Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

- Advertisement -
- Advertisement -

ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಟ್ವಿಟ್ಟರ್ ಟ್ರೆಂಡಿಂಗ್ #KarnatakaJobsForKannadigas ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ಚರ್ಚಿಸಿದ್ದರು. ಬಹುತೇಕರು ಅದನ್ನು ಬೆಂಬಲಿಸಿದ್ದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ. ಕೆಲವರು ಇದು ಪ್ರಾಕ್ಟಿಕಲ್ ಅಲ್ಲ ಎಂದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನಷ್ಟ ಆಗುತ್ತಿರುವುದು ಎಲ್ಲಿ ಎಂಬ ಕುರಿತು ಉದಾಹರಣೆಗಳ ಮೂಲಕ ಚರ್ಚೆ ನಡೆದಿದೆ.

ಪತ್ರಕರ್ತರಾದ ನವೀನ್ ಸೂರಿಂಜೆ ಈ ರೀತಿ ಹೇಳುತ್ತಾರೆ.

ಕರಾವಳಿಯಲ್ಲಿ ಸ್ಥಾಪನೆಯಾದ ವಿಜಯಾ ಬ್ಯಾಂಕನ್ನು ಇನ್ನಿಲ್ಲದಂತೆ ಮಾಡಿದ ಬ್ಯಾಂಕ್ ವಿಲೀನ‌ ಪ್ರಕ್ರಿಯೆಯ ವಿರುದ್ದ ಮಾಡಿದ ಹೋರಾಟವೇನೋ ವ್ಯರ್ಥವಾಯ್ತು. ವಿಜಯಾ ಬ್ಯಾಂಕ್ ಇದ್ದಾಗಲೇ ಸ್ವಲ್ಪಅಸ್ಥೆ ವಹಿಸಿದ್ದರೆ ಬ್ಯಾಂಕ್ ಉಳಿಯುತ್ತಿತ್ತೇನೋ ! ಮೂಲ್ಕಿ ಸುಂದರರಾಮ ಶೆಟ್ಟರಿಂದ ವೈಭವದ ದಿನಗಳನ್ನು ಕಂಡ ವಿಜಯಾ ಬ್ಯಾಂಕಿನಲ್ಲಿ ಎಷ್ಟೊಂದು ಜನ ಪರಿಚಿತರು ಇದ್ದರು. ಮೂಲ್ಕಿಯವರೇಆಗಿದ್ದಕ್ಕೋ ಏನೋ… ನನ್ನಪ್ಪನ ಗೆಳೆಯರಲ್ಲಿ ಬಹುತೇಕರು ವಿಜಯಾ ಬ್ಯಾಂಕ್ ಸಿಬ್ಬಂದಿಗಳು. ನನ್ನ ತಲೆಮಾರಿನ ಯಾರೂ ಕೂಡಾ ನಾನು ವಿಜಯಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಂಡಿದ್ದನ್ನು ನಾನುಕೇಳಿಲ್ಲ. ಆಗಲೇ ನಮಗೆ ಅಪಾಯ ಅರಿವಾಗಬೇಕಿತ್ತು.
ನನ್ನೂರಲ್ಲಿ ಹುಟ್ಟಿದ ಬ್ಯಾಂಕ್ ನಲ್ಲಿ ನನ್ನೂರಿನ ಯುವಕರಿಗೆ ಕೆಲಸ ವಂಚಿಸಿ, ಪರ ಬಾಷಿಕರಿಗೆ ಉದ್ಯೋಗ ನೀಡಿದಾಗಲೇ ವಿಜಯಾ ಬ್ಯಾಂಕ್ ಅವನತಿ ಪರ್ವ ಪ್ರಾರಂಭವಾಗಿತ್ತು. ಇವತ್ತು ವಿಜಯಾ ಬ್ಯಾಂಕ್ಉದ್ಯೋಗಿಗಳೆಲ್ಲರೂ ಕನ್ನಡಿಗರಾಗಿದ್ದರೆ ವಿಲೀನ ಪ್ರಕ್ರಿಯೆಗೆ ಉದ್ಯೋಗಿಗಳ ಪ್ರತಿಕ್ರಿಯೆ ಹೇಗಿರುತ್ತಿತ್ತು ?
ವಿಜಯಾ ಬ್ಯಾಂಕನ್ನೇನೋ ಕಳೆದುಕೊಂಡೆವು. ಕನ್ನಡಿಗರ ಉಳಿದ ಬ್ಯಾಂಕುಗಳನ್ನಾದರೂ ರಕ್ಷಿಸಬೇಕಿದೆ. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪ್ರಾತಿನಿದ್ಯ ಸಿಗಬೇಕಿದೆ. ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆಅವಕಾಶ ನೀಡಬೇಕಿದೆ.
ಸದ್ಯ, ಕನ್ನಡಿಗರೆಲ್ಲರೂ ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಚಳುವಳಿಯಲ್ಲಿ ಭಾಗಿಯಾಗಬೇಕಿದೆ.

