Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

- Advertisement -
- Advertisement -

ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಟ್ವಿಟ್ಟರ್ ಟ್ರೆಂಡಿಂಗ್ #KarnatakaJobsForKannadigas ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ಚರ್ಚಿಸಿದ್ದರು. ಬಹುತೇಕರು ಅದನ್ನು ಬೆಂಬಲಿಸಿದ್ದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ. ಕೆಲವರು ಇದು ಪ್ರಾಕ್ಟಿಕಲ್ ಅಲ್ಲ ಎಂದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನಷ್ಟ ಆಗುತ್ತಿರುವುದು ಎಲ್ಲಿ ಎಂಬ ಕುರಿತು ಉದಾಹರಣೆಗಳ ಮೂಲಕ ಚರ್ಚೆ ನಡೆದಿದೆ.

ಪತ್ರಕರ್ತರಾದ ನವೀನ್ ಸೂರಿಂಜೆ ಈ ರೀತಿ ಹೇಳುತ್ತಾರೆ.

ಕರಾವಳಿಯಲ್ಲಿ ಸ್ಥಾಪನೆಯಾದ ವಿಜಯಾ ಬ್ಯಾಂಕನ್ನು ಇನ್ನಿಲ್ಲದಂತೆ ಮಾಡಿದ ಬ್ಯಾಂಕ್ ವಿಲೀನ‌ ಪ್ರಕ್ರಿಯೆಯ ವಿರುದ್ದ ಮಾಡಿದ ಹೋರಾಟವೇನೋ ವ್ಯರ್ಥವಾಯ್ತು. ವಿಜಯಾ ಬ್ಯಾಂಕ್ ಇದ್ದಾಗಲೇ ಸ್ವಲ್ಪಅಸ್ಥೆ ವಹಿಸಿದ್ದರೆ ಬ್ಯಾಂಕ್ ಉಳಿಯುತ್ತಿತ್ತೇನೋ ! ಮೂಲ್ಕಿ ಸುಂದರರಾಮ ಶೆಟ್ಟರಿಂದ ವೈಭವದ ದಿನಗಳನ್ನು ಕಂಡ ವಿಜಯಾ ಬ್ಯಾಂಕಿನಲ್ಲಿ ಎಷ್ಟೊಂದು ಜನ ಪರಿಚಿತರು ಇದ್ದರು. ಮೂಲ್ಕಿಯವರೇಆಗಿದ್ದಕ್ಕೋ ಏನೋ… ನನ್ನಪ್ಪನ ಗೆಳೆಯರಲ್ಲಿ ಬಹುತೇಕರು ವಿಜಯಾ ಬ್ಯಾಂಕ್ ಸಿಬ್ಬಂದಿಗಳು. ನನ್ನ ತಲೆಮಾರಿನ ಯಾರೂ ಕೂಡಾ ನಾನು ವಿಜಯಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಂಡಿದ್ದನ್ನು ನಾನುಕೇಳಿಲ್ಲ. ಆಗಲೇ ನಮಗೆ ಅಪಾಯ ಅರಿವಾಗಬೇಕಿತ್ತು.
ನನ್ನೂರಲ್ಲಿ ಹುಟ್ಟಿದ ಬ್ಯಾಂಕ್ ನಲ್ಲಿ ನನ್ನೂರಿನ ಯುವಕರಿಗೆ ಕೆಲಸ ವಂಚಿಸಿ, ಪರ ಬಾಷಿಕರಿಗೆ ಉದ್ಯೋಗ ನೀಡಿದಾಗಲೇ ವಿಜಯಾ ಬ್ಯಾಂಕ್ ಅವನತಿ ಪರ್ವ ಪ್ರಾರಂಭವಾಗಿತ್ತು. ಇವತ್ತು ವಿಜಯಾ ಬ್ಯಾಂಕ್ಉದ್ಯೋಗಿಗಳೆಲ್ಲರೂ ಕನ್ನಡಿಗರಾಗಿದ್ದರೆ ವಿಲೀನ ಪ್ರಕ್ರಿಯೆಗೆ ಉದ್ಯೋಗಿಗಳ ಪ್ರತಿಕ್ರಿಯೆ ಹೇಗಿರುತ್ತಿತ್ತು ?
ವಿಜಯಾ ಬ್ಯಾಂಕನ್ನೇನೋ ಕಳೆದುಕೊಂಡೆವು. ಕನ್ನಡಿಗರ ಉಳಿದ ಬ್ಯಾಂಕುಗಳನ್ನಾದರೂ ರಕ್ಷಿಸಬೇಕಿದೆ. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪ್ರಾತಿನಿದ್ಯ ಸಿಗಬೇಕಿದೆ. ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆಅವಕಾಶ ನೀಡಬೇಕಿದೆ.
ಸದ್ಯ, ಕನ್ನಡಿಗರೆಲ್ಲರೂ ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಚಳುವಳಿಯಲ್ಲಿ ಭಾಗಿಯಾಗಬೇಕಿದೆ.

