ ಬಹುತೇಕರು ವಿಜಯಾ ಬ್ಯಾಂಕ್ ಸಿಬ್ಬಂದಿಗಳು. ನನ್ನ ತಲೆಮಾರಿನ ಯಾರೂ ಕೂಡಾ ನಾನು ವಿಜಯಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಂಡಿದ್ದನ್ನು ನಾನುಕೇಳಿಲ್ಲ. ಆಗಲೇ ನಮಗೆ ಅಪಾಯ ಅರಿವಾಗಬೇಕಿತ್ತು.
ನನ್ನೂರಲ್ಲಿ ಹುಟ್ಟಿದ ಬ್ಯಾಂಕ್ ನಲ್ಲಿ ನನ್ನೂರಿನ ಯುವಕರಿಗೆ ಕೆಲಸ ವಂಚಿಸಿ, ಪರ ಬಾಷಿಕರಿಗೆ ಉದ್ಯೋಗ ನೀಡಿದಾಗಲೇ ವಿಜಯಾ ಬ್ಯಾಂಕ್ ಅವನತಿ ಪರ್ವ ಪ್ರಾರಂಭವಾಗಿತ್ತು. ಇವತ್ತು ವಿಜಯಾ ಬ್ಯಾಂಕ್ಉದ್ಯೋಗಿಗಳೆಲ್ಲರೂ ಕನ್ನಡಿಗರಾಗಿದ್ದರೆ ವಿಲೀನ ಪ್ರಕ್ರಿಯೆಗೆ ಉದ್ಯೋಗಿಗಳ ಪ್ರತಿಕ್ರಿಯೆ ಹೇಗಿರುತ್ತಿತ್ತು ?
ವಿಜಯಾ ಬ್ಯಾಂಕನ್ನೇನೋ ಕಳೆದುಕೊಂಡೆವು. ಕನ್ನಡಿಗರ ಉಳಿದ ಬ್ಯಾಂಕುಗಳನ್ನಾದರೂ ರಕ್ಷಿಸಬೇಕಿದೆ. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪ್ರಾತಿನಿದ್ಯ ಸಿಗಬೇಕಿದೆ. ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆಅವಕಾಶ ನೀಡಬೇಕಿದೆ.
ಸದ್ಯ, ಕನ್ನಡಿಗರೆಲ್ಲರೂ ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಚಳುವಳಿಯಲ್ಲಿ ಭಾಗಿಯಾಗಬೇಕಿದೆ.

ಎಂ.ಎಸ್.ಶ್ರೀ ಹರ್ಷ ಎನ್ನುವವರು ಇದಕ್ಕೆ ಸಹಮತ ಹೊಂದಿಲ್ಲ.

ಇದು ಪ್ರಾಕ್ಟಿಕಲ್ ಅಲ್ಲ. ಅಭಿವೃದ್ಧಿ ಆದ ಕಡೆ ವಲಸೆ ಆಗಿಯೇ ಆಗುತ್ತದೆ. ಇಂತಹ ಹೋರಾಟಗಳಿಂದ ಏನೂ ಪ್ರಯೋಜನವಿಲ್ಲ. ನನ್ನ ಮಾತಿನಲ್ಲಿ ನಂಬುಗೆ ಇಲ್ಲದಿದ್ದರೆ ಪ್ರಯತ್ನ ಮಾಡಿ ನೋಡಿ.

#ಅಭಿವೃದ್ಧಿ ಯ ವಿರುದ್ಧ ದನಿ ಎತ್ತದ ಇಂತಹ ಹೋರಾಟಗಳು ಕ್ಷಣಿಕ ಆರಾಮು ನೀಡುವ ಪೇನ್ ಕಿಲ್ಲರ್ ಗಳು ಅಷ್ಟೆ.

This is an #impractical movement ..

 

ಮಂಗಳೂರಿನ ಹೋರಾಟಗಾರ ಮುನೀರ್ ಕಾಟಿಪಳ್ಳ ಇದನ್ನು ಬೆಂಬಲಿಸುತ್ತಾರಾದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳುತ್ತಾರೆ.

