Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಲಿ: ನೆಟ್ಟಿಗರಿಂದ ಸ್ವಾರಸ್ಯಕರ ಮತ್ತು ಮಹತ್ವದ ಚರ್ಚೆ

- Advertisement -
- Advertisement -

ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಟ್ವಿಟ್ಟರ್ ಟ್ರೆಂಡಿಂಗ್ #KarnatakaJobsForKannadigas ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವರು ಚರ್ಚಿಸಿದ್ದರು. ಬಹುತೇಕರು ಅದನ್ನು ಬೆಂಬಲಿಸಿದ್ದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ. ಕೆಲವರು ಇದು ಪ್ರಾಕ್ಟಿಕಲ್ ಅಲ್ಲ ಎಂದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನಷ್ಟ ಆಗುತ್ತಿರುವುದು ಎಲ್ಲಿ ಎಂಬ ಕುರಿತು ಉದಾಹರಣೆಗಳ ಮೂಲಕ ಚರ್ಚೆ ನಡೆದಿದೆ.

ಪತ್ರಕರ್ತರಾದ ನವೀನ್ ಸೂರಿಂಜೆ ಈ ರೀತಿ ಹೇಳುತ್ತಾರೆ.

ಕರಾವಳಿಯಲ್ಲಿ ಸ್ಥಾಪನೆಯಾದ ವಿಜಯಾ ಬ್ಯಾಂಕನ್ನು ಇನ್ನಿಲ್ಲದಂತೆ ಮಾಡಿದ ಬ್ಯಾಂಕ್ ವಿಲೀನ‌ ಪ್ರಕ್ರಿಯೆಯ ವಿರುದ್ದ ಮಾಡಿದ ಹೋರಾಟವೇನೋ ವ್ಯರ್ಥವಾಯ್ತು. ವಿಜಯಾ ಬ್ಯಾಂಕ್ ಇದ್ದಾಗಲೇ ಸ್ವಲ್ಪಅಸ್ಥೆ ವಹಿಸಿದ್ದರೆ ಬ್ಯಾಂಕ್ ಉಳಿಯುತ್ತಿತ್ತೇನೋ ! ಮೂಲ್ಕಿ ಸುಂದರರಾಮ ಶೆಟ್ಟರಿಂದ ವೈಭವದ ದಿನಗಳನ್ನು ಕಂಡ ವಿಜಯಾ ಬ್ಯಾಂಕಿನಲ್ಲಿ ಎಷ್ಟೊಂದು ಜನ ಪರಿಚಿತರು ಇದ್ದರು. ಮೂಲ್ಕಿಯವರೇಆಗಿದ್ದಕ್ಕೋ ಏನೋ… ನನ್ನಪ್ಪನ ಗೆಳೆಯರಲ್ಲಿ ಬಹುತೇಕರು ವಿಜಯಾ ಬ್ಯಾಂಕ್ ಸಿಬ್ಬಂದಿಗಳು. ನನ್ನ ತಲೆಮಾರಿನ ಯಾರೂ ಕೂಡಾ ನಾನು ವಿಜಯಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿಕೊಂಡಿದ್ದನ್ನು ನಾನುಕೇಳಿಲ್ಲ. ಆಗಲೇ ನಮಗೆ ಅಪಾಯ ಅರಿವಾಗಬೇಕಿತ್ತು.
ನನ್ನೂರಲ್ಲಿ ಹುಟ್ಟಿದ ಬ್ಯಾಂಕ್ ನಲ್ಲಿ ನನ್ನೂರಿನ ಯುವಕರಿಗೆ ಕೆಲಸ ವಂಚಿಸಿ, ಪರ ಬಾಷಿಕರಿಗೆ ಉದ್ಯೋಗ ನೀಡಿದಾಗಲೇ ವಿಜಯಾ ಬ್ಯಾಂಕ್ ಅವನತಿ ಪರ್ವ ಪ್ರಾರಂಭವಾಗಿತ್ತು. ಇವತ್ತು ವಿಜಯಾ ಬ್ಯಾಂಕ್ಉದ್ಯೋಗಿಗಳೆಲ್ಲರೂ ಕನ್ನಡಿಗರಾಗಿದ್ದರೆ ವಿಲೀನ ಪ್ರಕ್ರಿಯೆಗೆ ಉದ್ಯೋಗಿಗಳ ಪ್ರತಿಕ್ರಿಯೆ ಹೇಗಿರುತ್ತಿತ್ತು ?
ವಿಜಯಾ ಬ್ಯಾಂಕನ್ನೇನೋ ಕಳೆದುಕೊಂಡೆವು. ಕನ್ನಡಿಗರ ಉಳಿದ ಬ್ಯಾಂಕುಗಳನ್ನಾದರೂ ರಕ್ಷಿಸಬೇಕಿದೆ. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಪ್ರಾತಿನಿದ್ಯ ಸಿಗಬೇಕಿದೆ. ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆಅವಕಾಶ ನೀಡಬೇಕಿದೆ.
ಸದ್ಯ, ಕನ್ನಡಿಗರೆಲ್ಲರೂ ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಚಳುವಳಿಯಲ್ಲಿ ಭಾಗಿಯಾಗಬೇಕಿದೆ.

