Homeಚಳವಳಿಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

- Advertisement -
- Advertisement -

ಹಲವು ಕನ್ನಡಪರ ಸಂಘಟನೆಗಳು ಸೇರಿ ಮೇ 3ರಂದು KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಮೂಲಕ ಗಮನಸೆಳೆದಿದ್ದರು. ಈ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದರು. ಅದರ ಮುಂದುವರಿದ ಭಾಗವಾಗಿ “ಕರ್ನಾಟಕ ರಣಧೀರ ಪಡೆ, ಕರುನಾಡ ಸೇವಕರು ಮತ್ತು ಇತರ ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರಿನ ಮೈಸೂರು ಬ್ಯಾಂಕು ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಹೋರಾಟವನ್ನು ಹಂತ ಹಂತವಾಗಿ ಗಟ್ಟಿಗೊಳಿಸಲು ತೀರ್ಮಾನಿಸಿದ್ದಾರೆ.

ಆ ಮೂಲಕ ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕಟ್ಟುನಿಟ್ಟಾಗಿ ಕನ್ನಡಿಗರಿಗೆ ಮೀಸಲಾತಿ ನೀಡಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಮತ್ತು ಈ ಬಗ್ಗೆ ಹಕ್ಕೊತ್ತಾಯ ಮಂಡಿಸಲು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿದ್ದಾರೆ.

ಹರೀಶ್ ಕುಮಾರ್ ಬಿ

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ. ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ ಎಂದು ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಹರೀಶ್ ಕುಮಾರ್.ಬಿ ಅಭಿಪ್ರಾಯಪಟ್ಟಿದ್ದಾರೆ.

 

ರೂಪೇಶ್ ರಾಜಣ್ಣ

ಎಚ್ಚೆತ್ತ ಕನ್ನಡಿಗರು ಇದೇ ತಿಂಗಳ 3ನೇ ತಾರೀಖಿನಂದು ನಡೆಸಿದ #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಾ ನಮ್ಮ ಮುಖ್ಯಮಂತ್ರಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ಆ ನಂತರ ನಾವು ಸಮಸ್ತ ಕನ್ನಡಿಗರ ಪರವಾಗಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದ್ದೆವು. ನಮ್ಮ ನೆಲದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ನಮ್ಮವರಿಗೇ ಸಿಗಬೇಕು ಎಂದು ಸ್ಪಷ್ಟವಾಗಿ ಕೇಳುವ ನಿಟ್ಟಿನಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ವಿಧಾನಸೌಧದವರೆಗೆ ಮಾನವ ಸರಪಳಿ ರಚಿಸುತ್ತಾ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೆನಪಿಸಬಯಸುತ್ತೇವೆ ಎಂದು ಕರುನಾಡ ಸೇವಕರು ರಾಜ್ಯಾಧ್ಯಕ್ಷರಾದ ರೂಪೇಶ್ ರಾಜಣ್ಣ ಹೇಳಿದ್ದಾರೆ.

ಈ ಹೋರಾಟದ ಪ್ರಮುಖವಾದ ಹಕ್ಕೊತ್ತಾಯಗಳು ಕೆಳಗಿನಂತಿವೆ.
1.ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಸರೋಜಿನಿ ಮಹಿಷಿ ವರದಿ ಅನ್ವಯ ’ಸಿ’ ಮತ್ತು ’ಡಿ’ ವರ್ಗದ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಮತ್ತು ಉನ್ನತ ಹುದ್ದೆಗಳಲ್ಲಿ ಕನಿಷ್ಠ 80%ರಷ್ಟು ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.

2.ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.

3.ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು.

4.ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.

5.ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.

6.ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಇದನ್ನು ಓದಿ: ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ರಮಾನಂದ್ ಅಂಕೋಲ

ಉದ್ಯೋಗದ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಲು ಜನಜಾಗೃತಿ ಆಗಬೇಕಾಗಿರುವುದು ಸಹ ಇಂದಿನ ತುರ್ತು ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಕ್ರಿಯಾತ್ಮಕವಾಗಿ ಏನಾದರೂ ಮಾಡಲು ಅವರಿಗೆ ನೀತಿಸಂಹಿತೆ ಮುಗಿಯುವ ಮೇ23ರ ನಂತರವೂ ಒಂದೆರಡು ವಾರ ಸಮಯ ನೀಡಲು ನಾವು ಸಿದ್ದರಿದ್ದೇವೆ. ಆಗಲೂ ಸಹ ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಅವರು ಮುಂದಾಗದಿದ್ದರೆ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಕರ್ನಾಟಕ ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲಾ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...