Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

- Advertisement -
- Advertisement -

ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಟ್ವಿಟ್ಟರ್ ಟ್ರೆಂಡಿಂಗ್ #KarnatakaJobsForKannadigas ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ಚರ್ಚಿಸಿದ್ದರು. ಬಹುತೇಕರು ಅದನ್ನು ಬೆಂಬಲಿಸಿದ್ದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ. ಕೆಲವರು ಇದು ಪ್ರಾಕ್ಟಿಕಲ್ ಅಲ್ಲ ಎಂದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನಷ್ಟ ಆಗುತ್ತಿರುವುದು ಎಲ್ಲಿ ಎಂಬ ಕುರಿತು ಉದಾಹರಣೆಗಳ ಮೂಲಕ ಚರ್ಚೆ ನಡೆದಿದೆ.

ಪತ್ರಕರ್ತರಾದ ನವೀನ್ ಸೂರಿಂಜೆ ಈ ರೀತಿ ಹೇಳುತ್ತಾರೆ.

ಕರಾವಳಿಯಲ್ಲಿ ಸ್ಥಾಪನೆಯಾದ ವಿಜಯಾ ಬ್ಯಾಂಕನ್ನು ಇನ್ನಿಲ್ಲದಂತೆ ಮಾಡಿದ ಬ್ಯಾಂಕ್ ವಿಲೀನ‌ ಪ್ರಕ್ರಿಯೆಯ ವಿರುದ್ದ ಮಾಡಿದ ಹೋರಾಟವೇನೋ ವ್ಯರ್ಥವಾಯ್ತು. ವಿಜಯಾ ಬ್ಯಾಂಕ್ ಇದ್ದಾಗಲೇ ಸ್ವಲ್ಪಅಸ್ಥೆ ವಹಿಸಿದ್ದರೆ ಬ್ಯಾಂಕ್ ಉಳಿಯುತ್ತಿತ್ತೇನೋ ! ಮೂಲ್ಕಿ ಸುಂದರರಾಮ ಶೆಟ್ಟರಿಂದ ವೈಭವದ ದಿನಗಳನ್ನು ಕಂಡ ವಿಜಯಾ ಬ್ಯಾಂಕಿನಲ್ಲಿ ಎಷ್ಟೊಂದು ಜನ ಪರಿಚಿತರು ಇದ್ದರು. ಮೂಲ್ಕಿಯವರೇಆಗಿದ್ದಕ್ಕೋ ಏನೋ… ನನ್ನಪ್ಪನ ಗೆಳೆಯರಲ್ಲಿ ಬಹುತೇಕರು ವಿಜಯಾ ಬ್ಯಾಂಕ್ ಸಿಬ್ಬಂದಿಗಳು. ನನ್ನ ತಲೆಮಾರಿನ ಯಾರೂ ಕೂಡಾ ನಾನು ವಿಜಯಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಂಡಿದ್ದನ್ನು ನಾನುಕೇಳಿಲ್ಲ. ಆಗಲೇ ನಮಗೆ ಅಪಾಯ ಅರಿವಾಗಬೇಕಿತ್ತು.
ನನ್ನೂರಲ್ಲಿ ಹುಟ್ಟಿದ ಬ್ಯಾಂಕ್ ನಲ್ಲಿ ನನ್ನೂರಿನ ಯುವಕರಿಗೆ ಕೆಲಸ ವಂಚಿಸಿ, ಪರ ಬಾಷಿಕರಿಗೆ ಉದ್ಯೋಗ ನೀಡಿದಾಗಲೇ ವಿಜಯಾ ಬ್ಯಾಂಕ್ ಅವನತಿ ಪರ್ವ ಪ್ರಾರಂಭವಾಗಿತ್ತು. ಇವತ್ತು ವಿಜಯಾ ಬ್ಯಾಂಕ್ಉದ್ಯೋಗಿಗಳೆಲ್ಲರೂ ಕನ್ನಡಿಗರಾಗಿದ್ದರೆ ವಿಲೀನ ಪ್ರಕ್ರಿಯೆಗೆ ಉದ್ಯೋಗಿಗಳ ಪ್ರತಿಕ್ರಿಯೆ ಹೇಗಿರುತ್ತಿತ್ತು ?
ವಿಜಯಾ ಬ್ಯಾಂಕನ್ನೇನೋ ಕಳೆದುಕೊಂಡೆವು. ಕನ್ನಡಿಗರ ಉಳಿದ ಬ್ಯಾಂಕುಗಳನ್ನಾದರೂ ರಕ್ಷಿಸಬೇಕಿದೆ. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪ್ರಾತಿನಿದ್ಯ ಸಿಗಬೇಕಿದೆ. ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆಅವಕಾಶ ನೀಡಬೇಕಿದೆ.
ಸದ್ಯ, ಕನ್ನಡಿಗರೆಲ್ಲರೂ ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಚಳುವಳಿಯಲ್ಲಿ ಭಾಗಿಯಾಗಬೇಕಿದೆ.

