Homeಚಳವಳಿಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

- Advertisement -
- Advertisement -

ಹಲವು ಕನ್ನಡಪರ ಸಂಘಟನೆಗಳು ಸೇರಿ ಮೇ 3ರಂದು KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಮೂಲಕ ಗಮನಸೆಳೆದಿದ್ದರು. ಈ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದರು. ಅದರ ಮುಂದುವರಿದ ಭಾಗವಾಗಿ “ಕರ್ನಾಟಕ ರಣಧೀರ ಪಡೆ, ಕರುನಾಡ ಸೇವಕರು ಮತ್ತು ಇತರ ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರಿನ ಮೈಸೂರು ಬ್ಯಾಂಕು ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಹೋರಾಟವನ್ನು ಹಂತ ಹಂತವಾಗಿ ಗಟ್ಟಿಗೊಳಿಸಲು ತೀರ್ಮಾನಿಸಿದ್ದಾರೆ.

ಆ ಮೂಲಕ ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕಟ್ಟುನಿಟ್ಟಾಗಿ ಕನ್ನಡಿಗರಿಗೆ ಮೀಸಲಾತಿ ನೀಡಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಮತ್ತು ಈ ಬಗ್ಗೆ ಹಕ್ಕೊತ್ತಾಯ ಮಂಡಿಸಲು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿದ್ದಾರೆ.

ಹರೀಶ್ ಕುಮಾರ್ ಬಿ

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ. ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ ಎಂದು ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಹರೀಶ್ ಕುಮಾರ್.ಬಿ ಅಭಿಪ್ರಾಯಪಟ್ಟಿದ್ದಾರೆ.

 

ರೂಪೇಶ್ ರಾಜಣ್ಣ

ಎಚ್ಚೆತ್ತ ಕನ್ನಡಿಗರು ಇದೇ ತಿಂಗಳ 3ನೇ ತಾರೀಖಿನಂದು ನಡೆಸಿದ #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಾ ನಮ್ಮ ಮುಖ್ಯಮಂತ್ರಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ಆ ನಂತರ ನಾವು ಸಮಸ್ತ ಕನ್ನಡಿಗರ ಪರವಾಗಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದ್ದೆವು. ನಮ್ಮ ನೆಲದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ನಮ್ಮವರಿಗೇ ಸಿಗಬೇಕು ಎಂದು ಸ್ಪಷ್ಟವಾಗಿ ಕೇಳುವ ನಿಟ್ಟಿನಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ವಿಧಾನಸೌಧದವರೆಗೆ ಮಾನವ ಸರಪಳಿ ರಚಿಸುತ್ತಾ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೆನಪಿಸಬಯಸುತ್ತೇವೆ ಎಂದು ಕರುನಾಡ ಸೇವಕರು ರಾಜ್ಯಾಧ್ಯಕ್ಷರಾದ ರೂಪೇಶ್ ರಾಜಣ್ಣ ಹೇಳಿದ್ದಾರೆ.

ಈ ಹೋರಾಟದ ಪ್ರಮುಖವಾದ ಹಕ್ಕೊತ್ತಾಯಗಳು ಕೆಳಗಿನಂತಿವೆ.
1.ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಸರೋಜಿನಿ ಮಹಿಷಿ ವರದಿ ಅನ್ವಯ ’ಸಿ’ ಮತ್ತು ’ಡಿ’ ವರ್ಗದ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಮತ್ತು ಉನ್ನತ ಹುದ್ದೆಗಳಲ್ಲಿ ಕನಿಷ್ಠ 80%ರಷ್ಟು ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.

2.ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.

3.ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು.

4.ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.

5.ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.

6.ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಇದನ್ನು ಓದಿ: ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ರಮಾನಂದ್ ಅಂಕೋಲ

ಉದ್ಯೋಗದ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಲು ಜನಜಾಗೃತಿ ಆಗಬೇಕಾಗಿರುವುದು ಸಹ ಇಂದಿನ ತುರ್ತು ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಕ್ರಿಯಾತ್ಮಕವಾಗಿ ಏನಾದರೂ ಮಾಡಲು ಅವರಿಗೆ ನೀತಿಸಂಹಿತೆ ಮುಗಿಯುವ ಮೇ23ರ ನಂತರವೂ ಒಂದೆರಡು ವಾರ ಸಮಯ ನೀಡಲು ನಾವು ಸಿದ್ದರಿದ್ದೇವೆ. ಆಗಲೂ ಸಹ ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಅವರು ಮುಂದಾಗದಿದ್ದರೆ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಕರ್ನಾಟಕ ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲಾ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...