ಎಂ.ಎಸ್.ಶ್ರೀ ಹರ್ಷ ಎನ್ನುವವರು ಇದಕ್ಕೆ ಸಹಮತ ಹೊಂದಿಲ್ಲ.

ಇದು ಪ್ರಾಕ್ಟಿಕಲ್ ಅಲ್ಲ. ಅಭಿವೃದ್ಧಿ ಆದ ಕಡೆ ವಲಸೆ ಆಗಿಯೇ ಆಗುತ್ತದೆ. ಇಂತಹ ಹೋರಾಟಗಳಿಂದ ಏನೂ ಪ್ರಯೋಜನವಿಲ್ಲ. ನನ್ನ ಮಾತಿನಲ್ಲಿ ನಂಬುಗೆ ಇಲ್ಲದಿದ್ದರೆ ಪ್ರಯತ್ನ ಮಾಡಿ ನೋಡಿ.

#ಅಭಿವೃದ್ಧಿ ಯ ವಿರುದ್ಧ ದನಿ ಎತ್ತದ ಇಂತಹ ಹೋರಾಟಗಳು ಕ್ಷಣಿಕ ಆರಾಮು ನೀಡುವ ಪೇನ್ ಕಿಲ್ಲರ್ ಗಳು ಅಷ್ಟೆ.

This is an #impractical movement ..

 

ಮಂಗಳೂರಿನ ಹೋರಾಟಗಾರ ಮುನೀರ್ ಕಾಟಿಪಳ್ಳ ಇದನ್ನು ಬೆಂಬಲಿಸುತ್ತಾರಾದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳುತ್ತಾರೆ.

ಉದ್ಯೋಗ ಸೃಷ್ಟಿಯ ಆಮಿಷವನ್ನು ಒಡ್ಡಿ ತುಳುನಾಡಿನ ಚಿನ್ನದಂತಹ ಭೂಮಿ, ನೇತ್ರಾವತಿಯ ಅಮೃತದಂತಹ ನೀರನ್ನು ಪಡೆದು ಸ್ಥಾಪನೆಯಾದ mrpl ಉದ್ಯೋಗ ಸೃಷ್ಟಿಸಿದ್ದು ಅಷ್ಟರಲ್ಲೇ ಇದೆ. ನಾಲ್ಕುಸಾವಿರ ಎಕರೆ ಭೂಮಿ, ಲಕ್ಷಾಂತರ ಕೋಟಿ ಹಣ ಹೂಡಿಯೂ ಸೃಷ್ಟಿಯಾಗಿರುವ ಉದ್ಯೋಗ ಎರಡು ಸಾವಿರಕ್ಕೂ ಕಡಿಮೆ. ಆ ಎರಡು ಸಾವಿರದಲ್ಲಿ ಕನ್ನಡಿಗರ ಸಂಖ್ಯೆ ಶೇಕಡಾ 25 ರಷ್ಟೂ ಇಲ್ಲ. ತುಳುವರನ್ನುಹುಡುಕಬೇಕಷ್ಟೆ. ಉದ್ಯೋಗ ಸಿಕ್ಕವರಲ್ಲಿ ಬಹುತೇಕರು ಭೂಮಿ ಕೊಟ್ಟ ಕಾರಣಕ್ಕೆ ಪ್ರತಿಯಾಗಿ ಪಡೆದುಕೊಂಡದ್ದೇ ಹೆಚ್ಚು. ಅಂತಹ mrpl ತಿಂಗಳ ಹಿಂದೆ 150 ಅಪ್ರೆಂಟಿಸ್ ಗಳನ್ನು ನೇಮಕಾತಿಮಾಡಿಕೊಂಡಿತು. ಆ 150 ರಲ್ಲಿ ತುಳುವರು ಬಿಡಿ, ಕನ್ನಡಿಗರು ಒಬ್ಬರೂ ಇಲ್ಲವಂತೆ. ಇದು ಅತ್ಯಂತ ಕಳವಳಕಾರಿ ಸಂಗತಿ.