ಎಂ.ಎಸ್.ಶ್ರೀ ಹರ್ಷ ಎನ್ನುವವರು ಇದಕ್ಕೆ ಸಹಮತ ಹೊಂದಿಲ್ಲ.

ಇದು ಪ್ರಾಕ್ಟಿಕಲ್ ಅಲ್ಲ. ಅಭಿವೃದ್ಧಿ ಆದ ಕಡೆ ವಲಸೆ ಆಗಿಯೇ ಆಗುತ್ತದೆ. ಇಂತಹ ಹೋರಾಟಗಳಿಂದ ಏನೂ ಪ್ರಯೋಜನವಿಲ್ಲ. ನನ್ನ ಮಾತಿನಲ್ಲಿ ನಂಬುಗೆ ಇಲ್ಲದಿದ್ದರೆ ಪ್ರಯತ್ನ ಮಾಡಿ ನೋಡಿ.

#ಅಭಿವೃದ್ಧಿ ಯ ವಿರುದ್ಧ ದನಿ ಎತ್ತದ ಇಂತಹ ಹೋರಾಟಗಳು ಕ್ಷಣಿಕ ಆರಾಮು ನೀಡುವ ಪೇನ್ ಕಿಲ್ಲರ್ ಗಳು ಅಷ್ಟೆ.

This is an #impractical movement ..

 

ಮಂಗಳೂರಿನ ಹೋರಾಟಗಾರ ಮುನೀರ್ ಕಾಟಿಪಳ್ಳ ಇದನ್ನು ಬೆಂಬಲಿಸುತ್ತಾರಾದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳುತ್ತಾರೆ.

ಉದ್ಯೋಗ ಸೃಷ್ಟಿಯ ಆಮಿಷವನ್ನು ಒಡ್ಡಿ ತುಳುನಾಡಿನ ಚಿನ್ನದಂತಹ ಭೂಮಿ, ನೇತ್ರಾವತಿಯ ಅಮೃತದಂತಹ ನೀರನ್ನು ಪಡೆದು ಸ್ಥಾಪನೆಯಾದ mrpl ಉದ್ಯೋಗ ಸೃಷ್ಟಿಸಿದ್ದು ಅಷ್ಟರಲ್ಲೇ ಇದೆ. ನಾಲ್ಕುಸಾವಿರ ಎಕರೆ ಭೂಮಿ, ಲಕ್ಷಾಂತರ ಕೋಟಿ ಹಣ ಹೂಡಿಯೂ ಸೃಷ್ಟಿಯಾಗಿರುವ ಉದ್ಯೋಗ ಎರಡು ಸಾವಿರಕ್ಕೂ ಕಡಿಮೆ. ಆ ಎರಡು ಸಾವಿರದಲ್ಲಿ ಕನ್ನಡಿಗರ ಸಂಖ್ಯೆ ಶೇಕಡಾ 25 ರಷ್ಟೂ ಇಲ್ಲ. ತುಳುವರನ್ನುಹುಡುಕಬೇಕಷ್ಟೆ. ಉದ್ಯೋಗ ಸಿಕ್ಕವರಲ್ಲಿ ಬಹುತೇಕರು ಭೂಮಿ ಕೊಟ್ಟ ಕಾರಣಕ್ಕೆ ಪ್ರತಿಯಾಗಿ ಪಡೆದುಕೊಂಡದ್ದೇ ಹೆಚ್ಚು. ಅಂತಹ mrpl ತಿಂಗಳ ಹಿಂದೆ 150 ಅಪ್ರೆಂಟಿಸ್ ಗಳನ್ನು ನೇಮಕಾತಿಮಾಡಿಕೊಂಡಿತು. ಆ 150 ರಲ್ಲಿ ತುಳುವರು ಬಿಡಿ, ಕನ್ನಡಿಗರು ಒಬ್ಬರೂ ಇಲ್ಲವಂತೆ. ಇದು ಅತ್ಯಂತ ಕಳವಳಕಾರಿ ಸಂಗತಿ.