ಉದ್ಯೋಗ ಸೃಷ್ಟಿಯ ಆಮಿಷವನ್ನು ಒಡ್ಡಿ ತುಳುನಾಡಿನ ಚಿನ್ನದಂತಹ ಭೂಮಿ, ನೇತ್ರಾವತಿಯ ಅಮೃತದಂತಹ ನೀರನ್ನು ಪಡೆದು ಸ್ಥಾಪನೆಯಾದ mrpl ಉದ್ಯೋಗ ಸೃಷ್ಟಿಸಿದ್ದು ಅಷ್ಟರಲ್ಲೇ ಇದೆ. ನಾಲ್ಕುಸಾವಿರ ಎಕರೆ ಭೂಮಿ, ಲಕ್ಷಾಂತರ ಕೋಟಿ ಹಣ ಹೂಡಿಯೂ ಸೃಷ್ಟಿಯಾಗಿರುವ ಉದ್ಯೋಗ ಎರಡು ಸಾವಿರಕ್ಕೂ ಕಡಿಮೆ. ಆ ಎರಡು ಸಾವಿರದಲ್ಲಿ ಕನ್ನಡಿಗರ ಸಂಖ್ಯೆ ಶೇಕಡಾ 25 ರಷ್ಟೂ ಇಲ್ಲ. ತುಳುವರನ್ನುಹುಡುಕಬೇಕಷ್ಟೆ. ಉದ್ಯೋಗ ಸಿಕ್ಕವರಲ್ಲಿ ಬಹುತೇಕರು ಭೂಮಿ ಕೊಟ್ಟ ಕಾರಣಕ್ಕೆ ಪ್ರತಿಯಾಗಿ ಪಡೆದುಕೊಂಡದ್ದೇ ಹೆಚ್ಚು. ಅಂತಹ mrpl ತಿಂಗಳ ಹಿಂದೆ 150 ಅಪ್ರೆಂಟಿಸ್ ಗಳನ್ನು ನೇಮಕಾತಿಮಾಡಿಕೊಂಡಿತು. ಆ 150 ರಲ್ಲಿ ತುಳುವರು ಬಿಡಿ, ಕನ್ನಡಿಗರು ಒಬ್ಬರೂ ಇಲ್ಲವಂತೆ. ಇದು ಅತ್ಯಂತ ಕಳವಳಕಾರಿ ಸಂಗತಿ.

ಈ ಅನ್ಯಾಯ, ತಾರತಮ್ಯ ಕೊನೆಯಾಗಲೇ ಬೇಕು. ನಮ್ಮ ನೆಲ, ಜಲವನ್ನು ಬಳಸಿ ಸ್ಥಾಪನೆಯಾಗುವ ಕೈಗಾರಿಕೆ, ಉದ್ದಿಮೆ, ವ್ಯವಹಾರಗಳು ಉದ್ಯೋಗವನ್ನು ಸೃಷ್ಟಿಸಬೇಕು, ಸ್ಥಳೀಯರಿಗೆ ಅದರಲ್ಲಿಆದ್ಯತೆಯಲ್ಲಿ ಉದ್ಯೋಗ ಸಿಗಲೇಬೇಕು. ಅದಿಲ್ಲದಿದ್ದರೆ ಎದ್ದು ಹೊರ ನಡೆಯಿರಿ ಅನ್ನಬೇಕು.

(ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಕೊಡಿ ಟ್ವಿಟ್ಟರ್, ಫೇಸ್ ಬುಕ್ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಅಂದಾಭಿಮಾನವೋ, ಪರ ರಾಜ್ಯದವರ ಕುರಿತುಅಸಹನೆಯೋ ಆಗಬಾರದು. ಹೊರ ರಾಜ್ಯದವರೂ ಇರಲಿ. ಕನ್ನಡಿಗರಿಗೆ, ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶ ಸಿಗಲಿ ಎಂಬುದು ನನ್ನ ನಿಲುವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಡೀದೇಶದಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸ ಸರಕಾರದ ಆದ್ಯತೆ ಆಗಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ದತಿ ರದ್ದಾಗಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆಯ ಕಾನೂನುಗಳುಜಾರಿಯಾಗಬೇಕು. ಒಟ್ಟಾರೆ ಹೋರಾಟ ನಿರುದ್ಯೋಗ, ಅರೆ ಉದ್ಯೋಗದ ವಿರುದ್ದ, ಸ್ಥಳೀಯರಿಗೆ ಆದ್ಯತೆ ಎಂದಾಗಬೇಕು)

#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೆ_ಸಿಗಲಿ
#karnatakaJobsForKannadigas

 

ಪ್ರದೀಪ್ ತೊರೆನೂರು ಎನ್ನುವವರೂ ಸಹಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗ್ಳೂರಿನಲ್ಲಿ ಒಂದು ಸುತ್ತು ತಿರುಗಾಡುತ್ತಾ ನೋಡಿದರೆ ಹಲವಾರು ಉದ್ಯಮಗಳು ಹಾಗೂ ಕೆಲಸ ಮಾಡುವ ಜನ ಕನ್ನಡೇತರರು ಕಾಣಿಸುತ್ತಾರೆ … ಮತ್ತೊಂದೆಡೆ ಹಲವಾರು ಕನ್ನಡಿಗರು ಕೆಲಸ ಸಿಗದೆ ಒದ್ದಾಡುತ್ತಿದ್ದಾರೆ …

ಸ್ವತಂತ್ರ ನಂತರ ಕೇವಲ ಕೇಂದ್ರ ಸರ್ಕಾರ ಕಚೇರಿ ಹೆಚ್ ಎ ಎಲ್ , ಬೆಮ್‌ಲ್ , ಮುಂತಾದ ಕಡೆ ತಮ್ಮ ಬೇರು ಗಟ್ಟಿ ಮಾಡಿಕೊಂಡು ಅನ್ಯ ಭಾಷಿಕರು ಕರ್ನಾಟಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು , ಅದುಕ್ರಮೇಣ ಮಾಹಿತಿ ತಂತ್ರಜಾನ ಕಾರ್ಖಾನೆಗಳಲ್ಲಿ ಅನ್ಯ ರಾಜ್ಯದವರು ತಮ್ಮ ಹಿಡಿತ ಇಟ್ಟುಕೊಂಡು ಕನ್ನಡಿಗರು ಏನೇ ಓದಿ , ಒಳ್ಳೆಯ ಅನುಭವ ಇದ್ದರೂ ಅವರನ್ನು ಕಡೆಗಣಿಸಿದರು ..