ಈ ಅನ್ಯಾಯ, ತಾರತಮ್ಯ ಕೊನೆಯಾಗಲೇ ಬೇಕು. ನಮ್ಮ ನೆಲ, ಜಲವನ್ನು ಬಳಸಿ ಸ್ಥಾಪನೆಯಾಗುವ ಕೈಗಾರಿಕೆ, ಉದ್ದಿಮೆ, ವ್ಯವಹಾರಗಳು ಉದ್ಯೋಗವನ್ನು ಸೃಷ್ಟಿಸಬೇಕು, ಸ್ಥಳೀಯರಿಗೆ ಅದರಲ್ಲಿಆದ್ಯತೆಯಲ್ಲಿ ಉದ್ಯೋಗ ಸಿಗಲೇಬೇಕು. ಅದಿಲ್ಲದಿದ್ದರೆ ಎದ್ದು ಹೊರ ನಡೆಯಿರಿ ಅನ್ನಬೇಕು.

(ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಕೊಡಿ ಟ್ವಿಟ್ಟರ್, ಫೇಸ್ ಬುಕ್ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಅಂದಾಭಿಮಾನವೋ, ಪರ ರಾಜ್ಯದವರ ಕುರಿತುಅಸಹನೆಯೋ ಆಗಬಾರದು. ಹೊರ ರಾಜ್ಯದವರೂ ಇರಲಿ. ಕನ್ನಡಿಗರಿಗೆ, ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶ ಸಿಗಲಿ ಎಂಬುದು ನನ್ನ ನಿಲುವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಡೀದೇಶದಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸ ಸರಕಾರದ ಆದ್ಯತೆ ಆಗಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ದತಿ ರದ್ದಾಗಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆಯ ಕಾನೂನುಗಳುಜಾರಿಯಾಗಬೇಕು. ಒಟ್ಟಾರೆ ಹೋರಾಟ ನಿರುದ್ಯೋಗ, ಅರೆ ಉದ್ಯೋಗದ ವಿರುದ್ದ, ಸ್ಥಳೀಯರಿಗೆ ಆದ್ಯತೆ ಎಂದಾಗಬೇಕು)

#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೆ_ಸಿಗಲಿ
#karnatakaJobsForKannadigas

 

ಪ್ರದೀಪ್ ತೊರೆನೂರು ಎನ್ನುವವರೂ ಸಹಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗ್ಳೂರಿನಲ್ಲಿ ಒಂದು ಸುತ್ತು ತಿರುಗಾಡುತ್ತಾ ನೋಡಿದರೆ ಹಲವಾರು ಉದ್ಯಮಗಳು ಹಾಗೂ ಕೆಲಸ ಮಾಡುವ ಜನ ಕನ್ನಡೇತರರು ಕಾಣಿಸುತ್ತಾರೆ … ಮತ್ತೊಂದೆಡೆ ಹಲವಾರು ಕನ್ನಡಿಗರು ಕೆಲಸ ಸಿಗದೆ ಒದ್ದಾಡುತ್ತಿದ್ದಾರೆ …

ಸ್ವತಂತ್ರ ನಂತರ ಕೇವಲ ಕೇಂದ್ರ ಸರ್ಕಾರ ಕಚೇರಿ ಹೆಚ್ ಎ ಎಲ್ , ಬೆಮ್‌ಲ್ , ಮುಂತಾದ ಕಡೆ ತಮ್ಮ ಬೇರು ಗಟ್ಟಿ ಮಾಡಿಕೊಂಡು ಅನ್ಯ ಭಾಷಿಕರು ಕರ್ನಾಟಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು , ಅದುಕ್ರಮೇಣ ಮಾಹಿತಿ ತಂತ್ರಜಾನ ಕಾರ್ಖಾನೆಗಳಲ್ಲಿ ಅನ್ಯ ರಾಜ್ಯದವರು ತಮ್ಮ ಹಿಡಿತ ಇಟ್ಟುಕೊಂಡು ಕನ್ನಡಿಗರು ಏನೇ ಓದಿ , ಒಳ್ಳೆಯ ಅನುಭವ ಇದ್ದರೂ ಅವರನ್ನು ಕಡೆಗಣಿಸಿದರು ..