ಎಂ.ಎಸ್.ಶ್ರೀ ಹರ್ಷ ಎನ್ನುವವರು ಇದಕ್ಕೆ ಸಹಮತ ಹೊಂದಿಲ್ಲ.

ಇದು ಪ್ರಾಕ್ಟಿಕಲ್ ಅಲ್ಲ. ಅಭಿವೃದ್ಧಿ ಆದ ಕಡೆ ವಲಸೆ ಆಗಿಯೇ ಆಗುತ್ತದೆ. ಇಂತಹ ಹೋರಾಟಗಳಿಂದ ಏನೂ ಪ್ರಯೋಜನವಿಲ್ಲ. ನನ್ನ ಮಾತಿನಲ್ಲಿ ನಂಬುಗೆ ಇಲ್ಲದಿದ್ದರೆ ಪ್ರಯತ್ನ ಮಾಡಿ ನೋಡಿ.

#ಅಭಿವೃದ್ಧಿ ಯ ವಿರುದ್ಧ ದನಿ ಎತ್ತದ ಇಂತಹ ಹೋರಾಟಗಳು ಕ್ಷಣಿಕ ಆರಾಮು ನೀಡುವ ಪೇನ್ ಕಿಲ್ಲರ್ ಗಳು ಅಷ್ಟೆ.

This is an #impractical movement ..

 

ಮಂಗಳೂರಿನ ಹೋರಾಟಗಾರ ಮುನೀರ್ ಕಾಟಿಪಳ್ಳ ಇದನ್ನು ಬೆಂಬಲಿಸುತ್ತಾರಾದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳುತ್ತಾರೆ.

ಉದ್ಯೋಗ ಸೃಷ್ಟಿಯ ಆಮಿಷವನ್ನು ಒಡ್ಡಿ ತುಳುನಾಡಿನ ಚಿನ್ನದಂತಹ ಭೂಮಿ, ನೇತ್ರಾವತಿಯ ಅಮೃತದಂತಹ ನೀರನ್ನು ಪಡೆದು ಸ್ಥಾಪನೆಯಾದ mrpl ಉದ್ಯೋಗ ಸೃಷ್ಟಿಸಿದ್ದು ಅಷ್ಟರಲ್ಲೇ ಇದೆ. ನಾಲ್ಕುಸಾವಿರ ಎಕರೆ ಭೂಮಿ, ಲಕ್ಷಾಂತರ ಕೋಟಿ ಹಣ ಹೂಡಿಯೂ ಸೃಷ್ಟಿಯಾಗಿರುವ ಉದ್ಯೋಗ ಎರಡು ಸಾವಿರಕ್ಕೂ ಕಡಿಮೆ. ಆ ಎರಡು ಸಾವಿರದಲ್ಲಿ ಕನ್ನಡಿಗರ ಸಂಖ್ಯೆ ಶೇಕಡಾ 25 ರಷ್ಟೂ ಇಲ್ಲ. ತುಳುವರನ್ನುಹುಡುಕಬೇಕಷ್ಟೆ. ಉದ್ಯೋಗ ಸಿಕ್ಕವರಲ್ಲಿ ಬಹುತೇಕರು ಭೂಮಿ ಕೊಟ್ಟ ಕಾರಣಕ್ಕೆ ಪ್ರತಿಯಾಗಿ ಪಡೆದುಕೊಂಡದ್ದೇ ಹೆಚ್ಚು. ಅಂತಹ mrpl ತಿಂಗಳ ಹಿಂದೆ 150 ಅಪ್ರೆಂಟಿಸ್ ಗಳನ್ನು ನೇಮಕಾತಿಮಾಡಿಕೊಂಡಿತು. ಆ 150 ರಲ್ಲಿ ತುಳುವರು ಬಿಡಿ, ಕನ್ನಡಿಗರು ಒಬ್ಬರೂ ಇಲ್ಲವಂತೆ. ಇದು ಅತ್ಯಂತ ಕಳವಳಕಾರಿ ಸಂಗತಿ.

