Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...