Homeಮುಖಪುಟ#KarnatakaGovtScams ಟಿಟ್ವರ್‌‌ನಲ್ಲಿ ಟ್ರೆಂಡಿಂಗ್‌

#KarnatakaGovtScams ಟಿಟ್ವರ್‌‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

#KarnatakaGovtScams, #BJPಸರಕಾರವಜಾಗೊಳಿಸಿ ಹ್ಯಾಷ್‌ಟ್ಯಾಗ್‌ಗಳು ಸೋಮವಾರ ತಡರಾತ್ರಿಯವರೆಗೂ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದ್ದು, ಹಲವಾರು ಜನ ಟ್ವೀಟ್‌ ಮಾಡಿದ್ದಾರೆ.

ರಾಜ್ಯದಲ್ಲಿ ಒಂದಲ್ಲ ಒಂದು ಹಗರಣಗಳು ಬಯಲಿಗೆ ಬರುತ್ತಿವೆ. ಇದರ ನಡುವೆ ಕೋಮು ಪ್ರಚೋದನೆಯ ಘಟನೆಗಳು ನಡೆಯುತ್ತಿವೆ. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಕೋಮುದ್ವೇಷ ಹರಡಲಾಗುತ್ತಿದೆ ಎಂಬ ಆರೋಪಗಳ ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶೇ. 40 ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಕೆಲವೇ ದಿನಗಳಲ್ಲಿ ಪಿಎಸ್‌ಐ ಪರೀಕ್ಷೆ ಹಗರಣ ಮುನ್ನೆಲೆಗೆ ಬಂದಿತು. ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಭವಿಷ್ಯದ ಕುರಿತು ಕನಸು ಕಾಣುತ್ತಿದ್ದ ಅಭ್ಯರ್ಥಿಗಳು ಕಾನೂನು ಸಮರಕ್ಕೆ ಇಳಿದಿದ್ದಾರೆ.

ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌, “2,500 ಕೋಟಿ ರೂ. ಕೊಟ್ಟರೆ ಮುಖ್ಯಮಂತ್ರಿ ಮಾಡಿಸುತ್ತೇವೆ ಎಂದು ಕೆಲವರು ನನ್ನ ಬಳಿ ಬಂದಿದ್ದರು” ಎಂದು ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇದೆಲ್ಲದರಿಂದ ಸರ್ಕಾರ ಪೇಚಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ #KarnatakaGovtScams #BJPಸರಕಾರವಜಾಗೊಳಿಸಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

ಸರ್ಕಾರದ ಭ್ರಷ್ಟಾಚಾರವನ್ನು ಪ್ರಶ್ನಿಸಿರುವ ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌, “ಬಿಟ್‌ಕಾಯಿನ್‌, ಮೊಟ್ಟೆ ಹಗರಣ, 40% ಕಮಿಷನ್‌ ಹಗರಣ, ಪಿಎಸ್‌ಐ ಹಗರಣ, ಸಹಾಯಕ ಹುದ್ದೆ ಪರೀಕ್ಷೆ ಹಗರಣ, ಜೆಇಇ ಹಗರಣ, ಬಿಬಿಎಂಪಿ ಹಗರಣ, ಶಾಲಾ ಸಮವಸ್ತ್ರ ಹಗರಣ, ಮೆಡಿಕಲ್‌ ಸೀಟ್ ಹಗರಣ” ಎಂದು ಪಟ್ಟಿ ಮಾಡಿದ್ದು, ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಎಸ್‌ಡಿಪಿಐನ ಮತ್ತೊಬ್ಬ ನಾಯಕರಾದ ಬಿ.ಆರ್‌.ಭಾಸ್ಕರ್‌ಪ್ರಸಾದ್‌ ಟ್ವೀಟ್‌ ಮಾಡಿ, “ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.

ಮಲ್ಪೆ ಬೀಚ್‌ನಲ್ಲಿ ನಿರ್ಮಿಸಲಾಗಿದ್ದ ತೇಲು ಮಂಚ ಮುರಿದುಬಿದ್ದದ್ದನ್ನು 40% ಕಮಿಷನ್‌ ಪ್ರಕರಣಕ್ಕೆ ಲಿಂಕ್‌ ಮಾಡಿ ಅನೇಕರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ: ಪತ್ರಿಕಾಗೋಷ್ಠಿಯಲ್ಲೇ ‘ಪಬ್ಲಿಕ್ ಟಿವಿ’ ಪತ್ರಕರ್ತನಿಗೆ ಡಿಸಿಪಿ ಕ್ಲಾಸ್!

“#KarnatakaGovtScamsಗೆ ಯಾವುದೇ ಒಂದು ಪಕ್ಷ ಹೊಣೆಯಲ್ಲ. ಇದು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳ ಸಾಮೂಹಿಕ ವೈಫಲ್ಯ. ಇದು ಹಿಂದೆ ಸಂಭವಿಸಿದೆ, ಈಗ ನಡೆಯುತ್ತಿದೆ ಮತ್ತು ಭವಿಷ್ಯದಲ್ಲಿ ಮುಂದುವರಿಯುತ್ತದೆ (ನೀವು ಎಚ್ಚರಗೊಳ್ಳದಿದ್ದರೆ)” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...