ಈ ದೊಡ್ಡ ಮಟ್ಟದ ಕಾರ್ಖನಗಳಲ್ಲಿ ಇದ್ದ ಅನ್ಯ ಭಾಷಿಕರ ಜನ ಇವತ್ತು ನನಗೆ ಆಟೋ ಗಳಲ್ಲಿ , ಮಾಲ್ ಗಳಲ್ಲಿ , ಚಿಕ್ಕ ಚಿಕ್ಕ ಉದ್ಯಮಗಳಲ್ಲಿ ನಿಧಾನವಾಗಿ ತಮ್ಮ ಬೇರು ಗಟ್ಟಿ ಮಾಡಿಕೊಳ್ಳುತಿರುವುದುಕನ್ನಡಿಗರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುವ ಅವಕಾಶಗಳು ಕಡಿಮೆಯಾಗಳಿದ್ದು, ಬೆಂಗಳೂರು ನಿಧಾನವಾಗಿ ಅನ್ಯ ರಾಜ್ಯದವರ ತೆಕ್ಕೆಗೆ ಬೀಳುವುದು ಶತ ಸಿದ್ದ !

ಮೊದಲನೆಯದಾಗಿ ಕರ್ನಾಟಕ ಸರ್ಕಾರ ರಾಜ್ಯದ ಒಟ್ಟೂ ನಿರುದ್ಯೋಗಿಗಳ ಅಂಕಿ ಅಂಶ ಬಗ್ಗೆ ಜನರಿಗೆ ತಿಳಿಸಬೇಕು ! ಪ್ರತಿಯೊಂದು ಉದ್ಯಮದಲ್ಲಿ ಸ್ಥಳೀಯರು ಇರುವ ಅಂಕಿ ಅಂಶ ಬಯಲಾಗಬೇಕು ! ಇಂದು ಕಸದ ಕಾಂಟ್ರ್ಯಾಕ್ಟ್ ಗಳಿಂದ ಯಾವ ಯಾವ ಕಾಂಟ್ರ್ಯಾಕ್ಟ್ ಗಳು ಕನ್ನಡಿಗರಿಗೆ ಸಿಕ್ಕಿದೆ , ಅನ್ಯ ಭಾಷಿಕರಿಗೆ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಕರ್ನಾಟಕ ಸರ್ಕಾರ ಬಹಿರಂಗ ಪಡಿಸಲಿ

ಇಲ್ಲಿ ಅನ್ಯಭಾಷಿಕರ ಸಂಖ್ಯೆ ಆಯಾ ರಾಜ್ಯದ ಆಧಾರದ ಮೇಲೆ ವಿಂಗಡಣೆಯಾಗಿ ಆಯಾ ರಾಜ್ಯದ ಉದ್ಯೋಗ ಸೃಷ್ಟಿಸುವಲ್ಲಿ ಆಯಾ ರಾಜ್ಯದ ವೈಪಲ್ಯ ಎತ್ತಿ ತೋರಿಸಬೇಕು !

#Nation_First ಎಂದರೆ ನಮ್ಮ ಕೆಲಸ ಉದ್ಯಮ ಹಾಗೂ ಸ್ವಾಭಿಮವನ್ನು ಅನ್ಯ ರಾಜ್ಯದವರಿಗೆ ಕೊಟ್ಟು ನಾವು ಬಿಕಾರಿ ಯಾಗುವುದಲ್ಲ , ನಾವು ನಮ್ಮ ಹಕ್ಕನ್ನು ಪಡೆದು , ಸ್ಥಳೀಯರಾಗಿ ಕೆಲಸ ಪಡೆದು ,ಒಳ್ಳೆಯ ವ್ಯಾಪಾರ ವಹಿವಾಟು ಮಾಡಿ ಭಾರತ ದೇಶದ ಅಭಿವೃದ್ದಿಗಾಗಿ ಶ್ರಮಿಸುವುದು !

ಸ್ಥಳೀಯರಿಗೆ ಕೆಲ್ಸ ಸಿಕ್ಕ ಮೆಳ್ಳೆ ಉಳಿದ ಕೆಲಸಗಳು ಅನ್ಯ ರಾಜ್ಯದವರು ಪಡೆಯಬಹುದು !

ಇದು ಆಗದೆ ಇದ್ದಲ್ಲಿ ಕನ್ನಡಿಗರು ತಮ್ಮದೇ ನಾಡಿನಲ್ಲಿ ಕೆಲಸ ಇಲ್ಲದೆ ಪರದಾಡುವ ದಿನ ಬರುವುದು ಶತಸಿದ್ದ !

#KarnatakaJobsForKannadigas
#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೇ_ಸಿಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...