ಈ ಅನ್ಯಾಯ, ತಾರತಮ್ಯ ಕೊನೆಯಾಗಲೇ ಬೇಕು. ನಮ್ಮ ನೆಲ, ಜಲವನ್ನು ಬಳಸಿ ಸ್ಥಾಪನೆಯಾಗುವ ಕೈಗಾರಿಕೆ, ಉದ್ದಿಮೆ, ವ್ಯವಹಾರಗಳು ಉದ್ಯೋಗವನ್ನು ಸೃಷ್ಟಿಸಬೇಕು, ಸ್ಥಳೀಯರಿಗೆ ಅದರಲ್ಲಿಆದ್ಯತೆಯಲ್ಲಿ ಉದ್ಯೋಗ ಸಿಗಲೇಬೇಕು. ಅದಿಲ್ಲದಿದ್ದರೆ ಎದ್ದು ಹೊರ ನಡೆಯಿರಿ ಅನ್ನಬೇಕು.

(ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಕೊಡಿ ಟ್ವಿಟ್ಟರ್, ಫೇಸ್ ಬುಕ್ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಅಂದಾಭಿಮಾನವೋ, ಪರ ರಾಜ್ಯದವರ ಕುರಿತುಅಸಹನೆಯೋ ಆಗಬಾರದು. ಹೊರ ರಾಜ್ಯದವರೂ ಇರಲಿ. ಕನ್ನಡಿಗರಿಗೆ, ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶ ಸಿಗಲಿ ಎಂಬುದು ನನ್ನ ನಿಲುವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಡೀದೇಶದಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸ ಸರಕಾರದ ಆದ್ಯತೆ ಆಗಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ದತಿ ರದ್ದಾಗಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆಯ ಕಾನೂನುಗಳುಜಾರಿಯಾಗಬೇಕು. ಒಟ್ಟಾರೆ ಹೋರಾಟ ನಿರುದ್ಯೋಗ, ಅರೆ ಉದ್ಯೋಗದ ವಿರುದ್ದ, ಸ್ಥಳೀಯರಿಗೆ ಆದ್ಯತೆ ಎಂದಾಗಬೇಕು)

#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೆ_ಸಿಗಲಿ
#karnatakaJobsForKannadigas

 

ಪ್ರದೀಪ್ ತೊರೆನೂರು ಎನ್ನುವವರೂ ಸಹಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗ್ಳೂರಿನಲ್ಲಿ ಒಂದು ಸುತ್ತು ತಿರುಗಾಡುತ್ತಾ ನೋಡಿದರೆ ಹಲವಾರು ಉದ್ಯಮಗಳು ಹಾಗೂ ಕೆಲಸ ಮಾಡುವ ಜನ ಕನ್ನಡೇತರರು ಕಾಣಿಸುತ್ತಾರೆ … ಮತ್ತೊಂದೆಡೆ ಹಲವಾರು ಕನ್ನಡಿಗರು ಕೆಲಸ ಸಿಗದೆ ಒದ್ದಾಡುತ್ತಿದ್ದಾರೆ …

ಸ್ವತಂತ್ರ ನಂತರ ಕೇವಲ ಕೇಂದ್ರ ಸರ್ಕಾರ ಕಚೇರಿ ಹೆಚ್ ಎ ಎಲ್ , ಬೆಮ್‌ಲ್ , ಮುಂತಾದ ಕಡೆ ತಮ್ಮ ಬೇರು ಗಟ್ಟಿ ಮಾಡಿಕೊಂಡು ಅನ್ಯ ಭಾಷಿಕರು ಕರ್ನಾಟಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು , ಅದುಕ್ರಮೇಣ ಮಾಹಿತಿ ತಂತ್ರಜಾನ ಕಾರ್ಖಾನೆಗಳಲ್ಲಿ ಅನ್ಯ ರಾಜ್ಯದವರು ತಮ್ಮ ಹಿಡಿತ ಇಟ್ಟುಕೊಂಡು ಕನ್ನಡಿಗರು ಏನೇ ಓದಿ , ಒಳ್ಳೆಯ ಅನುಭವ ಇದ್ದರೂ ಅವರನ್ನು ಕಡೆಗಣಿಸಿದರು ..