ಎಂ.ಎಸ್.ಶ್ರೀ ಹರ್ಷ ಎನ್ನುವವರು ಇದಕ್ಕೆ ಸಹಮತ ಹೊಂದಿಲ್ಲ.

ಇದು ಪ್ರಾಕ್ಟಿಕಲ್ ಅಲ್ಲ. ಅಭಿವೃದ್ಧಿ ಆದ ಕಡೆ ವಲಸೆ ಆಗಿಯೇ ಆಗುತ್ತದೆ. ಇಂತಹ ಹೋರಾಟಗಳಿಂದ ಏನೂ ಪ್ರಯೋಜನವಿಲ್ಲ. ನನ್ನ ಮಾತಿನಲ್ಲಿ ನಂಬುಗೆ ಇಲ್ಲದಿದ್ದರೆ ಪ್ರಯತ್ನ ಮಾಡಿ ನೋಡಿ.

#ಅಭಿವೃದ್ಧಿ ಯ ವಿರುದ್ಧ ದನಿ ಎತ್ತದ ಇಂತಹ ಹೋರಾಟಗಳು ಕ್ಷಣಿಕ ಆರಾಮು ನೀಡುವ ಪೇನ್ ಕಿಲ್ಲರ್ ಗಳು ಅಷ್ಟೆ.

This is an #impractical movement ..

 

ಮಂಗಳೂರಿನ ಹೋರಾಟಗಾರ ಮುನೀರ್ ಕಾಟಿಪಳ್ಳ ಇದನ್ನು ಬೆಂಬಲಿಸುತ್ತಾರಾದರೂ, ಕೆಲವು ಎಚ್ಚರಿಕೆಯ ಮಾತುಗಳನ್ನೂ ಹೇಳುತ್ತಾರೆ.

ಉದ್ಯೋಗ ಸೃಷ್ಟಿಯ ಆಮಿಷವನ್ನು ಒಡ್ಡಿ ತುಳುನಾಡಿನ ಚಿನ್ನದಂತಹ ಭೂಮಿ, ನೇತ್ರಾವತಿಯ ಅಮೃತದಂತಹ ನೀರನ್ನು ಪಡೆದು ಸ್ಥಾಪನೆಯಾದ mrpl ಉದ್ಯೋಗ ಸೃಷ್ಟಿಸಿದ್ದು ಅಷ್ಟರಲ್ಲೇ ಇದೆ. ನಾಲ್ಕುಸಾವಿರ ಎಕರೆ ಭೂಮಿ, ಲಕ್ಷಾಂತರ ಕೋಟಿ ಹಣ ಹೂಡಿಯೂ ಸೃಷ್ಟಿಯಾಗಿರುವ ಉದ್ಯೋಗ ಎರಡು ಸಾವಿರಕ್ಕೂ ಕಡಿಮೆ. ಆ ಎರಡು ಸಾವಿರದಲ್ಲಿ ಕನ್ನಡಿಗರ ಸಂಖ್ಯೆ ಶೇಕಡಾ 25 ರಷ್ಟೂ ಇಲ್ಲ. ತುಳುವರನ್ನುಹುಡುಕಬೇಕಷ್ಟೆ. ಉದ್ಯೋಗ ಸಿಕ್ಕವರಲ್ಲಿ ಬಹುತೇಕರು ಭೂಮಿ ಕೊಟ್ಟ ಕಾರಣಕ್ಕೆ ಪ್ರತಿಯಾಗಿ ಪಡೆದುಕೊಂಡದ್ದೇ ಹೆಚ್ಚು. ಅಂತಹ mrpl ತಿಂಗಳ ಹಿಂದೆ 150 ಅಪ್ರೆಂಟಿಸ್ ಗಳನ್ನು ನೇಮಕಾತಿಮಾಡಿಕೊಂಡಿತು. ಆ 150 ರಲ್ಲಿ ತುಳುವರು ಬಿಡಿ, ಕನ್ನಡಿಗರು ಒಬ್ಬರೂ ಇಲ್ಲವಂತೆ. ಇದು ಅತ್ಯಂತ ಕಳವಳಕಾರಿ ಸಂಗತಿ.