ಈ ಅನ್ಯಾಯ, ತಾರತಮ್ಯ ಕೊನೆಯಾಗಲೇ ಬೇಕು. ನಮ್ಮ ನೆಲ, ಜಲವನ್ನು ಬಳಸಿ ಸ್ಥಾಪನೆಯಾಗುವ ಕೈಗಾರಿಕೆ, ಉದ್ದಿಮೆ, ವ್ಯವಹಾರಗಳು ಉದ್ಯೋಗವನ್ನು ಸೃಷ್ಟಿಸಬೇಕು, ಸ್ಥಳೀಯರಿಗೆ ಅದರಲ್ಲಿಆದ್ಯತೆಯಲ್ಲಿ ಉದ್ಯೋಗ ಸಿಗಲೇಬೇಕು. ಅದಿಲ್ಲದಿದ್ದರೆ ಎದ್ದು ಹೊರ ನಡೆಯಿರಿ ಅನ್ನಬೇಕು.

(ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಕೊಡಿ ಟ್ವಿಟ್ಟರ್, ಫೇಸ್ ಬುಕ್ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಅಂದಾಭಿಮಾನವೋ, ಪರ ರಾಜ್ಯದವರ ಕುರಿತುಅಸಹನೆಯೋ ಆಗಬಾರದು. ಹೊರ ರಾಜ್ಯದವರೂ ಇರಲಿ. ಕನ್ನಡಿಗರಿಗೆ, ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶ ಸಿಗಲಿ ಎಂಬುದು ನನ್ನ ನಿಲುವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಡೀದೇಶದಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸ ಸರಕಾರದ ಆದ್ಯತೆ ಆಗಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ದತಿ ರದ್ದಾಗಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆಯ ಕಾನೂನುಗಳುಜಾರಿಯಾಗಬೇಕು. ಒಟ್ಟಾರೆ ಹೋರಾಟ ನಿರುದ್ಯೋಗ, ಅರೆ ಉದ್ಯೋಗದ ವಿರುದ್ದ, ಸ್ಥಳೀಯರಿಗೆ ಆದ್ಯತೆ ಎಂದಾಗಬೇಕು)

#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೆ_ಸಿಗಲಿ
#karnatakaJobsForKannadigas

 

ಪ್ರದೀಪ್ ತೊರೆನೂರು ಎನ್ನುವವರೂ ಸಹಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗ್ಳೂರಿನಲ್ಲಿ ಒಂದು ಸುತ್ತು ತಿರುಗಾಡುತ್ತಾ ನೋಡಿದರೆ ಹಲವಾರು ಉದ್ಯಮಗಳು ಹಾಗೂ ಕೆಲಸ ಮಾಡುವ ಜನ ಕನ್ನಡೇತರರು ಕಾಣಿಸುತ್ತಾರೆ … ಮತ್ತೊಂದೆಡೆ ಹಲವಾರು ಕನ್ನಡಿಗರು ಕೆಲಸ ಸಿಗದೆ ಒದ್ದಾಡುತ್ತಿದ್ದಾರೆ …

ಸ್ವತಂತ್ರ ನಂತರ ಕೇವಲ ಕೇಂದ್ರ ಸರ್ಕಾರ ಕಚೇರಿ ಹೆಚ್ ಎ ಎಲ್ , ಬೆಮ್‌ಲ್ , ಮುಂತಾದ ಕಡೆ ತಮ್ಮ ಬೇರು ಗಟ್ಟಿ ಮಾಡಿಕೊಂಡು ಅನ್ಯ ಭಾಷಿಕರು ಕರ್ನಾಟಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು , ಅದುಕ್ರಮೇಣ ಮಾಹಿತಿ ತಂತ್ರಜಾನ ಕಾರ್ಖಾನೆಗಳಲ್ಲಿ ಅನ್ಯ ರಾಜ್ಯದವರು ತಮ್ಮ ಹಿಡಿತ ಇಟ್ಟುಕೊಂಡು ಕನ್ನಡಿಗರು ಏನೇ ಓದಿ , ಒಳ್ಳೆಯ ಅನುಭವ ಇದ್ದರೂ ಅವರನ್ನು ಕಡೆಗಣಿಸಿದರು ..