ಈ ದೊಡ್ಡ ಮಟ್ಟದ ಕಾರ್ಖನಗಳಲ್ಲಿ ಇದ್ದ ಅನ್ಯ ಭಾಷಿಕರ ಜನ ಇವತ್ತು ನನಗೆ ಆಟೋ ಗಳಲ್ಲಿ , ಮಾಲ್ ಗಳಲ್ಲಿ , ಚಿಕ್ಕ ಚಿಕ್ಕ ಉದ್ಯಮಗಳಲ್ಲಿ ನಿಧಾನವಾಗಿ ತಮ್ಮ ಬೇರು ಗಟ್ಟಿ ಮಾಡಿಕೊಳ್ಳುತಿರುವುದುಕನ್ನಡಿಗರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುವ ಅವಕಾಶಗಳು ಕಡಿಮೆಯಾಗಳಿದ್ದು, ಬೆಂಗಳೂರು ನಿಧಾನವಾಗಿ ಅನ್ಯ ರಾಜ್ಯದವರ ತೆಕ್ಕೆಗೆ ಬೀಳುವುದು ಶತ ಸಿದ್ದ !

ಮೊದಲನೆಯದಾಗಿ ಕರ್ನಾಟಕ ಸರ್ಕಾರ ರಾಜ್ಯದ ಒಟ್ಟೂ ನಿರುದ್ಯೋಗಿಗಳ ಅಂಕಿ ಅಂಶ ಬಗ್ಗೆ ಜನರಿಗೆ ತಿಳಿಸಬೇಕು ! ಪ್ರತಿಯೊಂದು ಉದ್ಯಮದಲ್ಲಿ ಸ್ಥಳೀಯರು ಇರುವ ಅಂಕಿ ಅಂಶ ಬಯಲಾಗಬೇಕು ! ಇಂದು ಕಸದ ಕಾಂಟ್ರ್ಯಾಕ್ಟ್ ಗಳಿಂದ ಯಾವ ಯಾವ ಕಾಂಟ್ರ್ಯಾಕ್ಟ್ ಗಳು ಕನ್ನಡಿಗರಿಗೆ ಸಿಕ್ಕಿದೆ , ಅನ್ಯ ಭಾಷಿಕರಿಗೆ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಕರ್ನಾಟಕ ಸರ್ಕಾರ ಬಹಿರಂಗ ಪಡಿಸಲಿ

ಇಲ್ಲಿ ಅನ್ಯಭಾಷಿಕರ ಸಂಖ್ಯೆ ಆಯಾ ರಾಜ್ಯದ ಆಧಾರದ ಮೇಲೆ ವಿಂಗಡಣೆಯಾಗಿ ಆಯಾ ರಾಜ್ಯದ ಉದ್ಯೋಗ ಸೃಷ್ಟಿಸುವಲ್ಲಿ ಆಯಾ ರಾಜ್ಯದ ವೈಪಲ್ಯ ಎತ್ತಿ ತೋರಿಸಬೇಕು !

#Nation_First ಎಂದರೆ ನಮ್ಮ ಕೆಲಸ ಉದ್ಯಮ ಹಾಗೂ ಸ್ವಾಭಿಮವನ್ನು ಅನ್ಯ ರಾಜ್ಯದವರಿಗೆ ಕೊಟ್ಟು ನಾವು ಬಿಕಾರಿ ಯಾಗುವುದಲ್ಲ , ನಾವು ನಮ್ಮ ಹಕ್ಕನ್ನು ಪಡೆದು , ಸ್ಥಳೀಯರಾಗಿ ಕೆಲಸ ಪಡೆದು ,ಒಳ್ಳೆಯ ವ್ಯಾಪಾರ ವಹಿವಾಟು ಮಾಡಿ ಭಾರತ ದೇಶದ ಅಭಿವೃದ್ದಿಗಾಗಿ ಶ್ರಮಿಸುವುದು !

ಸ್ಥಳೀಯರಿಗೆ ಕೆಲ್ಸ ಸಿಕ್ಕ ಮೆಳ್ಳೆ ಉಳಿದ ಕೆಲಸಗಳು ಅನ್ಯ ರಾಜ್ಯದವರು ಪಡೆಯಬಹುದು !

ಇದು ಆಗದೆ ಇದ್ದಲ್ಲಿ ಕನ್ನಡಿಗರು ತಮ್ಮದೇ ನಾಡಿನಲ್ಲಿ ಕೆಲಸ ಇಲ್ಲದೆ ಪರದಾಡುವ ದಿನ ಬರುವುದು ಶತಸಿದ್ದ !

#KarnatakaJobsForKannadigas
#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೇ_ಸಿಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...