ಈ ದೊಡ್ಡ ಮಟ್ಟದ ಕಾರ್ಖನಗಳಲ್ಲಿ ಇದ್ದ ಅನ್ಯ ಭಾಷಿಕರ ಜನ ಇವತ್ತು ನನಗೆ ಆಟೋ ಗಳಲ್ಲಿ , ಮಾಲ್ ಗಳಲ್ಲಿ , ಚಿಕ್ಕ ಚಿಕ್ಕ ಉದ್ಯಮಗಳಲ್ಲಿ ನಿಧಾನವಾಗಿ ತಮ್ಮ ಬೇರು ಗಟ್ಟಿ ಮಾಡಿಕೊಳ್ಳುತಿರುವುದುಕನ್ನಡಿಗರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುವ ಅವಕಾಶಗಳು ಕಡಿಮೆಯಾಗಳಿದ್ದು, ಬೆಂಗಳೂರು ನಿಧಾನವಾಗಿ ಅನ್ಯ ರಾಜ್ಯದವರ ತೆಕ್ಕೆಗೆ ಬೀಳುವುದು ಶತ ಸಿದ್ದ !

ಮೊದಲನೆಯದಾಗಿ ಕರ್ನಾಟಕ ಸರ್ಕಾರ ರಾಜ್ಯದ ಒಟ್ಟೂ ನಿರುದ್ಯೋಗಿಗಳ ಅಂಕಿ ಅಂಶ ಬಗ್ಗೆ ಜನರಿಗೆ ತಿಳಿಸಬೇಕು ! ಪ್ರತಿಯೊಂದು ಉದ್ಯಮದಲ್ಲಿ ಸ್ಥಳೀಯರು ಇರುವ ಅಂಕಿ ಅಂಶ ಬಯಲಾಗಬೇಕು ! ಇಂದು ಕಸದ ಕಾಂಟ್ರ್ಯಾಕ್ಟ್ ಗಳಿಂದ ಯಾವ ಯಾವ ಕಾಂಟ್ರ್ಯಾಕ್ಟ್ ಗಳು ಕನ್ನಡಿಗರಿಗೆ ಸಿಕ್ಕಿದೆ , ಅನ್ಯ ಭಾಷಿಕರಿಗೆ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಕರ್ನಾಟಕ ಸರ್ಕಾರ ಬಹಿರಂಗ ಪಡಿಸಲಿ

ಇಲ್ಲಿ ಅನ್ಯಭಾಷಿಕರ ಸಂಖ್ಯೆ ಆಯಾ ರಾಜ್ಯದ ಆಧಾರದ ಮೇಲೆ ವಿಂಗಡಣೆಯಾಗಿ ಆಯಾ ರಾಜ್ಯದ ಉದ್ಯೋಗ ಸೃಷ್ಟಿಸುವಲ್ಲಿ ಆಯಾ ರಾಜ್ಯದ ವೈಪಲ್ಯ ಎತ್ತಿ ತೋರಿಸಬೇಕು !

#Nation_First ಎಂದರೆ ನಮ್ಮ ಕೆಲಸ ಉದ್ಯಮ ಹಾಗೂ ಸ್ವಾಭಿಮವನ್ನು ಅನ್ಯ ರಾಜ್ಯದವರಿಗೆ ಕೊಟ್ಟು ನಾವು ಬಿಕಾರಿ ಯಾಗುವುದಲ್ಲ , ನಾವು ನಮ್ಮ ಹಕ್ಕನ್ನು ಪಡೆದು , ಸ್ಥಳೀಯರಾಗಿ ಕೆಲಸ ಪಡೆದು ,ಒಳ್ಳೆಯ ವ್ಯಾಪಾರ ವಹಿವಾಟು ಮಾಡಿ ಭಾರತ ದೇಶದ ಅಭಿವೃದ್ದಿಗಾಗಿ ಶ್ರಮಿಸುವುದು !

ಸ್ಥಳೀಯರಿಗೆ ಕೆಲ್ಸ ಸಿಕ್ಕ ಮೆಳ್ಳೆ ಉಳಿದ ಕೆಲಸಗಳು ಅನ್ಯ ರಾಜ್ಯದವರು ಪಡೆಯಬಹುದು !

ಇದು ಆಗದೆ ಇದ್ದಲ್ಲಿ ಕನ್ನಡಿಗರು ತಮ್ಮದೇ ನಾಡಿನಲ್ಲಿ ಕೆಲಸ ಇಲ್ಲದೆ ಪರದಾಡುವ ದಿನ ಬರುವುದು ಶತಸಿದ್ದ !

#KarnatakaJobsForKannadigas
#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೇ_ಸಿಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...