ಈ ದೊಡ್ಡ ಮಟ್ಟದ ಕಾರ್ಖನಗಳಲ್ಲಿ ಇದ್ದ ಅನ್ಯ ಭಾಷಿಕರ ಜನ ಇವತ್ತು ನನಗೆ ಆಟೋ ಗಳಲ್ಲಿ , ಮಾಲ್ ಗಳಲ್ಲಿ , ಚಿಕ್ಕ ಚಿಕ್ಕ ಉದ್ಯಮಗಳಲ್ಲಿ ನಿಧಾನವಾಗಿ ತಮ್ಮ ಬೇರು ಗಟ್ಟಿ ಮಾಡಿಕೊಳ್ಳುತಿರುವುದುಕನ್ನಡಿಗರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುವ ಅವಕಾಶಗಳು ಕಡಿಮೆಯಾಗಳಿದ್ದು, ಬೆಂಗಳೂರು ನಿಧಾನವಾಗಿ ಅನ್ಯ ರಾಜ್ಯದವರ ತೆಕ್ಕೆಗೆ ಬೀಳುವುದು ಶತ ಸಿದ್ದ !

ಮೊದಲನೆಯದಾಗಿ ಕರ್ನಾಟಕ ಸರ್ಕಾರ ರಾಜ್ಯದ ಒಟ್ಟೂ ನಿರುದ್ಯೋಗಿಗಳ ಅಂಕಿ ಅಂಶ ಬಗ್ಗೆ ಜನರಿಗೆ ತಿಳಿಸಬೇಕು ! ಪ್ರತಿಯೊಂದು ಉದ್ಯಮದಲ್ಲಿ ಸ್ಥಳೀಯರು ಇರುವ ಅಂಕಿ ಅಂಶ ಬಯಲಾಗಬೇಕು ! ಇಂದು ಕಸದ ಕಾಂಟ್ರ್ಯಾಕ್ಟ್ ಗಳಿಂದ ಯಾವ ಯಾವ ಕಾಂಟ್ರ್ಯಾಕ್ಟ್ ಗಳು ಕನ್ನಡಿಗರಿಗೆ ಸಿಕ್ಕಿದೆ , ಅನ್ಯ ಭಾಷಿಕರಿಗೆ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಕರ್ನಾಟಕ ಸರ್ಕಾರ ಬಹಿರಂಗ ಪಡಿಸಲಿ

ಇಲ್ಲಿ ಅನ್ಯಭಾಷಿಕರ ಸಂಖ್ಯೆ ಆಯಾ ರಾಜ್ಯದ ಆಧಾರದ ಮೇಲೆ ವಿಂಗಡಣೆಯಾಗಿ ಆಯಾ ರಾಜ್ಯದ ಉದ್ಯೋಗ ಸೃಷ್ಟಿಸುವಲ್ಲಿ ಆಯಾ ರಾಜ್ಯದ ವೈಪಲ್ಯ ಎತ್ತಿ ತೋರಿಸಬೇಕು !

#Nation_First ಎಂದರೆ ನಮ್ಮ ಕೆಲಸ ಉದ್ಯಮ ಹಾಗೂ ಸ್ವಾಭಿಮವನ್ನು ಅನ್ಯ ರಾಜ್ಯದವರಿಗೆ ಕೊಟ್ಟು ನಾವು ಬಿಕಾರಿ ಯಾಗುವುದಲ್ಲ , ನಾವು ನಮ್ಮ ಹಕ್ಕನ್ನು ಪಡೆದು , ಸ್ಥಳೀಯರಾಗಿ ಕೆಲಸ ಪಡೆದು ,ಒಳ್ಳೆಯ ವ್ಯಾಪಾರ ವಹಿವಾಟು ಮಾಡಿ ಭಾರತ ದೇಶದ ಅಭಿವೃದ್ದಿಗಾಗಿ ಶ್ರಮಿಸುವುದು !

ಸ್ಥಳೀಯರಿಗೆ ಕೆಲ್ಸ ಸಿಕ್ಕ ಮೆಳ್ಳೆ ಉಳಿದ ಕೆಲಸಗಳು ಅನ್ಯ ರಾಜ್ಯದವರು ಪಡೆಯಬಹುದು !

ಇದು ಆಗದೆ ಇದ್ದಲ್ಲಿ ಕನ್ನಡಿಗರು ತಮ್ಮದೇ ನಾಡಿನಲ್ಲಿ ಕೆಲಸ ಇಲ್ಲದೆ ಪರದಾಡುವ ದಿನ ಬರುವುದು ಶತಸಿದ್ದ !

#KarnatakaJobsForKannadigas
#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೇ_ಸಿಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...