ಈ ಅನ್ಯಾಯ, ತಾರತಮ್ಯ ಕೊನೆಯಾಗಲೇ ಬೇಕು. ನಮ್ಮ ನೆಲ, ಜಲವನ್ನು ಬಳಸಿ ಸ್ಥಾಪನೆಯಾಗುವ ಕೈಗಾರಿಕೆ, ಉದ್ದಿಮೆ, ವ್ಯವಹಾರಗಳು ಉದ್ಯೋಗವನ್ನು ಸೃಷ್ಟಿಸಬೇಕು, ಸ್ಥಳೀಯರಿಗೆ ಅದರಲ್ಲಿಆದ್ಯತೆಯಲ್ಲಿ ಉದ್ಯೋಗ ಸಿಗಲೇಬೇಕು. ಅದಿಲ್ಲದಿದ್ದರೆ ಎದ್ದು ಹೊರ ನಡೆಯಿರಿ ಅನ್ನಬೇಕು.

(ಕರ್ನಾಟಕ ರಣಧೀರ ಪಡೆ ಹಮ್ಮಿಕೊಂಡಿರುವ ಕನ್ನಡಿಗರಿಗೆ ಉದ್ಯೋಗ ಕೊಡಿ ಟ್ವಿಟ್ಟರ್, ಫೇಸ್ ಬುಕ್ ಅಭಿಯಾನಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಅಂದಾಭಿಮಾನವೋ, ಪರ ರಾಜ್ಯದವರ ಕುರಿತುಅಸಹನೆಯೋ ಆಗಬಾರದು. ಹೊರ ರಾಜ್ಯದವರೂ ಇರಲಿ. ಕನ್ನಡಿಗರಿಗೆ, ಸ್ಥಳೀಯರಿಗೆ ಆದ್ಯತೆಯಲ್ಲಿ ಅವಕಾಶ ಸಿಗಲಿ ಎಂಬುದು ನನ್ನ ನಿಲುವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಇಡೀದೇಶದಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸ ಸರಕಾರದ ಆದ್ಯತೆ ಆಗಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ದತಿ ರದ್ದಾಗಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಭದ್ರತೆಯ ಕಾನೂನುಗಳುಜಾರಿಯಾಗಬೇಕು. ಒಟ್ಟಾರೆ ಹೋರಾಟ ನಿರುದ್ಯೋಗ, ಅರೆ ಉದ್ಯೋಗದ ವಿರುದ್ದ, ಸ್ಥಳೀಯರಿಗೆ ಆದ್ಯತೆ ಎಂದಾಗಬೇಕು)

#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೆ_ಸಿಗಲಿ
#karnatakaJobsForKannadigas

 

ಪ್ರದೀಪ್ ತೊರೆನೂರು ಎನ್ನುವವರೂ ಸಹಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಬೆಂಗ್ಳೂರಿನಲ್ಲಿ ಒಂದು ಸುತ್ತು ತಿರುಗಾಡುತ್ತಾ ನೋಡಿದರೆ ಹಲವಾರು ಉದ್ಯಮಗಳು ಹಾಗೂ ಕೆಲಸ ಮಾಡುವ ಜನ ಕನ್ನಡೇತರರು ಕಾಣಿಸುತ್ತಾರೆ … ಮತ್ತೊಂದೆಡೆ ಹಲವಾರು ಕನ್ನಡಿಗರು ಕೆಲಸ ಸಿಗದೆ ಒದ್ದಾಡುತ್ತಿದ್ದಾರೆ …

ಸ್ವತಂತ್ರ ನಂತರ ಕೇವಲ ಕೇಂದ್ರ ಸರ್ಕಾರ ಕಚೇರಿ ಹೆಚ್ ಎ ಎಲ್ , ಬೆಮ್‌ಲ್ , ಮುಂತಾದ ಕಡೆ ತಮ್ಮ ಬೇರು ಗಟ್ಟಿ ಮಾಡಿಕೊಂಡು ಅನ್ಯ ಭಾಷಿಕರು ಕರ್ನಾಟಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು , ಅದುಕ್ರಮೇಣ ಮಾಹಿತಿ ತಂತ್ರಜಾನ ಕಾರ್ಖಾನೆಗಳಲ್ಲಿ ಅನ್ಯ ರಾಜ್ಯದವರು ತಮ್ಮ ಹಿಡಿತ ಇಟ್ಟುಕೊಂಡು ಕನ್ನಡಿಗರು ಏನೇ ಓದಿ , ಒಳ್ಳೆಯ ಅನುಭವ ಇದ್ದರೂ ಅವರನ್ನು ಕಡೆಗಣಿಸಿದರು ..

ಈ ದೊಡ್ಡ ಮಟ್ಟದ ಕಾರ್ಖನಗಳಲ್ಲಿ ಇದ್ದ ಅನ್ಯ ಭಾಷಿಕರ ಜನ ಇವತ್ತು ನನಗೆ ಆಟೋ ಗಳಲ್ಲಿ , ಮಾಲ್ ಗಳಲ್ಲಿ , ಚಿಕ್ಕ ಚಿಕ್ಕ ಉದ್ಯಮಗಳಲ್ಲಿ ನಿಧಾನವಾಗಿ ತಮ್ಮ ಬೇರು ಗಟ್ಟಿ ಮಾಡಿಕೊಳ್ಳುತಿರುವುದುಕನ್ನಡಿಗರಿಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುವ ಅವಕಾಶಗಳು ಕಡಿಮೆಯಾಗಳಿದ್ದು, ಬೆಂಗಳೂರು ನಿಧಾನವಾಗಿ ಅನ್ಯ ರಾಜ್ಯದವರ ತೆಕ್ಕೆಗೆ ಬೀಳುವುದು ಶತ ಸಿದ್ದ !

ಮೊದಲನೆಯದಾಗಿ ಕರ್ನಾಟಕ ಸರ್ಕಾರ ರಾಜ್ಯದ ಒಟ್ಟೂ ನಿರುದ್ಯೋಗಿಗಳ ಅಂಕಿ ಅಂಶ ಬಗ್ಗೆ ಜನರಿಗೆ ತಿಳಿಸಬೇಕು ! ಪ್ರತಿಯೊಂದು ಉದ್ಯಮದಲ್ಲಿ ಸ್ಥಳೀಯರು ಇರುವ ಅಂಕಿ ಅಂಶ ಬಯಲಾಗಬೇಕು ! ಇಂದು ಕಸದ ಕಾಂಟ್ರ್ಯಾಕ್ಟ್ ಗಳಿಂದ ಯಾವ ಯಾವ ಕಾಂಟ್ರ್ಯಾಕ್ಟ್ ಗಳು ಕನ್ನಡಿಗರಿಗೆ ಸಿಕ್ಕಿದೆ , ಅನ್ಯ ಭಾಷಿಕರಿಗೆ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಕರ್ನಾಟಕ ಸರ್ಕಾರ ಬಹಿರಂಗ ಪಡಿಸಲಿ

ಇಲ್ಲಿ ಅನ್ಯಭಾಷಿಕರ ಸಂಖ್ಯೆ ಆಯಾ ರಾಜ್ಯದ ಆಧಾರದ ಮೇಲೆ ವಿಂಗಡಣೆಯಾಗಿ ಆಯಾ ರಾಜ್ಯದ ಉದ್ಯೋಗ ಸೃಷ್ಟಿಸುವಲ್ಲಿ ಆಯಾ ರಾಜ್ಯದ ವೈಪಲ್ಯ ಎತ್ತಿ ತೋರಿಸಬೇಕು !

#Nation_First ಎಂದರೆ ನಮ್ಮ ಕೆಲಸ ಉದ್ಯಮ ಹಾಗೂ ಸ್ವಾಭಿಮವನ್ನು ಅನ್ಯ ರಾಜ್ಯದವರಿಗೆ ಕೊಟ್ಟು ನಾವು ಬಿಕಾರಿ ಯಾಗುವುದಲ್ಲ , ನಾವು ನಮ್ಮ ಹಕ್ಕನ್ನು ಪಡೆದು , ಸ್ಥಳೀಯರಾಗಿ ಕೆಲಸ ಪಡೆದು ,ಒಳ್ಳೆಯ ವ್ಯಾಪಾರ ವಹಿವಾಟು ಮಾಡಿ ಭಾರತ ದೇಶದ ಅಭಿವೃದ್ದಿಗಾಗಿ ಶ್ರಮಿಸುವುದು !

ಸ್ಥಳೀಯರಿಗೆ ಕೆಲ್ಸ ಸಿಕ್ಕ ಮೆಳ್ಳೆ ಉಳಿದ ಕೆಲಸಗಳು ಅನ್ಯ ರಾಜ್ಯದವರು ಪಡೆಯಬಹುದು !

ಇದು ಆಗದೆ ಇದ್ದಲ್ಲಿ ಕನ್ನಡಿಗರು ತಮ್ಮದೇ ನಾಡಿನಲ್ಲಿ ಕೆಲಸ ಇಲ್ಲದೆ ಪರದಾಡುವ ದಿನ ಬರುವುದು ಶತಸಿದ್ದ !

#KarnatakaJobsForKannadigas
#ಕರ್ನಾಟಕದ_ಉದ್ಯೋಗ_ಕನ್ನಡಿಗರಿಗೇ_ಸಿಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...